• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!

Tulunadu News Posted On May 22, 2025
0


0
Shares
  • Share On Facebook
  • Tweet It

ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಜ್ ಲಿ. ನ ಅಧಿಕೃತ ಬ್ರಾಂಡ್ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಅವರನ್ನು ರಾಜ್ಯ ಸರಕಾರ ನೇಮಿಸಿದೆ. ಇವರು ಎರಡು ವರ್ಷ ಎರಡು ದಿನಗಳ ಅವಧಿಗೆ ನೇಮಕವಾಗಿದ್ದಾರೆ. ಇವರಿಗೆ ಇದಕ್ಕಾಗಿ ಆರು ಕೋಟಿ 20 ಲಕ್ಷ ರೂಪಾಯಿಗಳನ್ನು ನೀಡುವ ಒಪ್ಪಂದ ಮಾಡಲಾಗಿದೆ.

ಈ ವಿಷಯದಲ್ಲಿ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಏಕ್ಸ್ ನಲ್ಲಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ಯಾವ ನಟಿ ಕೂಡ ಇಲ್ಲದೇ ಕಳೆದ ವರ್ಷ 400 ಕೋಟಿ ಲಾಭ ಮಾಡಿರೋ ಸೋಪ್ ಕಂಪೆನಿ. ಈಗ ಆ ದುಡ್ಡು ಹೇಗೆ ಖರ್ಚು ಮಾಡ್ಬೇಕು ಅಂತ 6 ಕೋಟಿ ಕೊಟ್ಟು ಇವರನ್ನು ಬ್ರಾಂಡ್ ಅಂಬಾಸಿಡರ್ ಮಾಡೋದೇನಿದೆ. ಬೇಕು ಅಂದ್ರೆ ಯಾಕೆ ಕರ್ನಾಟಕದಲ್ಲಿ ಯಾರು ಇಲ್ಲವೇ? ಜನರ ದುಡ್ಡನ್ನು ಹೀಗೆ ಪೋಲು ಮಾಡೋದು ಸರಿಯೇ? ಕೂಡಲೇ ಇದು ರದ್ದು ಮಾಡಿ. ಹೀಗೆ ಬರೆದು ಸಚಿವರಾದ ಎಂಬಿ ಪಾಟೀಲ್ ಹಾಗೂ ಸಿಎಂ ಕಚೇರಿಗೆ ಟ್ಯಾಗ್ ಮಾಡಿದ್ದಾರೆ.


ಒಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಈ ವಿಷಯ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ. ತಮನ್ನಾ ಭಾಟಿಯಾ ಅವರು ರಾಷ್ಟ್ರದ ಪ್ರಖ್ಯಾತ ನಟಿ. ಆದರೆ ಸರಕಾರದ ಸೋಪು ಮತ್ತು ಡಿಟರ್ಜೆಂಟ್ ಪ್ರಚಾರಕ್ಕೆ ಇವರೇ ಬೇಕಿತ್ತಾ ಎನ್ನುವ ಪ್ರಶ್ನೆ ಉದ್ಭವಿಸಲಿದೆ. ಕರ್ನಾಟಕದಲ್ಲಿಯೂ ಪ್ರಖ್ಯಾತ ಕಲಾವಿದರಿದ್ದಾರೆ. ಇನ್ನು ನಮ್ಮ ಉತ್ಪನ್ನಗಳು ರಾಷ್ಟ್ರವ್ಯಾಪಿ ಪ್ರಚಾರವಾಗಬೇಕಾದರೆ ರಾಷ್ಟ್ರದ ಪ್ರಖ್ಯಾತ ನಟ, ನಟಿಯರು ಬೇಕು ಎನ್ನುವ ಕಾರಣಕ್ಕೆ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿರಬಹುದು ಎನ್ನುವ ವಾದವೂ ಇದೆ. ಆದರೆ ಕರ್ನಾಟಕದಲ್ಲದವರೊಂದಿಗೆ ಇಷ್ಟು ದೊಡ್ಡ ಮೊತ್ತಕ್ಕೆ ಒಪ್ಪಂದ ಮಾಡಿರುವುದು ಮುಂದಿನ ದಿನಗಳಲ್ಲಿ ಇದು ಮೈಸೂರ್ ಸ್ಯಾಂಡಲ್ ಸೋಪ್ ಗೆ ಎಷ್ಟು ಲಾಭ ತರುತ್ತದೆ ಎನ್ನುವುದು ಕಾಲವೇ ಉತ್ತರಿಸುತ್ತದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search