• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಬಿಜೆಪಿ ರ್ಯಾಲಿ ಮಾಡಿದರೆ ನಿಮಗೇಕೆ ಉರಿ ಸಿದ್ದರಾಮಯ್ಯನವರೇ?

ರವಿಕುಮಾರ್, ಬೆಳ್ತಂಗಡಿ Posted On September 5, 2017
0


0
Shares
  • Share On Facebook
  • Tweet It

ಈ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ವರಸೆಯೇ ಅರ್ಥವಾಗುವುದಿಲ್ಲ. ನರೇಂದ್ರ ಮೋದಿ ಯಾವುದೇ ನಿರ್ಧಾರ ಕೈಗೊಂಡರೆ ಅದು ನಿರಂಕುಶವಾದ ಎನ್ನುತ್ತಾರೆ. ಬಿಜೆಪಿಯವರು ಕೋಮುವಾದಿಗಳು ಎನ್ನುತ್ತಾರೆ. ದೇಶದಲ್ಲಿ ತುರ್ತು ಪರಿಸ್ಥಿತಿಯಂಥ ವಾತಾವರಣವಿದೆ ಎಂದು ಕಾಂಗ್ರೆಸ್ಸಿಗರು ಬೊಬ್ಬೆ ಹಾಕುತ್ತಾರೆ.

ಆದರೆ ಇಷ್ಟೆಲ್ಲ ಪುಂಗಿ ಊದಿ, ತಾವು ಬದನೆಕಾಯಿ ತಿನ್ನುತ್ತಾರೆ…
ಪ್ರಸ್ತುತ ಬಿಜೆಪಿ ನಡೆಸಲು ಹೊರಟಿರುವ ರ್ಯಾಲಿಗೆ ವಿರೋಧ ವ್ಯಕ್ತಪಡಿಸುತ್ತಿರುವುದು, ಪೊಲೀಸರನ್ನು ಬಿಟ್ಟು ಬಂಧಿಸಿರುವುದು ಬದನೆಕಾಯಿ ತಿನ್ನುವುದು ಅಲ್ಲದೆ ಮತ್ತೇನು?

ಅಷ್ಟಕ್ಕೂ ಪ್ರಜಾಪ್ರಭುತ್ವದಲ್ಲಿ ಒಂದು ರ್ಯಾಲಿಗೂ ಅವಕಾಶವಿಲ್ಲವೇ? ಅವಕಾಶ ಇಲ್ಲ ಎಂದಾದರೆ ಸಿದ್ದರಾಮಯ್ಯನವರದ್ದೇ ನಿರಂಕುಶ ಪ್ರಭುತ್ವವಾಗುವುದಿಲ್ಲವೇ? ಸಿದ್ದರಾಮಯ್ಯ ಹಿಟ್ಲರ್‌ನ ಪ್ರತಿಬಿಂಬವಾಗುವುದಿಲ್ಲವೇ? ನೀವು ಬಳ್ಳಾರಿಗೆ ಪಾದಯಾತ್ರೆ ಮಾಡಿದಾಗ ಯಾರಾದರೂ ಬಂಧಿಸಿದ್ದರೆ ಹೇಗೆ ವರ್ತಿಸುತ್ತಿದ್ದಿರಿ?
ಇಷ್ಟಕ್ಕೂ ಬಿಜೆಪಿಯವರು ರ್ಯಾಲಿ ಮಾಡಹೊರಟಿರುವುದು ಕಾಂಗ್ರೆಸ್ ವಿರುದ್ಧವಲ್ಲ ಅಥವಾ ಸಿದ್ದರಾಮಯ್ಯ ಅವರ ವಿರುದ್ಧವಲ್ಲ. ಬದಲಾಗಿ ಹಲವು ಕೊಲೆ ಆರೋಪದಲ್ಲಿ ಸಿಲುಕಿರುವ ಪಿಎಫ್‌ಐ, ಕೆಎಫ್‌ಡಿ, ಎಸ್‌ಡಿಪಿಐ ಸಂಘಟನೆಗಳ ವಿರುದ್ಧ. ಈ ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವಿರುದ್ಧ ತನಿಖೆ ಮಾಡುವಂತೆ ಕೇರಳದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆೆ (ಎನ್‌ಐಎ)ಯೇ ಆದೇಶ ನೀಡಿದೆ. ಹೀಗಿರುವಾಗ ಕರ್ನಾಟಕದಲ್ಲಿ ಅವುಗಳನ್ನು ನಿಷೇಧಿಸಬೇಕು ಎಂದು ಪ್ರತಿಭಟನೆಯನ್ನೇ ಮಾಡುವುದು ತಪ್ಪು ಎಂದರೆ ನೀವು ಪ್ರಜಾಪ್ರಭುತ್ವಕ್ಕೆ ಎಂಥಾ ಗೌರವ ಕೊಟ್ಟಂತಾಗುತ್ತದೆ ಸಿದ್ದರಾಮಯ್ಯನವರೇ?
ಹರಿಯಾಣದಲ್ಲಿ ಮುಸ್ಲಿಂ ಯುವಕ ಜುನೈದ್ ಖಾನ್‌ನನ್ನು ಹತ್ಯೆ ಮಾಡಿದರೆ ದೇಶಾದ್ಯಂತ ಕಾಂಗ್ರೆಸ್ಸಿಗರು ಬೊಬ್ಬೆ ಹಾಕಿದರು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಬಿಜೆಪಿ, ಕಾಂಗ್ರೆಸ್‌ನ 12 ಕಾರ್ಯಕರ್ತರ ಹತ್ಯೆ ಮಾಡಲಾಗಿದೆ. ಆದರೂ ಸಿಎಂ ಯಾವ ಕ್ರಮ ಕೈಗೊಂಡಿದ್ದಾಾರೆ? ಇದು ಯಾವ ಪ್ರಭುತ್ವ ಎಂದು ವಿವರಿಸಬಲ್ಲಿರಾ?

ಅದಾಗಲೇ ಸಿದ್ದರಾಮಯ್ಯನವರು, ಜಾತಿ, ಧರ್ಮ ನೋಡಿ ಯೋಜನೆ ಜಾರಿಗೆ ತಂದಿದ್ದು ರಾಜ್ಯದ ಜನರಿಗೇ ಗೊತ್ತಿದೆ. ಮುಂದಿನ ವರ್ಷ ಚುನಾವಣೆಯಿದೆ. ಈ ರ್ಯಾಲಿಯಿಂದ ಬಿಜೆಪಿಗೆ ಅನುಕೂಲವಾದರೆ ಎಂಬ ಭಯ ನಿಮ್ಮನ್ನು ನಿರಂಕುಶವನ್ನಾಗಿ ಮಾಡುತ್ತಿದೆಯೇ ಹೇಳಿ.

0
Shares
  • Share On Facebook
  • Tweet It




Trending Now
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
ರವಿಕುಮಾರ್, ಬೆಳ್ತಂಗಡಿ January 19, 2026
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
ರವಿಕುಮಾರ್, ಬೆಳ್ತಂಗಡಿ January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
  • Popular Posts

    • 1
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 2
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 3
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search