• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?

Tulunadu News Posted On May 19, 2025
0


0
Shares
  • Share On Facebook
  • Tweet It

ಸಂಸದ ಅಸಾದುದ್ದೀನ್ ಓವೈಸಿ ಭಾರತದಿಂದ ವಿದೇಶದ ವಿವಿಧ ರಾಷ್ಟ್ರಗಳಿಗೆ ತೆರಳುವ ಏಳು ನಿಯೋಗಗಳ ಪೈಕಿ ಒಂದರಲ್ಲಿ ಸ್ಥಾನ ಪಡೆದಿದ್ದಾರೆ. ಕೇಂದ್ರ ಸರಕಾರ ಸರ್ವ ಪಕ್ಷಗಳನ್ನು ಸೇರಿಸಿ ಏಳು ನಿಯೋಗಗಳನ್ನು ರಚಿಸಿದೆ. ಅದರಲ್ಲಿ ಓವೈಸಿಗೂ ಸ್ಥಾನ ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹೈದ್ರಾಬಾದ್ ಸಂಸದ ಓವೈಸಿ, ನಾನು ನನ್ನ ಪಕ್ಷ ಎಐಎಂಐಎಂ ಪ್ರತಿನಿಧಿಯಾಗಿ ತೆರಳುತ್ತಿಲ್ಲ. ನಾನು ಭಾರತ ದೇಶವನ್ನು ಪ್ರತಿನಿಧಿಸಲು ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.

ನಾನು ಪಾಕಿಸ್ತಾನದ ಷಡ್ಯಂತ್ರವನ್ನು ಜಗತ್ತಿನ ಬೇರೆ ಬೇರೆ ರಾಷ್ಟ್ರಗಳ ಮುಂದೆ ಬಿಚ್ಚಿಡಲು ಈ ಅವಕಾಶವನ್ನು ಬಳಸಿಕೊಳ್ಳುತ್ತಿದ್ದೇನೆ. ಭಾರತ ಇಲ್ಲಿಯ ತನಕ ಪಾಕ್ ಪ್ರಾಯೋಜಿತ ಭಯೋತ್ಪಾದನೆಯ ಕೃತ್ಯದಿಂದ ಸಾಕಷ್ಟು ತೊಂದರೆಯನ್ನು ಅನುಭವಿಸಿದೆ. ಇದೆಲ್ಲವೂ ಪಾಕಿಸ್ತಾನದ ಮಾಜಿ ಅಧ್ಯಕ್ಷ ಮೊಹಮ್ಮದ್ ಜಿಯಾ ಉಲ್ ಹಕ್ ಸಮಯದಿಂದ ಆರಂಭವಾಗಿತ್ತು. ಇದು ಜಗತ್ತಿಗೆ ತಿಳಿಯಬೇಕು. ಅದರೊಂದಿಗೆ ಕಂದಹಾರ್ ವಿಮಾನ ಅಪಹರಣ, 26/11 ಮುಂಬೈ ದಾಳಿ, 2001 ಪಾರ್ಲಿಮೆಂಟ್ ದಾಳಿ, ಉರಿ ದಾಳಿ, ಪಠಾನ್ ಕೋಟ್ ದಾಳಿ, ರೇಸಿ ಮತ್ತು ಪಾಲ್ಗಾಂಮ್ ನಲ್ಲಿ ಪ್ರವಾಸಿಗರ ಹತ್ಯೆಗಳು, ಹೀಗೆ ಪಾಕಿಸ್ತಾನದ ಉಗ್ರಗಾಮಿ ಸಂಘಟನೆಗಳ ಮುಖವಾಡಗಳನ್ನು ಪ್ರಪಂಚದ ಮುಂದೆ ತೆರೆದಿಡುವ ಅವಶ್ಯಕತೆ ಇದೆ ಎಂದು ಓವೈಸಿ ಹೇಳಿದ್ದಾರೆ.

ಇನ್ನು ಪಾಕಿಸ್ತಾನ ತನ್ನನ್ನು ತಾನು ಇಸ್ಲಾಂ ರಾಷ್ಟ್ರ ಎಂದು ಬಿಂಬಿಸಲು ವ್ಯರ್ಥ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದ ಓವೈಸಿ ಇದು ಶುದ್ಧ ಸೋಗಲಾಡಿತನ ಎಂದು ಹೇಳಿದ್ದಾರೆ. ನಾನು ಏಳು ನಿಯೋಗದಲ್ಲಿ ಯಾವ ನಿಯೋಗದ ಭಾಗವೆಂದಾಗಲಿ, ನಮ್ಮ ನಿಯೋಗದ ಮುಖ್ಯಸ್ಥರು ಯಾರು ಎಂದು ಯೋಚಿಸಲು ಹೋಗಿಲ್ಲ. ನಾವು ಪ್ರಪಂಚದ ಎದುರು ನಮ್ಮ ಕಥೆಯನ್ನು ಹೇಳಲೇಬೇಕಿದೆ. ಪಾಕಿಸ್ತಾನ ತನ್ನನ್ನು ತಾನು ಇಸ್ಲಾಮಿಕ್ ದೇಶ ಎಂದು ಬಿಂಬಿಸಿಕೊಳ್ಳುವ ಹತಾಶ ಪ್ರಯತ್ನ ಮಾಡುತ್ತಿದೆ. ಹಾಗೆ ನೋಡಿದರೆ ಭಾರತದಲ್ಲಿ ಸುಮಾರು 20 ಕೋಟಿ ಮುಸ್ಲಿಮರಿದ್ದಾರೆ. ಇದೆಲ್ಲವನ್ನು ನಾವು ಜಗತ್ತಿಗೆ ತಿಳಿಸಬೇಕಿದೆ ಎಂದು ಓವೈಸಿ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search