• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..

Tulunadu News Posted On May 21, 2025
0


0
Shares
  • Share On Facebook
  • Tweet It

ಕರ್ನಾಟಕದ ಬ್ಯಾಂಕುಗಳಲ್ಲಿ ಹೆಚ್ಚುತ್ತಿರುವ ಹಿಂದಿ ಭಾಷಿಗರಿಂದ ಸ್ಥಳೀಯರಿಗೆ ವ್ಯವಹಾರ ಕಷ್ಟ ಎನ್ನುವ ಪರಿಸ್ಥಿತಿ ಈಗ ಉದ್ಭವವಾಗಿದೆ. ಹಿಂದೆ ರಾಜ್ಯದ ಎಲ್ಲಾ ಬ್ಯಾಂಕುಗಳ ಶಾಖೆಗಳಲ್ಲಿ ರಾಜ್ಯದವರೇ ಇದ್ದರು. ಕರಾವಳಿಯ ಬ್ರಾಂಚುಗಳಲ್ಲಿಯೂ ಸ್ಥಳೀಯರೇ ಇದ್ದ ಕಾರಣ ಬ್ಯಾಂಕ್ ಉದ್ಯೋಗಿಗಳ ಮತ್ತು ಗ್ರಾಹಕರ ನಡುವೆ ಉತ್ತಮ ಬಾಂಧವ್ಯ ಇತ್ತು. ಯಾವುದೇ ಮಾಹಿತಿಯನ್ನು ಸಿಬ್ಬಂದಿಗಳು ಸ್ಥಳೀಯ ಭಾಷೆಗಳಲ್ಲಿಯೇ ನೀಡುತ್ತಿದ್ದ ಕಾರಣ ಗ್ರಾಹಕರಿಗೂ ಅದು ಅರ್ಥವಾಗುತ್ತಿತ್ತು. ಇದರಿಂದ ಎರಡೂ ಕಡೆಯಿಂದ ಕೆಲಸ ಕಾರ್ಯಗಳು ಸುಲಲಿತವಾಗಿ ನಡೆಯುತ್ತಿತ್ತು. ಆದರೆ ಈಗ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬ್ರಾಂಚುಗಳಲ್ಲಿಯೂ ಹಿಂದಿ ಭಾಷಿಗರದ್ದೇ ಪಾರಮ್ಯ. ಅವರಿಗೆ ನಮ್ಮವರ ಕಷ್ಟ, ಸುಖ ಬಿದ್ದು ಹೋಗಿಲ್ಲ. ಸರಿಯಾಗಿ ಸಂವಹನ ನಡೆಸಬೇಕೆಂಬ ಕಿಂಚಿತ್ ಪರಿಜ್ಞಾನವೂ ಇಲ್ಲ. ಇದರಿಂದ ಬ್ಯಾಂಕುಗಳಲ್ಲಿ ಆಗಾಗ ತಿಕ್ಕಲಾಟಗಳು ಜಾಸ್ತಿಯಾಗುತ್ತಿವೆ.

ಬೆಂಗಳೂರಿನ ಹೊರವಲಯದ ಎಸ್ ಬಿಐ ಶಾಖೆಯ ಮ್ಯಾನೇಜರ್ “ಕನ್ನಡ ಮಾತನಾಡಲ್ಲ, ಇಂಗ್ಲೀಷ್ ಮಾತನಾಡಲ್ಲ, ಹಿಂದಿಯಲ್ಲಿಯೇ ಮಾತನಾಡುತ್ತೇನೆ” ಎಂದು ಡ್ರಾಮ ಮಾಡಿ ಕೊನೆಗೂ ವರ್ಗಾವಣೆಗೊಂಡಿದ್ದಾರೆ.

ಆನೆಕಲ್ ತಾಲೂಕಿನ ಸೂರ್ಯನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಮ್ಯಾನೇಜರ್ ನಾನು ಕನ್ನಡ ಮಾತನಾಡಲ್ಲ, ನೀವೆ ಹಿಂದಿ ಮಾತನಾಡಿ, ಇಲ್ಲದಿದ್ದರೆ ಅದೇನು ಮಾಡ್ಕೋತಿರೋ ಮಾಡಿಕೊಳ್ಳಿ ಎಂದು ಹಿಂದಿ ದರ್ಪವನ್ನು ಮೆರೆದಿದ್ದರು. ಮ್ಯಾನೇಜರ್ ಅವರ ಈ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲಿಯೇ ಬ್ಯಾಂಕ್ ಆಡಳಿತ ಮಂಡಳಿ ಮ್ಯಾನೇಜರ್ ಳನ್ನು ವರ್ಗಾವಣೆ ಮಾಡಿದ್ದು, ಈ ಬಗ್ಗೆ ಸ್ವತ: ಮುಖ್ಯಮಂತ್ರಿ ಸಿದ್ಧರಾಮಯ್ಯನವರೇ ಮಾಹಿತಿ ನೀಡಿದ್ದಾರೆ.

ಬ್ಯಾಂಕ್ ನಿಯಮಾವಳಿಗಳ ಪ್ರಕಾರ ಬ್ಯಾಂಕ್ ಸಿಬ್ಬಂದಿಗಳು ಕೆಲಸ ಮಾಡುವ ಸ್ಥಳದ ಪ್ರಾದೇಶಿಕ ಭಾಷೆ ಕಲಿತು ಮಾತನಾಡಬೇಕು. ಏಕೆಂದರೆ ಬ್ಯಾಂಕಿಗೆ ಬರುವ ಎಲ್ಲಾ ಗ್ರಾಹಕರಿಗೆ ಹಿಂದಿ, ಇಂಗ್ಲೀಷ್ ಬರಲೇಬೇಕೆಂದಿಲ್ಲ. ಅವರು ತಮ್ಮ ಹಣದ ವ್ಯವಹಾರ ಮಾಡಲು ಬರುವುದೇ ವಿನ: ಹಿಂದಿ, ಇಂಗ್ಲೀಷ್ ಗೊತ್ತಿದ್ದವರೇ ಹಣದ ವ್ಯವಹಾರ ಮಾಡಬೇಕು ಎಂದೆನಿಲ್ಲ. ಅದನ್ನು ಬೇರೆ ರಾಜ್ಯದಿಂದ ಇಲ್ಲಿ ಬಂದು ಕೆಲಸ ಮಾಡುವ ಬ್ಯಾಂಕ್ ಉದ್ಯೋಗಿಗಳು ಅರ್ಥ ಮಾಡಿಕೊಳ್ಳಬೇಕು. ಬ್ಯಾಂಕಿನಲ್ಲಿ ಗ್ರಾಹಕರೇ ದೊರೆಗಳು ಎನ್ನುವ ಬೋರ್ಡ್ ಅಲ್ಲಲ್ಲಿ ಹಾಕಿದ್ದರೂ ಅದನ್ನು ಪಾಲಿಸುವ ವ್ಯವಧಾನ ಇಲ್ಲದ ಉದ್ಯೋಗಿಗಳಿಂದ ಎಲ್ಲರಿಗೂ ಕೆಟ್ಟ ಹೆಸರು. ಈ ವರ್ಗಾವಣೆ ಶಿಕ್ಷೆ ಉಳಿದವರಿಗೆ ಎಚ್ಚರಿಕೆಯ ಗಂಟೆಯಾಗಲಿ ಎನ್ನುವುದು ನಿರೀಕ್ಷೆ.

 

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search