• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?

Tulunadu News Posted On May 19, 2025
0


0
Shares
  • Share On Facebook
  • Tweet It

ಸಂಸದ ಅಸಾದುದ್ದೀನ್ ಓವೈಸಿ ಭಾರತದಿಂದ ವಿದೇಶದ ವಿವಿಧ ರಾಷ್ಟ್ರಗಳಿಗೆ ತೆರಳುವ ಏಳು ನಿಯೋಗಗಳ ಪೈಕಿ ಒಂದರಲ್ಲಿ ಸ್ಥಾನ ಪಡೆದಿದ್ದಾರೆ. ಕೇಂದ್ರ ಸರಕಾರ ಸರ್ವ ಪಕ್ಷಗಳನ್ನು ಸೇರಿಸಿ ಏಳು ನಿಯೋಗಗಳನ್ನು ರಚಿಸಿದೆ. ಅದರಲ್ಲಿ ಓವೈಸಿಗೂ ಸ್ಥಾನ ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹೈದ್ರಾಬಾದ್ ಸಂಸದ ಓವೈಸಿ, ನಾನು ನನ್ನ ಪಕ್ಷ ಎಐಎಂಐಎಂ ಪ್ರತಿನಿಧಿಯಾಗಿ ತೆರಳುತ್ತಿಲ್ಲ. ನಾನು ಭಾರತ ದೇಶವನ್ನು ಪ್ರತಿನಿಧಿಸಲು ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.

ನಾನು ಪಾಕಿಸ್ತಾನದ ಷಡ್ಯಂತ್ರವನ್ನು ಜಗತ್ತಿನ ಬೇರೆ ಬೇರೆ ರಾಷ್ಟ್ರಗಳ ಮುಂದೆ ಬಿಚ್ಚಿಡಲು ಈ ಅವಕಾಶವನ್ನು ಬಳಸಿಕೊಳ್ಳುತ್ತಿದ್ದೇನೆ. ಭಾರತ ಇಲ್ಲಿಯ ತನಕ ಪಾಕ್ ಪ್ರಾಯೋಜಿತ ಭಯೋತ್ಪಾದನೆಯ ಕೃತ್ಯದಿಂದ ಸಾಕಷ್ಟು ತೊಂದರೆಯನ್ನು ಅನುಭವಿಸಿದೆ. ಇದೆಲ್ಲವೂ ಪಾಕಿಸ್ತಾನದ ಮಾಜಿ ಅಧ್ಯಕ್ಷ ಮೊಹಮ್ಮದ್ ಜಿಯಾ ಉಲ್ ಹಕ್ ಸಮಯದಿಂದ ಆರಂಭವಾಗಿತ್ತು. ಇದು ಜಗತ್ತಿಗೆ ತಿಳಿಯಬೇಕು. ಅದರೊಂದಿಗೆ ಕಂದಹಾರ್ ವಿಮಾನ ಅಪಹರಣ, 26/11 ಮುಂಬೈ ದಾಳಿ, 2001 ಪಾರ್ಲಿಮೆಂಟ್ ದಾಳಿ, ಉರಿ ದಾಳಿ, ಪಠಾನ್ ಕೋಟ್ ದಾಳಿ, ರೇಸಿ ಮತ್ತು ಪಾಲ್ಗಾಂಮ್ ನಲ್ಲಿ ಪ್ರವಾಸಿಗರ ಹತ್ಯೆಗಳು, ಹೀಗೆ ಪಾಕಿಸ್ತಾನದ ಉಗ್ರಗಾಮಿ ಸಂಘಟನೆಗಳ ಮುಖವಾಡಗಳನ್ನು ಪ್ರಪಂಚದ ಮುಂದೆ ತೆರೆದಿಡುವ ಅವಶ್ಯಕತೆ ಇದೆ ಎಂದು ಓವೈಸಿ ಹೇಳಿದ್ದಾರೆ.

ಇನ್ನು ಪಾಕಿಸ್ತಾನ ತನ್ನನ್ನು ತಾನು ಇಸ್ಲಾಂ ರಾಷ್ಟ್ರ ಎಂದು ಬಿಂಬಿಸಲು ವ್ಯರ್ಥ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದ ಓವೈಸಿ ಇದು ಶುದ್ಧ ಸೋಗಲಾಡಿತನ ಎಂದು ಹೇಳಿದ್ದಾರೆ. ನಾನು ಏಳು ನಿಯೋಗದಲ್ಲಿ ಯಾವ ನಿಯೋಗದ ಭಾಗವೆಂದಾಗಲಿ, ನಮ್ಮ ನಿಯೋಗದ ಮುಖ್ಯಸ್ಥರು ಯಾರು ಎಂದು ಯೋಚಿಸಲು ಹೋಗಿಲ್ಲ. ನಾವು ಪ್ರಪಂಚದ ಎದುರು ನಮ್ಮ ಕಥೆಯನ್ನು ಹೇಳಲೇಬೇಕಿದೆ. ಪಾಕಿಸ್ತಾನ ತನ್ನನ್ನು ತಾನು ಇಸ್ಲಾಮಿಕ್ ದೇಶ ಎಂದು ಬಿಂಬಿಸಿಕೊಳ್ಳುವ ಹತಾಶ ಪ್ರಯತ್ನ ಮಾಡುತ್ತಿದೆ. ಹಾಗೆ ನೋಡಿದರೆ ಭಾರತದಲ್ಲಿ ಸುಮಾರು 20 ಕೋಟಿ ಮುಸ್ಲಿಮರಿದ್ದಾರೆ. ಇದೆಲ್ಲವನ್ನು ನಾವು ಜಗತ್ತಿಗೆ ತಿಳಿಸಬೇಕಿದೆ ಎಂದು ಓವೈಸಿ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search