• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ – ಡಿಸಿಎಂ

Tulunadu News Posted On May 20, 2025
0


0
Shares
  • Share On Facebook
  • Tweet It

ಗೃಹಲಕ್ಷ್ಮಿ ಹಣವನ್ನು ಪ್ರತಿ ತಿಂಗಳು ಕೊಡುತ್ತೇವೆ ಎಂದು ಹೇಳಿಲ್ಲ ಎಂದು ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿರುವುದು ಈಗ ರಾಜ್ಯದ ಮಹಿಳೆಯರಲ್ಲಿ ನಿರಾಸೆಯನ್ನು ಉಂಟು ಮಾಡಿದೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಾ ಬಂದಿರುವುದರಿಂದ ಹೊಸಪೇಟೆಯಲ್ಲಿ ಸಾಧನಾ ಸಮಾವೇಶವನ್ನು ಅದ್ದೂರಿಯಾಗಿ ನಡೆಸಿದೆ.

ಆದರೆ ಅಲ್ಲಿ ಪತ್ರಕರ್ತರು ಗೃಹಲಕ್ಷ್ಮಿ ಹಣ ವಿಳಂಬವಾಗಿ ಬರುತ್ತಿರುವುದರ ಬಗ್ಗೆ ಡಿಸಿಎಂ ಗಮನ ಸೆಳೆದಾಗ ” ನೋಡ್ರಿ ತಿಂಗಳು, ತಿಂಗಳು ಹಣ ಕೊಡ್ತೀವಿ ಎಂದು ನಾವು ಹೇಳಿಲ್ಲ. ನೀವು ಟ್ಯಾಕ್ಸ್ ಕಟ್ಟುತ್ತಾ ಇರಬೇಕು. ನಾವು ದುಡ್ಡು ಕೊಡ್ತಾ ಇರಬೇಕು. ಈಗ ಗುತ್ತಿಗೆ ಕೆಲಸ ಮಾಡುವವರಿಗೆ ನಾಳೆನೆ ಹಣ ಬಂದುಬಿಡುತ್ತಾ? 2,3,5 ವರ್ಷ ಆಗಲ್ವಾ. ಅದೇ ರೀತಿ ಇದು ಕೂಡಾ ಬಂದಾಗ ಬರುತ್ತೆ” ಎಂದು ಹೇಳಿದ್ದಾರೆ.

ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಿಗೆ ಸೂಕ್ತ ಆರ್ಥಿಕ ಸಂಪನ್ಮೂಲಗಳ ಕೊರತೆ ಇರುವುದು ರಾಜ್ಯದ ಜನರಿಗೆ ಗೊತ್ತಿದೆ. ಆದ್ದರಿಂದ ಬರುವಷ್ಟು ದಿನ ಬರಲಿ ಎನ್ನುವ ಮನೋಭಾವನೆಯನ್ನು ಎಲ್ಲರೂ ಹೊಂದಿದ್ದಾರೆ. ಇಷ್ಟಾದರೂ ಕೊಟ್ಟಿದ್ದಾರಲ್ಲ, ಅದು ಕೂಡ ಫ್ರೀಯಾಗಿ ಎನ್ನುವ ಅಭಿಪ್ರಾಯ ಮಹಿಳೆಯರಲ್ಲಿದೆ. ಯಾರಿಗೂ ಇದು ಪ್ರತಿ ತಿಂಗಳು ಬರುತ್ತದೆ ಎನ್ನುವ ನಂಬಿಕೆ ಇಲ್ಲ. ಅದ್ದರಿಂದ ಬಂದಷ್ಟು ದಿನ ತೆಗೆದುಕೊಳ್ಳೋಣ ಎನ್ನುವ ಚಿಂತನೆ ಎಲ್ಲರದ್ದು. ಆದರೆ ಯಾವುದೇ ವಿಷಯವನ್ನು ಯಾವುದೇ ಮುಲಾಜಿಲ್ಲದೇ ಮಾತನಾಡುವ ಡಿಕೆಶಿವಕುಮಾರ್ ಈ ವಿಷಯದಲ್ಲಿಯೂ ಅಷ್ಟೇ ಖಡಕ್ಕಾಗಿ ಮಾತನಾಡಿರುವುದರಿಂದ ಇದು ವಿಪಕ್ಷಗಳಿಗೆ ಆಹಾರದ ವಸ್ತುವಾಗಿದೆ. ಬಿಜೆಪಿಯ ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣೆಯ ಮೊದಲು ನೀಡಿದ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡುವ ಭರವಸೆಯ ಪೋಸ್ಟರ್ ಗಳೊಂದಿಗೆ ಡಿಸಿಎಂ ಅವರ ಈಗಿನ ಹೇಳಿಕೆಯನ್ನು ಜೋಡಿಸಿ ಜನರ ಮುಂದಿಟ್ಟಿದ್ದಾರೆ.

ಅಷ್ಟಕ್ಕೂ ಗೃಹಲಕ್ಷ್ಮಿ ಹಣ ವಿಳಂಬವಾಗುತ್ತಿರುವುದು ಇದು ಮೊದಲ ಸಲವಲ್ಲ. ಪ್ರತಿ ಬಾರಿ ವಿಳಂಬವಾದಾಗಲೂ ಅದಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆದಷ್ಟು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸಮುಜಾಯಿಷಿಕೆ ನೀಡುತ್ತಿದ್ದರು. ಆದರೆ ಈ ಸಲ ಪತ್ರಕರ್ತರು ಪಟ್ಟು ಬಿಡದೆ ಕೇಳಿದಾಗ ಡಿಸಿಎಂ ನೇರವಾಗಿ ವಾಸ್ತವವನ್ನೇ ಹೇಳಿದ್ದಾರೆ. ಡಿಕೆಶಿಯವರು ಹೀಗೆ ಹೇಳುವಾಗ ಅವರ ಅಕ್ಕಪಕ್ಕದಲ್ಲಿ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಜಮೀರ್ ಅಹ್ಮದ್ ಖಾನ್ ಕೂಡ ಇದ್ದರು.

 

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search