• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೂದಲು ಉದುರುವ ಸಮಸ್ಯೆ; ಮಂಗಳೂರಿನ ಯುವಕ ಆತ್ಮಹತ್ಯೆ!

Tulunadu News Posted On May 20, 2025
0


0
Shares
  • Share On Facebook
  • Tweet It

ಆತ ವೃತ್ತಿಯಲ್ಲಿ ಪೇಂಟರ್. ವಯಸ್ಸು 32. ಹೆಸರು ಸುಧೀರ್. ದಕ್ಷಿಣ ಕನ್ನಡದ ಮುಡಿಪು ಸಮೀಪದ ಕುರ್ನಾಡು ಹೂವಿನಕೊಪ್ಪಲದಲ್ಲಿ ತಾಯಿಯೊಂದಿಗೆ ವಾಸವಿದ್ದ. ಇತ್ತೀಚೆಗೆ ಆತನಿಗೆ ಕೂದಲು ಉದುರುವ ಸಮಸ್ಯೆ ಆರಂಭವಾಗಿತ್ತು. ಇದರಿಂದ ತುಂಬಾ ನೊಂದುಕೊಂಡಿದ್ದ. ಇದರಿಂದ ಪಾರಾಗಲು ಆತ್ಮಹತ್ಯೆಯೊಂದೇ ದಾರಿ ಎನ್ನುವ ತಪ್ಪು ನಿರ್ಧಾರಕ್ಕೆ ಬಂದುಬಿಟ್ಟಿದ್ದ. ಅದಕ್ಕಾಗಿ ಆತ ತಾನು ಕಲಿತ ಶಾಲೆಗೆ ಬಂದಿದ್ದ.

ಆವತ್ತು ಭಾನುವಾರ. ಭಾನುವಾರ ಬೆಳಿಗ್ಗೆ ಬಸ್ಸು ತಂಗುದಾಣದಲ್ಲಿ ಕುಳಿತಿರುವುದನ್ನು ಸ್ಥಳೀಯರು ನೋಡಿದ್ದಾರೆ. ಮಗ ಮೊಬೈಲ್ ಮತ್ತು ಪರ್ಸ್ ಮನೆಯಲ್ಲಿಯೇ ಬಿಟ್ಟು ಎಲ್ಲಿಗೆ ಹೋದ ಎಂದು ತಾಯಿ ಹುಡುಕಾಡಲು ಶುರು ಮಾಡಿದ್ದರು. ಕೊನೆಗೆ ಶವ ಶಾಲೆಯ ಚಾವಣಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸುಧೀರ್ ಸಾಯುವ ಮೊದಲು ಡೆತ್ ನೋಟ್ ಕೂಡ ಬರೆದಿಟ್ಟಿದ್ದ. ಅದರಲ್ಲಿ ತನ್ನ ಕೂದಲು ಉದುರುವ ಸಮಸ್ಯೆಯ ಬಗ್ಗೆ ಬರೆದಿದ್ದಾನೆ. ಇನ್ನು ತನ್ನ ಅಂತ್ಯದಲ್ಲಿಯೂ ಮಾನವೀಯತೆ ಮರೆಯದೇ ತನ್ನ ಕಿಡ್ನಿಯನ್ನು ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿರುವ ಬಾವನಿಗೆ ದಾನ ಮಾಡುವಂತೆ ತಿಳಿಸಿದ್ದಾನೆ ಎಂದು ತಿಳಿದು ಬಂದಿದೆ.

ಈ ತಿಂಗಳ ಕೊನೆಯಲ್ಲಿ ಇವನ ಸಹೋದರನಿಗೆ ಮದುವೆ ನಿಶ್ಚಯವಾಗಿತ್ತು. ಈತ ಕುರ್ನಾಡು ಶ್ರೀ ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ. ಅದೇ ಶಾಲೆಯಲ್ಲಿ ಕಲಿತವ ಅದೇ ಶಾಲೆಯಲ್ಲಿ ಅಂತ್ಯಕಂಡಿದ್ದಾನೆ. ಶ್ರೀ ದತ್ತಾತ್ರೇಯ ಭಜನಾ ಮಂಡಳಿ ಹಾಗೂ ಯಕ್ಷಗಾನ ಸಂಘದ ಸದಸ್ಯನಾಗಿದ್ದ. ಉತ್ತಮ ಕ್ರಿಕೆಟ್ ಆಟಗಾರನಾಗಿದ್ದ ಸುಧೀರ್ ನಿಧನ ಅವನ ಮನೆಯವರನ್ನು, ಆತ್ಮೀಯರಿಗೆ ಶಾಕ್ ನೀಡಿದೆ. ಇನ್ನು ಸುಧೀರ್ ಸಾವಿಗೆ ಬೇರೆಯೇ ಕಾರಣಗಳಿವೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಷ್ಟು ಚಿಕ್ಕ ವಿಷಯಕ್ಕೆ ಯಾರಾದರೂ ಆತ್ಮಹತ್ಯೆ ಮಾಡಿಕೊಳ್ಳುತ್ತಾರಾ ಎಂದು ಜನ ಮಾತನಾಡಿಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search