• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ – ಡಿಕೆಶಿ

Tulunadu News Posted On May 19, 2025
0


0
Shares
  • Share On Facebook
  • Tweet It

ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಮಳೆಯ ಅವಾಂತರ ಹೇಗಿದೆ ಎಂದರೆ ರಸ್ತೆಗಳೇ ನದಿಗಳಂತಾಗಿವೆ. ನೀರು ಮನೆ, ಕಟ್ಟಡಗಳ ಒಳಗೆ ನುಗ್ಗಿದೆ. ತಾತ್ಕಾಲಿಕ ಬೋಟ್ ವ್ಯವಸ್ಥೆ ಮಾಡಲಾಗಿದೆ. ವಾಹನಗಳು ಅರ್ಧದಷ್ಟು ಮುಳುಗಿದ ದೃಶ್ಯಗಳು ಅನೇಕ ಕಡೆ ಸಾಮಾನ್ಯವಾಗಿದೆ. ನೀರು ಸರಿಯಾಗಿ ಹರಿಯಲು ವ್ಯವಸ್ಥೆ ಇಲ್ಲದೆ ಜನ ಪರದಾಡುತ್ತಿದ್ದಾರೆ. ಇಷ್ಟಾಗಿಯೂ ಇದೇನೂ ಹೊಸದಲ್ಲ. ಇದಕ್ಕೆ ಶಾಶ್ವತ ಪರಿಹಾರ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಣ್ಣಗಿನ ಉತ್ತರ ನೀಡಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ ಕೆ ಶಿವಕುಮಾರ್ ಅವರು ಈ ಬಗ್ಗೆ ತಮ್ಮ ಸರಕಾರ ಸೂಕ್ತ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ. ನಾವು ಬೆಂಗಳೂರಿನ ಅಭಿವೃದ್ಧಿಗೆ ಬದ್ಧರಾಗಿದ್ದೇವೆ. ದಿನದ 24 ಗಂಟೆಯೂ ಈ ಬಗ್ಗೆ ಪರಿಹಾರ ಕಾರ್ಯಾಚರಣೆ ನಡೆಸಲಾಗುತ್ತದೆ. ಅದಕ್ಕಾಗಿ ಬಿಬಿಎಂಪಿ ವಾರ್ ರೂಂ ರಚಿಸಲಾಗಿದ್ದು, ವೈಯಕ್ತಿಕವಾಗಿ ಪರಿಶೀಲನೆ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.


ಬೆಂಗಳೂರಿನಲ್ಲಿ ಮಳೆಯಿಂದಾಗಿ ಆಗುತ್ತಿರುವ ತೊಂದರೆಗಳ ಬಗ್ಗೆ ಭಾರತೀಯ ಜನತಾ ಪಾರ್ಟಿ ಹಾಗೂ ಜಾತ್ಯಾತೀತ ಜನತಾದಳ ಮುಖಂಡರು ಸರಕಾರದ ವಿರುದ್ಧ ತೀವ್ರ ವಾಗ್ದಾಳಿಯನ್ನು ಮಾಡಿದ ನಂತರ ಡಿಕೆಶಿವಕುಮಾರ್ ತಮ್ಮ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಳೆಯ ನೀರು ಸಮರ್ಪಕವಾಗಿ ಹರಿದು ಹೋಗಲು ಮೂಲಭೂತ ಸೌಲಭ್ಯಗಳ ಕೊರತೆ ಮತ್ತು ಅತಿಕ್ರಮಣದಿಂದ ಆಗಿರುವ ತೊಂದರೆಗಳಿಂದ ಹೈರಾಣರಾಗಿರುವ ನಾಗರಿಕರ ಸ್ಥಿತಿಗತಿಗಳ ಬಗ್ಗೆ ಜನಸಾಮಾನ್ಯರ ಆಕ್ರೋಶ ಮತ್ತು ವಿಪಕ್ಷಗಳ ಮಾತಿನೇಟಿಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿಕೆಶಿ ” ಈಗ ಬೆಂಗಳೂರು ಅನುಭವಿಸುತ್ತಿರುವ ಸಂಕಷ್ಟ ಹೊಸದೇಲ್ಲ. ಈ ಸಮಸ್ಯೆಯನ್ನು ಹಿಂದಿನ ಆಡಳಿತ ಮತ್ತು ಸರಕಾರಗಳು ನಿರ್ಲಕ್ಷ್ಯ ವಹಿಸಿದ ಕಾರಣದಿಂದ ಈ ಪರಿಸ್ಥಿತಿ ಉದ್ಭವವಾಗಿದೆ. ಇದಕ್ಕೆ ನಾವು ಶಾಶ್ವತ ಪರಿಹಾರ ಹುಡುಕಿ ಸರಿಪಡಿಸುತ್ತೇವೆ” ಎಂದು ಭರವಸೆ ನೀಡಿದ್ದಾರೆ.


“ನನ್ನ ಸಹ ಬೆಂಗಳೂರಿಗರೇ, ನಾನು ನಿಮ್ಮೊಂದಿಗೆ ಒಬ್ಬನಾಗಿದ್ದೇನೆ. ನಾನು ನಿಮ್ಮ ಸಮಸ್ಯೆ ಮತ್ತು ಆಕ್ರೋಶವನ್ನು ಅರ್ಥ ಮಾಡಿಕೊಳ್ಳಬಲ್ಲೆ. ನಾನು ಇದನ್ನು ಪರಿಹರಿಸಲು ಪ್ರಯತ್ನಿಸುವೆ. ನಾನು ನಿಮ್ಮ ಜೊತೆ ನಿಲ್ಲುತ್ತೇನೆ” ಎಂದು ಹೇಳಿದ್ದಾರೆ.


ರಾಜ್ಯ ಸರಕಾರ ಪ್ರತಿ ಬಾರಿ ಇಂತಹ ಸಮಸ್ಯೆಯಾದಾಗ ಇದೇ ಮಾತನ್ನು ಹೇಳುತ್ತಾ ಬಂದಿರುವುದರಿಂದ ಜನರಿಗೂ ಅದೇ ರಾಗ, ಅದೇ ಹಾಡು ಅನಿಸಿದೆ. ಇನ್ನು ಹೆಚ್ಚಿನ ಬಡಾವಣೆಗಳು ಒತ್ತುವರಿಯಾಗಿ ನಿರ್ಮಾಣಗೊಂಡಿರುವುದರಿಂದ ಮಳೆಗಾಲದ ಸಂದರ್ಭದಲ್ಲಿ ಇದು ಸಹಜ ಪ್ರಕ್ರಿಯೆ ಎಂದು ಎಲ್ಲರೂ ಒಪ್ಪಿಕೊಂಡಂತೆ ಆಗಿದೆ. ಸಮಸ್ಯೆಯಾದಾಗ ಮಾಧ್ಯಮಗಳಲ್ಲಿ ಸ್ವಲ್ಪ ಸುದ್ದಿ ಬರುತ್ತದೆ. ವಿಪಕ್ಷಗಳಲ್ಲಿ ಯಾರು ಇರುತ್ತಾರೋ ಅವರು ಸಂಪ್ರದಾಯದಂತೆ ನಾಲ್ಕು ಟೀಕೆ ಮಾಡುತ್ತಾರೆ. ಮಳೆ ಇಳಿದು ಹೋದ ನಂತರ ಬೆಂಗಳೂರೇ ಸೂಪರ್ ಎಂದುಕೊಂಡವರು ಎಲ್ಲವನ್ನು ಮರೆತು ಹೊಂದಾಣಿಕೆಯೊಂದಿಗೆ ಮುಂದುವರೆಯುತ್ತಾರೆ. ಮತ್ತೇ ಜೋರು ಮಳೆ ಬಂದಾಗ ಇದೆಲ್ಲಾ ಮತ್ತೆ ಪುನರಾವರ್ತನೆಯಾಗುತ್ತದೆ. ಇದರಲ್ಲಿ ಯಾರಿಗೂ ಹೊಸದು ಕಾಣಿಸುವುದಿಲ್ಲ ಎನ್ನುವ ಡಿಕೆಶಿಯವರ ವಾಕ್ಯದ ತಾತ್ಪರ್ಯ ನಿಜ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search