• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೂದಲು ಉದುರುವ ಸಮಸ್ಯೆ; ಮಂಗಳೂರಿನ ಯುವಕ ಆತ್ಮಹತ್ಯೆ!

Tulunadu News Posted On May 20, 2025
0


0
Shares
  • Share On Facebook
  • Tweet It

ಆತ ವೃತ್ತಿಯಲ್ಲಿ ಪೇಂಟರ್. ವಯಸ್ಸು 32. ಹೆಸರು ಸುಧೀರ್. ದಕ್ಷಿಣ ಕನ್ನಡದ ಮುಡಿಪು ಸಮೀಪದ ಕುರ್ನಾಡು ಹೂವಿನಕೊಪ್ಪಲದಲ್ಲಿ ತಾಯಿಯೊಂದಿಗೆ ವಾಸವಿದ್ದ. ಇತ್ತೀಚೆಗೆ ಆತನಿಗೆ ಕೂದಲು ಉದುರುವ ಸಮಸ್ಯೆ ಆರಂಭವಾಗಿತ್ತು. ಇದರಿಂದ ತುಂಬಾ ನೊಂದುಕೊಂಡಿದ್ದ. ಇದರಿಂದ ಪಾರಾಗಲು ಆತ್ಮಹತ್ಯೆಯೊಂದೇ ದಾರಿ ಎನ್ನುವ ತಪ್ಪು ನಿರ್ಧಾರಕ್ಕೆ ಬಂದುಬಿಟ್ಟಿದ್ದ. ಅದಕ್ಕಾಗಿ ಆತ ತಾನು ಕಲಿತ ಶಾಲೆಗೆ ಬಂದಿದ್ದ.

ಆವತ್ತು ಭಾನುವಾರ. ಭಾನುವಾರ ಬೆಳಿಗ್ಗೆ ಬಸ್ಸು ತಂಗುದಾಣದಲ್ಲಿ ಕುಳಿತಿರುವುದನ್ನು ಸ್ಥಳೀಯರು ನೋಡಿದ್ದಾರೆ. ಮಗ ಮೊಬೈಲ್ ಮತ್ತು ಪರ್ಸ್ ಮನೆಯಲ್ಲಿಯೇ ಬಿಟ್ಟು ಎಲ್ಲಿಗೆ ಹೋದ ಎಂದು ತಾಯಿ ಹುಡುಕಾಡಲು ಶುರು ಮಾಡಿದ್ದರು. ಕೊನೆಗೆ ಶವ ಶಾಲೆಯ ಚಾವಣಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸುಧೀರ್ ಸಾಯುವ ಮೊದಲು ಡೆತ್ ನೋಟ್ ಕೂಡ ಬರೆದಿಟ್ಟಿದ್ದ. ಅದರಲ್ಲಿ ತನ್ನ ಕೂದಲು ಉದುರುವ ಸಮಸ್ಯೆಯ ಬಗ್ಗೆ ಬರೆದಿದ್ದಾನೆ. ಇನ್ನು ತನ್ನ ಅಂತ್ಯದಲ್ಲಿಯೂ ಮಾನವೀಯತೆ ಮರೆಯದೇ ತನ್ನ ಕಿಡ್ನಿಯನ್ನು ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿರುವ ಬಾವನಿಗೆ ದಾನ ಮಾಡುವಂತೆ ತಿಳಿಸಿದ್ದಾನೆ ಎಂದು ತಿಳಿದು ಬಂದಿದೆ.

ಈ ತಿಂಗಳ ಕೊನೆಯಲ್ಲಿ ಇವನ ಸಹೋದರನಿಗೆ ಮದುವೆ ನಿಶ್ಚಯವಾಗಿತ್ತು. ಈತ ಕುರ್ನಾಡು ಶ್ರೀ ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ. ಅದೇ ಶಾಲೆಯಲ್ಲಿ ಕಲಿತವ ಅದೇ ಶಾಲೆಯಲ್ಲಿ ಅಂತ್ಯಕಂಡಿದ್ದಾನೆ. ಶ್ರೀ ದತ್ತಾತ್ರೇಯ ಭಜನಾ ಮಂಡಳಿ ಹಾಗೂ ಯಕ್ಷಗಾನ ಸಂಘದ ಸದಸ್ಯನಾಗಿದ್ದ. ಉತ್ತಮ ಕ್ರಿಕೆಟ್ ಆಟಗಾರನಾಗಿದ್ದ ಸುಧೀರ್ ನಿಧನ ಅವನ ಮನೆಯವರನ್ನು, ಆತ್ಮೀಯರಿಗೆ ಶಾಕ್ ನೀಡಿದೆ. ಇನ್ನು ಸುಧೀರ್ ಸಾವಿಗೆ ಬೇರೆಯೇ ಕಾರಣಗಳಿವೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಷ್ಟು ಚಿಕ್ಕ ವಿಷಯಕ್ಕೆ ಯಾರಾದರೂ ಆತ್ಮಹತ್ಯೆ ಮಾಡಿಕೊಳ್ಳುತ್ತಾರಾ ಎಂದು ಜನ ಮಾತನಾಡಿಕೊಂಡಿದ್ದಾರೆ.

0
Shares
  • Share On Facebook
  • Tweet It


- Advertisement -


Trending Now
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
  • Popular Posts

    • 1
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 2
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 3
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 4
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 5
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search