• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!

Tulunadu News Posted On May 20, 2025
0


0
Shares
  • Share On Facebook
  • Tweet It

ಉತ್ತರಖಂಡ ರಾಜ್ಯದ ಮದರಾಸಾಗಳಲ್ಲಿ ಆಪರೇಶನ್ ಸಿಂಧೂರ್ ಅಳವಡಿಸಲು ಅಲ್ಲಿನ ರಾಜ್ಯ ಸರಕಾರ ತೀರ್ಮಾನಿಸಿದೆ. ಈ ಮೂಲಕ ಮದರಸಾಗಳಲ್ಲಿ ಕಲಿಯುವ ಮಕ್ಕಳು ಭಯೋತ್ಪಾದನೆಯ ವಿರುದ್ಧ ಭಾರತ ತೀಕ್ಣ ಪ್ರತಿಕ್ರಿಯೆ ಹೇಗಿತ್ತು ಎನ್ನುವುದನ್ನು ಅರಿಯಬೇಕು ಎನ್ನುವುದು ಇದರ ಉದ್ದೇಶವಾಗಿದೆ. ಉತ್ತರಖಂಡ ರಾಜ್ಯದ ಸುಮಾರು 451 ಮದರಸಾಗಳಲ್ಲಿ ಕಲಿಯುವ ಅಂದಾಜು 50000 ಮಕ್ಕಳು ಇನ್ನು ಮುಂದೆ ತಮ್ಮ ಪಠ್ಯದಲ್ಲಿ ಆಪರೇಶನ್ ಸಿಂಧೂರ ಇದರ ಬಗ್ಗೆನೂ ಕಲಿಯಬೇಕಿದೆ. ಇದರಲ್ಲಿ ಉಗ್ರರು ಪಾಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಹತ್ಯೆ ಮಾಡಿದ ಪ್ರತಿಕ್ರಿಯೆಯಾಗಿ ಪಾಕಿಸ್ತಾನದ ಉಗ್ರರ ಅಡಗುತಾಣಗಳು ಮತ್ತು ಪಿಒಕೆ ಮೇಲೆ ಭಾರತದ ಸೈನ್ಯ ಹೇಗೆ ದಾಳಿ ಮಾಡಿ ಉಗ್ರರ ನಾಶ ಮಾಡಿತು ಎನ್ನುವುದನ್ನು ಮದರಸಾದಲ್ಲಿ ಮಕ್ಕಳು ಕಲಿಯಲಿದ್ದಾರೆ.

ಉತ್ತರಖಂಡ ಸರಕಾರದ ಈ ನಡೆ ನಿಜಕ್ಕೂ ಐತಿಹಾಸಿಕವಾಗಿದ್ದು, ಉಳಿದ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿ ಆಳ್ವಿಕೆ ನಡೆಸುತ್ತಿರುವ ಸರಕಾರಗಳು ಇದನ್ನು ಅನುಸರಿಸುತ್ತವೆಯೋ ಎಂದು ಕಾದು ನೋಡಬೇಕಿದೆ. ಉತ್ತರಖಂಡ ರಾಜ್ಯದ ಮದರಸಾ ಬೋರ್ಡಿನ ಅಧ್ಯಕ್ಷ ಶಾಮೂನ್ ಖಾಸ್ಮಿ ದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ನಂತರ ಮಾಧ್ಯಮಗಳೊಂದಿಗೆ ಈ ಬಗ್ಗೆ ಮಾಹಿತಿ ನೀಡಿದರು.

ಕೇಂದ್ರ ಸರಕಾರಕ್ಕೆ ಅಭಿನಂದನೆ ಸಲ್ಲಿಸಿದ ಶಾಸ್ಮಿ, ಆಪರೇಶನ್ ಸಿಂಧೂರ ನಮ್ಮ ದೇಶದ ಸೈನಿಕರ ಸಾಮರ್ತ್ಯಕ್ಕೆ ಹಿಡಿದ ಕೈಗನ್ನಡಿಯಾಗಿದ್ದು, ಎಲ್ಲಾ ಭಾರತೀಯರು ಅಭಿಮಾನ ಪಡುವ ಸಂಗತಿಯಾಗಿದೆ. ಈ ವಿಷಯವನ್ನು ಎಲ್ಲಾ ಮಕ್ಕಳಿಗೆ ತಿಳಿಸಬೇಕಾಗಿದೆ. ಅದಕ್ಕಾಗಿ ಮದರಸಾ ಪಠ್ಯಕ್ರಮ ಕಮಿಟಿಯ ಸಭೆ ಕರೆದು ಈ ಪಠ್ಯ ಅಳವಡಿಸಲು ಸೂಚಿಸಲಾಗುವುದು” ಎಂದು ತಿಳಿಸಿದರು.

ಇದು ಜಾರಿಗೆ ಬಂದಲ್ಲಿ ಉತ್ತರಖಂಡದ 451 ಮದರಸಾಗಳ 50 ಸಾವಿರ ಮಕ್ಕಳು ಎಪ್ರಿಲ್ 22 ರ ಪೆಹಲ್ಗಾಮ್ ಹತ್ಯಾಕಾಂಡದ ಪ್ರತಿಕಾರವಾಗಿ ಭಾರತ ಕೈಗೊಂಡ ಕ್ರಮಗಳ ಬಗ್ಗೆ ವಿವರವಾಗಿ ಕಲಿಯಲಿದ್ದಾರೆ. ಈ ಮೂಲಕ ಅಲ್ಲಿನ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಉತ್ತರಖಂಡದ ಮದರಸಾಗಳಲ್ಲಿ ಗಳಲ್ಲಿ ಭಾರತದ ಸೈನ್ಯದ ಬಲದ ಅರಿವನ್ನು ಮಕ್ಕಳಿಗೆ ಮಾಡಿಸಲಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search