• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!

Tulunadu News Posted On May 20, 2025
0


0
Shares
  • Share On Facebook
  • Tweet It

ಉತ್ತರಖಂಡ ರಾಜ್ಯದ ಮದರಾಸಾಗಳಲ್ಲಿ ಆಪರೇಶನ್ ಸಿಂಧೂರ್ ಅಳವಡಿಸಲು ಅಲ್ಲಿನ ರಾಜ್ಯ ಸರಕಾರ ತೀರ್ಮಾನಿಸಿದೆ. ಈ ಮೂಲಕ ಮದರಸಾಗಳಲ್ಲಿ ಕಲಿಯುವ ಮಕ್ಕಳು ಭಯೋತ್ಪಾದನೆಯ ವಿರುದ್ಧ ಭಾರತ ತೀಕ್ಣ ಪ್ರತಿಕ್ರಿಯೆ ಹೇಗಿತ್ತು ಎನ್ನುವುದನ್ನು ಅರಿಯಬೇಕು ಎನ್ನುವುದು ಇದರ ಉದ್ದೇಶವಾಗಿದೆ. ಉತ್ತರಖಂಡ ರಾಜ್ಯದ ಸುಮಾರು 451 ಮದರಸಾಗಳಲ್ಲಿ ಕಲಿಯುವ ಅಂದಾಜು 50000 ಮಕ್ಕಳು ಇನ್ನು ಮುಂದೆ ತಮ್ಮ ಪಠ್ಯದಲ್ಲಿ ಆಪರೇಶನ್ ಸಿಂಧೂರ ಇದರ ಬಗ್ಗೆನೂ ಕಲಿಯಬೇಕಿದೆ. ಇದರಲ್ಲಿ ಉಗ್ರರು ಪಾಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಹತ್ಯೆ ಮಾಡಿದ ಪ್ರತಿಕ್ರಿಯೆಯಾಗಿ ಪಾಕಿಸ್ತಾನದ ಉಗ್ರರ ಅಡಗುತಾಣಗಳು ಮತ್ತು ಪಿಒಕೆ ಮೇಲೆ ಭಾರತದ ಸೈನ್ಯ ಹೇಗೆ ದಾಳಿ ಮಾಡಿ ಉಗ್ರರ ನಾಶ ಮಾಡಿತು ಎನ್ನುವುದನ್ನು ಮದರಸಾದಲ್ಲಿ ಮಕ್ಕಳು ಕಲಿಯಲಿದ್ದಾರೆ.

ಉತ್ತರಖಂಡ ಸರಕಾರದ ಈ ನಡೆ ನಿಜಕ್ಕೂ ಐತಿಹಾಸಿಕವಾಗಿದ್ದು, ಉಳಿದ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿ ಆಳ್ವಿಕೆ ನಡೆಸುತ್ತಿರುವ ಸರಕಾರಗಳು ಇದನ್ನು ಅನುಸರಿಸುತ್ತವೆಯೋ ಎಂದು ಕಾದು ನೋಡಬೇಕಿದೆ. ಉತ್ತರಖಂಡ ರಾಜ್ಯದ ಮದರಸಾ ಬೋರ್ಡಿನ ಅಧ್ಯಕ್ಷ ಶಾಮೂನ್ ಖಾಸ್ಮಿ ದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ನಂತರ ಮಾಧ್ಯಮಗಳೊಂದಿಗೆ ಈ ಬಗ್ಗೆ ಮಾಹಿತಿ ನೀಡಿದರು.

ಕೇಂದ್ರ ಸರಕಾರಕ್ಕೆ ಅಭಿನಂದನೆ ಸಲ್ಲಿಸಿದ ಶಾಸ್ಮಿ, ಆಪರೇಶನ್ ಸಿಂಧೂರ ನಮ್ಮ ದೇಶದ ಸೈನಿಕರ ಸಾಮರ್ತ್ಯಕ್ಕೆ ಹಿಡಿದ ಕೈಗನ್ನಡಿಯಾಗಿದ್ದು, ಎಲ್ಲಾ ಭಾರತೀಯರು ಅಭಿಮಾನ ಪಡುವ ಸಂಗತಿಯಾಗಿದೆ. ಈ ವಿಷಯವನ್ನು ಎಲ್ಲಾ ಮಕ್ಕಳಿಗೆ ತಿಳಿಸಬೇಕಾಗಿದೆ. ಅದಕ್ಕಾಗಿ ಮದರಸಾ ಪಠ್ಯಕ್ರಮ ಕಮಿಟಿಯ ಸಭೆ ಕರೆದು ಈ ಪಠ್ಯ ಅಳವಡಿಸಲು ಸೂಚಿಸಲಾಗುವುದು” ಎಂದು ತಿಳಿಸಿದರು.

ಇದು ಜಾರಿಗೆ ಬಂದಲ್ಲಿ ಉತ್ತರಖಂಡದ 451 ಮದರಸಾಗಳ 50 ಸಾವಿರ ಮಕ್ಕಳು ಎಪ್ರಿಲ್ 22 ರ ಪೆಹಲ್ಗಾಮ್ ಹತ್ಯಾಕಾಂಡದ ಪ್ರತಿಕಾರವಾಗಿ ಭಾರತ ಕೈಗೊಂಡ ಕ್ರಮಗಳ ಬಗ್ಗೆ ವಿವರವಾಗಿ ಕಲಿಯಲಿದ್ದಾರೆ. ಈ ಮೂಲಕ ಅಲ್ಲಿನ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಉತ್ತರಖಂಡದ ಮದರಸಾಗಳಲ್ಲಿ ಗಳಲ್ಲಿ ಭಾರತದ ಸೈನ್ಯದ ಬಲದ ಅರಿವನ್ನು ಮಕ್ಕಳಿಗೆ ಮಾಡಿಸಲಿದ್ದಾರೆ.

0
Shares
  • Share On Facebook
  • Tweet It


- Advertisement -


Trending Now
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Tulunadu News June 18, 2025
ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
  • Popular Posts

    • 1
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 2
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 3
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 4
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • 5
      ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search