• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಬಿಜೆಪಿ ರ್ಯಾಲಿ ಮಾಡಿದರೆ ನಿಮಗೇಕೆ ಉರಿ ಸಿದ್ದರಾಮಯ್ಯನವರೇ?

ರವಿಕುಮಾರ್, ಬೆಳ್ತಂಗಡಿ Posted On September 5, 2017
0


0
Shares
  • Share On Facebook
  • Tweet It

ಈ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ವರಸೆಯೇ ಅರ್ಥವಾಗುವುದಿಲ್ಲ. ನರೇಂದ್ರ ಮೋದಿ ಯಾವುದೇ ನಿರ್ಧಾರ ಕೈಗೊಂಡರೆ ಅದು ನಿರಂಕುಶವಾದ ಎನ್ನುತ್ತಾರೆ. ಬಿಜೆಪಿಯವರು ಕೋಮುವಾದಿಗಳು ಎನ್ನುತ್ತಾರೆ. ದೇಶದಲ್ಲಿ ತುರ್ತು ಪರಿಸ್ಥಿತಿಯಂಥ ವಾತಾವರಣವಿದೆ ಎಂದು ಕಾಂಗ್ರೆಸ್ಸಿಗರು ಬೊಬ್ಬೆ ಹಾಕುತ್ತಾರೆ.

ಆದರೆ ಇಷ್ಟೆಲ್ಲ ಪುಂಗಿ ಊದಿ, ತಾವು ಬದನೆಕಾಯಿ ತಿನ್ನುತ್ತಾರೆ…
ಪ್ರಸ್ತುತ ಬಿಜೆಪಿ ನಡೆಸಲು ಹೊರಟಿರುವ ರ್ಯಾಲಿಗೆ ವಿರೋಧ ವ್ಯಕ್ತಪಡಿಸುತ್ತಿರುವುದು, ಪೊಲೀಸರನ್ನು ಬಿಟ್ಟು ಬಂಧಿಸಿರುವುದು ಬದನೆಕಾಯಿ ತಿನ್ನುವುದು ಅಲ್ಲದೆ ಮತ್ತೇನು?

ಅಷ್ಟಕ್ಕೂ ಪ್ರಜಾಪ್ರಭುತ್ವದಲ್ಲಿ ಒಂದು ರ್ಯಾಲಿಗೂ ಅವಕಾಶವಿಲ್ಲವೇ? ಅವಕಾಶ ಇಲ್ಲ ಎಂದಾದರೆ ಸಿದ್ದರಾಮಯ್ಯನವರದ್ದೇ ನಿರಂಕುಶ ಪ್ರಭುತ್ವವಾಗುವುದಿಲ್ಲವೇ? ಸಿದ್ದರಾಮಯ್ಯ ಹಿಟ್ಲರ್‌ನ ಪ್ರತಿಬಿಂಬವಾಗುವುದಿಲ್ಲವೇ? ನೀವು ಬಳ್ಳಾರಿಗೆ ಪಾದಯಾತ್ರೆ ಮಾಡಿದಾಗ ಯಾರಾದರೂ ಬಂಧಿಸಿದ್ದರೆ ಹೇಗೆ ವರ್ತಿಸುತ್ತಿದ್ದಿರಿ?
ಇಷ್ಟಕ್ಕೂ ಬಿಜೆಪಿಯವರು ರ್ಯಾಲಿ ಮಾಡಹೊರಟಿರುವುದು ಕಾಂಗ್ರೆಸ್ ವಿರುದ್ಧವಲ್ಲ ಅಥವಾ ಸಿದ್ದರಾಮಯ್ಯ ಅವರ ವಿರುದ್ಧವಲ್ಲ. ಬದಲಾಗಿ ಹಲವು ಕೊಲೆ ಆರೋಪದಲ್ಲಿ ಸಿಲುಕಿರುವ ಪಿಎಫ್‌ಐ, ಕೆಎಫ್‌ಡಿ, ಎಸ್‌ಡಿಪಿಐ ಸಂಘಟನೆಗಳ ವಿರುದ್ಧ. ಈ ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವಿರುದ್ಧ ತನಿಖೆ ಮಾಡುವಂತೆ ಕೇರಳದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆೆ (ಎನ್‌ಐಎ)ಯೇ ಆದೇಶ ನೀಡಿದೆ. ಹೀಗಿರುವಾಗ ಕರ್ನಾಟಕದಲ್ಲಿ ಅವುಗಳನ್ನು ನಿಷೇಧಿಸಬೇಕು ಎಂದು ಪ್ರತಿಭಟನೆಯನ್ನೇ ಮಾಡುವುದು ತಪ್ಪು ಎಂದರೆ ನೀವು ಪ್ರಜಾಪ್ರಭುತ್ವಕ್ಕೆ ಎಂಥಾ ಗೌರವ ಕೊಟ್ಟಂತಾಗುತ್ತದೆ ಸಿದ್ದರಾಮಯ್ಯನವರೇ?
ಹರಿಯಾಣದಲ್ಲಿ ಮುಸ್ಲಿಂ ಯುವಕ ಜುನೈದ್ ಖಾನ್‌ನನ್ನು ಹತ್ಯೆ ಮಾಡಿದರೆ ದೇಶಾದ್ಯಂತ ಕಾಂಗ್ರೆಸ್ಸಿಗರು ಬೊಬ್ಬೆ ಹಾಕಿದರು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಬಿಜೆಪಿ, ಕಾಂಗ್ರೆಸ್‌ನ 12 ಕಾರ್ಯಕರ್ತರ ಹತ್ಯೆ ಮಾಡಲಾಗಿದೆ. ಆದರೂ ಸಿಎಂ ಯಾವ ಕ್ರಮ ಕೈಗೊಂಡಿದ್ದಾಾರೆ? ಇದು ಯಾವ ಪ್ರಭುತ್ವ ಎಂದು ವಿವರಿಸಬಲ್ಲಿರಾ?

ಅದಾಗಲೇ ಸಿದ್ದರಾಮಯ್ಯನವರು, ಜಾತಿ, ಧರ್ಮ ನೋಡಿ ಯೋಜನೆ ಜಾರಿಗೆ ತಂದಿದ್ದು ರಾಜ್ಯದ ಜನರಿಗೇ ಗೊತ್ತಿದೆ. ಮುಂದಿನ ವರ್ಷ ಚುನಾವಣೆಯಿದೆ. ಈ ರ್ಯಾಲಿಯಿಂದ ಬಿಜೆಪಿಗೆ ಅನುಕೂಲವಾದರೆ ಎಂಬ ಭಯ ನಿಮ್ಮನ್ನು ನಿರಂಕುಶವನ್ನಾಗಿ ಮಾಡುತ್ತಿದೆಯೇ ಹೇಳಿ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
ರವಿಕುಮಾರ್, ಬೆಳ್ತಂಗಡಿ November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
ರವಿಕುಮಾರ್, ಬೆಳ್ತಂಗಡಿ November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search