• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!

Tulunadu News Posted On May 22, 2025
0


0
Shares
  • Share On Facebook
  • Tweet It

ತಮಿಳಿನ ಖ್ಯಾತ ನಾಯಕ ನಟ ಜಯಂ ರವಿ ಎಂದೇ ಪ್ರಖ್ಯಾತರಾಗಿರುವ ರವಿ ಮೋಹನ್ ಹಾಗೂ ಅವರ ಪತ್ನಿ ಆರತಿ ಅವರ ವಿಚ್ಚೇದನ ಪ್ರಕರಣ ಈಗ ನ್ಯಾಯಾಲಯದ ಮೆಟ್ಟಲೇರಿದೆ. ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಚೇದನಕ್ಕಾಗಿ ಅರ್ಜಿ ಸಲ್ಲಿಸಿರುವ ದಂಪತಿಯ ವಿಚಾರಣೆ ನ್ಯಾಯಾಲಯದಲ್ಲಿ ಆರಂಭವಾಗಿದೆ. ವಿಚ್ಚೇದನವಾದ ಬಳಿಕ ಕೌಟುಂಬಿಕ ನಿರ್ವಹಣೆಗಾಗಿ ತನಗೆ ಪ್ರತಿ ತಿಂಗಳು 40 ಲಕ್ಷ ರೂಪಾಯಿ ಪರಿಹಾರ ದೊರಕಿಸಿಕೊಡುವಂತೆ ಅವರು ಆರತಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.

ನ್ಯಾಯಾಲಯ ಇಬ್ಬರಿಗೂ ಕೌನ್ಸಿಲಿಂಗ್ ಮಾಡಿ ಹೊಂದಾಣಿಕೆ ಬರುವ ವಿಷಯದಲ್ಲಿ ಪ್ರಸ್ತಾಪಿಸಿತಾದರೂ ಜಯಂ ರವಿ ಸ್ಪಷ್ಟ ಮನವಿಯ ಮೂಲಕ ಆರತಿ ಜೊತೆಗೆ ಯಾವುದೇ ಹೊಂದಾಣಿಕೆ ಸಾಧ್ಯವಿಲ್ಲವೆಂದು ತಿಳಿಸಿರುವುದಾಗಿ ವರದಿ ಆಗಿದೆ. ರವಿಯವರ ಪರ ವಕೀಲರು ವಿಚ್ಚೇದನ ಕರುಣಿಸುವಂತೆ ಮನವಿ ಮಾಡಿದರು. ಇದರ ಬೆನ್ನಲ್ಲೇ ಆರತಿ ಜೀವನಾಂಶದ ಮೊತ್ತ ಕೇಳಿ ಮನವಿ ಸಲ್ಲಿಸಿದ್ದಾರೆ. ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಜೂನ್ 12 ಕ್ಕೆ ಮುಂದೂಡಿದೆ.
ಜಯಂ ರವಿ ಕಳೆದ ವರ್ಷವೇ ತಾವು ವಿಚ್ಚೇದನ ಪಡೆಯುವುದಾಗಿ ಬಹಿರಂಗವಾಗಿ ಘೋಷಿಸಿದ್ದರು.

ಆದರೆ ಈ ಬಗ್ಗೆ ಬಹಿರಂಗವಾಗಿ ಮಾತನಾಡುವ ಮೊದಲು ಈ ಬಗ್ಗೆ ತಮ್ಮ ಬಳಿ ಯಾವುದೇ ಸಮಾಲೋಚನೆ ಮಾಡಿಲ್ಲ ಎಂದು ಆರತಿ ಅಸಮಾಧಾನ ವ್ಯಕ್ತಪಡಿಸಿದ್ದರು. ಕಾಲಿವುಡ್ ಪ್ರಕಾರ ಗಾಯಕಿ ಕೆನಿಶಾ ಜೊತೆಗಿನ ಜಯಂ ರವಿಯವರ ಆಪ್ತತೆಯಿಂದಾಗಿ ಅವರ ಸಂಸಾರದಲ್ಲಿ ಬಿರುಕು ಬಿಟ್ಟಿದೆ ಎಂದು ಹೇಳಲಾಗಿದೆ. ಇಬ್ಬರೂ ಇತ್ತೀಚೆಗೆ ಹಲವಾರು ಕಾರ್ಯಕ್ರಮಗಳಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.

ಈ ನಡುವೆ ಆರತಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದು, 18 ವರ್ಷಗಳ ದಾಂಪತ್ಯ ಜೀವನವನ್ನು ಪತಿ ಕಡೆಗಣಿಸಿದ್ದು, ಸಾಂಸಾರಿಕ ಜವಾಬ್ದಾರಿಗಳಿಂದ ನುಣುಚಿಕೊಂಡಿದ್ದಾರೆ ಎಂದು ಹೇಳಲಾಗಿದೆ. ತಾನೀಗ ಮಕ್ಕಳ ಭವಿಷ್ಯಕ್ಕಾಗಿ ಹೋರಾಡಬೇಕಿದೆ ಎನ್ನುವ ಆರತಿ ಹೇಳಿಕೆಗೆ ತನ್ನ ಮೇಲೆ ಮಾನಸಿಕ ಮತ್ತು ಆರ್ಥಿಕ ನಿಯಂತ್ರಣ ತರಲು ಆರತಿ ನಿರಂತರ ಪ್ರಯತ್ನಿಸಿರುವುದಾಗಿ ಅದರಿಂದ ಬೇಸತ್ತಿದ್ದೇನೆ ಎಂದು ರವಿ ಹೇಳಿದ್ದಾರೆ. ಇಬ್ಬರೂ 2009 ರಲ್ಲಿ ಮದುವೆಯಾಗಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಆರತಿ ಮೂರನೇ ವ್ಯಕ್ತಿಯಿಂದಾಗಿ ಈ ಪರಿಸ್ಥಿತಿಯನ್ನು ತಾವು ಅನುಭವಿಸುತ್ತಿರುವುದಾಗಿ ಅದಕ್ಕೆ ತಮ್ಮ ಬಳಿ ಸಾಕ್ಷ್ಯ ಇರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ತಾವು ಹೆಚ್ಚಿಗೆ ಏನೂ ಹೇಳಲು ಇಚ್ಚಿಸುವುದಿಲ್ಲ ಎಂದು ಹೇಳಿರುವ ಆರತಿ, ತಮಗೆ ನ್ಯಾಯಾಂಗದ ಮೇಲೆ ವಿಶ್ವಾಸ ಇದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ನೆಟ್ಟಿಗರು ವಿವಿಧ ರೀತಿಯ ಕಮೆಂಟ್ ಗಳನ್ನು ಮಾಡುತ್ತಿದ್ದು, ಕೆಲವರು ಪ್ರತಿ ತಿಂಗಳು 40 ಲಕ್ಷ ರೂಪಾಯಿ ಕೇಳಿರುವ ಬಗ್ಗೆ ಟೀಕೆ ಮಾಡಿದ್ದಾರೆ. ಇನ್ನು ಕೆಲವರು ಸಮಂತಾ ತರಹ ಒಂದೂ ರೂಪಾಯಿ ಕೂಡ ಕೇಳದ ಹೆಣ್ಣಿನ ತರಹ ಇರಬೇಕು ಎಂದು ಸಲಹೆ ನೀಡಿದ್ದಾರೆ. ಇನ್ನು ಕೆಲವರು ಮಹಿಳೆಯರು ಪ್ರಬಲರಾಗಿರಬೇಕು, ಹೀಗೆ ಹಣಕ್ಕಾಗಿ ಒತ್ತಾಯಿಸಬಾರದು ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search