• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!

Tulunadu News Posted On May 20, 2025
0


0
Shares
  • Share On Facebook
  • Tweet It

ಉತ್ತರಖಂಡ ರಾಜ್ಯದ ಮದರಾಸಾಗಳಲ್ಲಿ ಆಪರೇಶನ್ ಸಿಂಧೂರ್ ಅಳವಡಿಸಲು ಅಲ್ಲಿನ ರಾಜ್ಯ ಸರಕಾರ ತೀರ್ಮಾನಿಸಿದೆ. ಈ ಮೂಲಕ ಮದರಸಾಗಳಲ್ಲಿ ಕಲಿಯುವ ಮಕ್ಕಳು ಭಯೋತ್ಪಾದನೆಯ ವಿರುದ್ಧ ಭಾರತ ತೀಕ್ಣ ಪ್ರತಿಕ್ರಿಯೆ ಹೇಗಿತ್ತು ಎನ್ನುವುದನ್ನು ಅರಿಯಬೇಕು ಎನ್ನುವುದು ಇದರ ಉದ್ದೇಶವಾಗಿದೆ. ಉತ್ತರಖಂಡ ರಾಜ್ಯದ ಸುಮಾರು 451 ಮದರಸಾಗಳಲ್ಲಿ ಕಲಿಯುವ ಅಂದಾಜು 50000 ಮಕ್ಕಳು ಇನ್ನು ಮುಂದೆ ತಮ್ಮ ಪಠ್ಯದಲ್ಲಿ ಆಪರೇಶನ್ ಸಿಂಧೂರ ಇದರ ಬಗ್ಗೆನೂ ಕಲಿಯಬೇಕಿದೆ. ಇದರಲ್ಲಿ ಉಗ್ರರು ಪಾಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಹತ್ಯೆ ಮಾಡಿದ ಪ್ರತಿಕ್ರಿಯೆಯಾಗಿ ಪಾಕಿಸ್ತಾನದ ಉಗ್ರರ ಅಡಗುತಾಣಗಳು ಮತ್ತು ಪಿಒಕೆ ಮೇಲೆ ಭಾರತದ ಸೈನ್ಯ ಹೇಗೆ ದಾಳಿ ಮಾಡಿ ಉಗ್ರರ ನಾಶ ಮಾಡಿತು ಎನ್ನುವುದನ್ನು ಮದರಸಾದಲ್ಲಿ ಮಕ್ಕಳು ಕಲಿಯಲಿದ್ದಾರೆ.

ಉತ್ತರಖಂಡ ಸರಕಾರದ ಈ ನಡೆ ನಿಜಕ್ಕೂ ಐತಿಹಾಸಿಕವಾಗಿದ್ದು, ಉಳಿದ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿ ಆಳ್ವಿಕೆ ನಡೆಸುತ್ತಿರುವ ಸರಕಾರಗಳು ಇದನ್ನು ಅನುಸರಿಸುತ್ತವೆಯೋ ಎಂದು ಕಾದು ನೋಡಬೇಕಿದೆ. ಉತ್ತರಖಂಡ ರಾಜ್ಯದ ಮದರಸಾ ಬೋರ್ಡಿನ ಅಧ್ಯಕ್ಷ ಶಾಮೂನ್ ಖಾಸ್ಮಿ ದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ನಂತರ ಮಾಧ್ಯಮಗಳೊಂದಿಗೆ ಈ ಬಗ್ಗೆ ಮಾಹಿತಿ ನೀಡಿದರು.

ಕೇಂದ್ರ ಸರಕಾರಕ್ಕೆ ಅಭಿನಂದನೆ ಸಲ್ಲಿಸಿದ ಶಾಸ್ಮಿ, ಆಪರೇಶನ್ ಸಿಂಧೂರ ನಮ್ಮ ದೇಶದ ಸೈನಿಕರ ಸಾಮರ್ತ್ಯಕ್ಕೆ ಹಿಡಿದ ಕೈಗನ್ನಡಿಯಾಗಿದ್ದು, ಎಲ್ಲಾ ಭಾರತೀಯರು ಅಭಿಮಾನ ಪಡುವ ಸಂಗತಿಯಾಗಿದೆ. ಈ ವಿಷಯವನ್ನು ಎಲ್ಲಾ ಮಕ್ಕಳಿಗೆ ತಿಳಿಸಬೇಕಾಗಿದೆ. ಅದಕ್ಕಾಗಿ ಮದರಸಾ ಪಠ್ಯಕ್ರಮ ಕಮಿಟಿಯ ಸಭೆ ಕರೆದು ಈ ಪಠ್ಯ ಅಳವಡಿಸಲು ಸೂಚಿಸಲಾಗುವುದು” ಎಂದು ತಿಳಿಸಿದರು.

ಇದು ಜಾರಿಗೆ ಬಂದಲ್ಲಿ ಉತ್ತರಖಂಡದ 451 ಮದರಸಾಗಳ 50 ಸಾವಿರ ಮಕ್ಕಳು ಎಪ್ರಿಲ್ 22 ರ ಪೆಹಲ್ಗಾಮ್ ಹತ್ಯಾಕಾಂಡದ ಪ್ರತಿಕಾರವಾಗಿ ಭಾರತ ಕೈಗೊಂಡ ಕ್ರಮಗಳ ಬಗ್ಗೆ ವಿವರವಾಗಿ ಕಲಿಯಲಿದ್ದಾರೆ. ಈ ಮೂಲಕ ಅಲ್ಲಿನ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಉತ್ತರಖಂಡದ ಮದರಸಾಗಳಲ್ಲಿ ಗಳಲ್ಲಿ ಭಾರತದ ಸೈನ್ಯದ ಬಲದ ಅರಿವನ್ನು ಮಕ್ಕಳಿಗೆ ಮಾಡಿಸಲಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search