• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಬಿಜೆಪಿ ರ್ಯಾಲಿ ಮಾಡಿದರೆ ನಿಮಗೇಕೆ ಉರಿ ಸಿದ್ದರಾಮಯ್ಯನವರೇ?

ರವಿಕುಮಾರ್, ಬೆಳ್ತಂಗಡಿ Posted On September 5, 2017
0


0
Shares
  • Share On Facebook
  • Tweet It

ಈ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ವರಸೆಯೇ ಅರ್ಥವಾಗುವುದಿಲ್ಲ. ನರೇಂದ್ರ ಮೋದಿ ಯಾವುದೇ ನಿರ್ಧಾರ ಕೈಗೊಂಡರೆ ಅದು ನಿರಂಕುಶವಾದ ಎನ್ನುತ್ತಾರೆ. ಬಿಜೆಪಿಯವರು ಕೋಮುವಾದಿಗಳು ಎನ್ನುತ್ತಾರೆ. ದೇಶದಲ್ಲಿ ತುರ್ತು ಪರಿಸ್ಥಿತಿಯಂಥ ವಾತಾವರಣವಿದೆ ಎಂದು ಕಾಂಗ್ರೆಸ್ಸಿಗರು ಬೊಬ್ಬೆ ಹಾಕುತ್ತಾರೆ.

ಆದರೆ ಇಷ್ಟೆಲ್ಲ ಪುಂಗಿ ಊದಿ, ತಾವು ಬದನೆಕಾಯಿ ತಿನ್ನುತ್ತಾರೆ…
ಪ್ರಸ್ತುತ ಬಿಜೆಪಿ ನಡೆಸಲು ಹೊರಟಿರುವ ರ್ಯಾಲಿಗೆ ವಿರೋಧ ವ್ಯಕ್ತಪಡಿಸುತ್ತಿರುವುದು, ಪೊಲೀಸರನ್ನು ಬಿಟ್ಟು ಬಂಧಿಸಿರುವುದು ಬದನೆಕಾಯಿ ತಿನ್ನುವುದು ಅಲ್ಲದೆ ಮತ್ತೇನು?

ಅಷ್ಟಕ್ಕೂ ಪ್ರಜಾಪ್ರಭುತ್ವದಲ್ಲಿ ಒಂದು ರ್ಯಾಲಿಗೂ ಅವಕಾಶವಿಲ್ಲವೇ? ಅವಕಾಶ ಇಲ್ಲ ಎಂದಾದರೆ ಸಿದ್ದರಾಮಯ್ಯನವರದ್ದೇ ನಿರಂಕುಶ ಪ್ರಭುತ್ವವಾಗುವುದಿಲ್ಲವೇ? ಸಿದ್ದರಾಮಯ್ಯ ಹಿಟ್ಲರ್‌ನ ಪ್ರತಿಬಿಂಬವಾಗುವುದಿಲ್ಲವೇ? ನೀವು ಬಳ್ಳಾರಿಗೆ ಪಾದಯಾತ್ರೆ ಮಾಡಿದಾಗ ಯಾರಾದರೂ ಬಂಧಿಸಿದ್ದರೆ ಹೇಗೆ ವರ್ತಿಸುತ್ತಿದ್ದಿರಿ?
ಇಷ್ಟಕ್ಕೂ ಬಿಜೆಪಿಯವರು ರ್ಯಾಲಿ ಮಾಡಹೊರಟಿರುವುದು ಕಾಂಗ್ರೆಸ್ ವಿರುದ್ಧವಲ್ಲ ಅಥವಾ ಸಿದ್ದರಾಮಯ್ಯ ಅವರ ವಿರುದ್ಧವಲ್ಲ. ಬದಲಾಗಿ ಹಲವು ಕೊಲೆ ಆರೋಪದಲ್ಲಿ ಸಿಲುಕಿರುವ ಪಿಎಫ್‌ಐ, ಕೆಎಫ್‌ಡಿ, ಎಸ್‌ಡಿಪಿಐ ಸಂಘಟನೆಗಳ ವಿರುದ್ಧ. ಈ ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವಿರುದ್ಧ ತನಿಖೆ ಮಾಡುವಂತೆ ಕೇರಳದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆೆ (ಎನ್‌ಐಎ)ಯೇ ಆದೇಶ ನೀಡಿದೆ. ಹೀಗಿರುವಾಗ ಕರ್ನಾಟಕದಲ್ಲಿ ಅವುಗಳನ್ನು ನಿಷೇಧಿಸಬೇಕು ಎಂದು ಪ್ರತಿಭಟನೆಯನ್ನೇ ಮಾಡುವುದು ತಪ್ಪು ಎಂದರೆ ನೀವು ಪ್ರಜಾಪ್ರಭುತ್ವಕ್ಕೆ ಎಂಥಾ ಗೌರವ ಕೊಟ್ಟಂತಾಗುತ್ತದೆ ಸಿದ್ದರಾಮಯ್ಯನವರೇ?
ಹರಿಯಾಣದಲ್ಲಿ ಮುಸ್ಲಿಂ ಯುವಕ ಜುನೈದ್ ಖಾನ್‌ನನ್ನು ಹತ್ಯೆ ಮಾಡಿದರೆ ದೇಶಾದ್ಯಂತ ಕಾಂಗ್ರೆಸ್ಸಿಗರು ಬೊಬ್ಬೆ ಹಾಕಿದರು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಬಿಜೆಪಿ, ಕಾಂಗ್ರೆಸ್‌ನ 12 ಕಾರ್ಯಕರ್ತರ ಹತ್ಯೆ ಮಾಡಲಾಗಿದೆ. ಆದರೂ ಸಿಎಂ ಯಾವ ಕ್ರಮ ಕೈಗೊಂಡಿದ್ದಾಾರೆ? ಇದು ಯಾವ ಪ್ರಭುತ್ವ ಎಂದು ವಿವರಿಸಬಲ್ಲಿರಾ?

ಅದಾಗಲೇ ಸಿದ್ದರಾಮಯ್ಯನವರು, ಜಾತಿ, ಧರ್ಮ ನೋಡಿ ಯೋಜನೆ ಜಾರಿಗೆ ತಂದಿದ್ದು ರಾಜ್ಯದ ಜನರಿಗೇ ಗೊತ್ತಿದೆ. ಮುಂದಿನ ವರ್ಷ ಚುನಾವಣೆಯಿದೆ. ಈ ರ್ಯಾಲಿಯಿಂದ ಬಿಜೆಪಿಗೆ ಅನುಕೂಲವಾದರೆ ಎಂಬ ಭಯ ನಿಮ್ಮನ್ನು ನಿರಂಕುಶವನ್ನಾಗಿ ಮಾಡುತ್ತಿದೆಯೇ ಹೇಳಿ.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
ರವಿಕುಮಾರ್, ಬೆಳ್ತಂಗಡಿ July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
ರವಿಕುಮಾರ್, ಬೆಳ್ತಂಗಡಿ July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search