• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!

Tulunadu News Posted On May 22, 2025
0


0
Shares
  • Share On Facebook
  • Tweet It

ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಜ್ ಲಿ. ನ ಅಧಿಕೃತ ಬ್ರಾಂಡ್ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಅವರನ್ನು ರಾಜ್ಯ ಸರಕಾರ ನೇಮಿಸಿದೆ. ಇವರು ಎರಡು ವರ್ಷ ಎರಡು ದಿನಗಳ ಅವಧಿಗೆ ನೇಮಕವಾಗಿದ್ದಾರೆ. ಇವರಿಗೆ ಇದಕ್ಕಾಗಿ ಆರು ಕೋಟಿ 20 ಲಕ್ಷ ರೂಪಾಯಿಗಳನ್ನು ನೀಡುವ ಒಪ್ಪಂದ ಮಾಡಲಾಗಿದೆ.

ಈ ವಿಷಯದಲ್ಲಿ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಏಕ್ಸ್ ನಲ್ಲಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ಯಾವ ನಟಿ ಕೂಡ ಇಲ್ಲದೇ ಕಳೆದ ವರ್ಷ 400 ಕೋಟಿ ಲಾಭ ಮಾಡಿರೋ ಸೋಪ್ ಕಂಪೆನಿ. ಈಗ ಆ ದುಡ್ಡು ಹೇಗೆ ಖರ್ಚು ಮಾಡ್ಬೇಕು ಅಂತ 6 ಕೋಟಿ ಕೊಟ್ಟು ಇವರನ್ನು ಬ್ರಾಂಡ್ ಅಂಬಾಸಿಡರ್ ಮಾಡೋದೇನಿದೆ. ಬೇಕು ಅಂದ್ರೆ ಯಾಕೆ ಕರ್ನಾಟಕದಲ್ಲಿ ಯಾರು ಇಲ್ಲವೇ? ಜನರ ದುಡ್ಡನ್ನು ಹೀಗೆ ಪೋಲು ಮಾಡೋದು ಸರಿಯೇ? ಕೂಡಲೇ ಇದು ರದ್ದು ಮಾಡಿ. ಹೀಗೆ ಬರೆದು ಸಚಿವರಾದ ಎಂಬಿ ಪಾಟೀಲ್ ಹಾಗೂ ಸಿಎಂ ಕಚೇರಿಗೆ ಟ್ಯಾಗ್ ಮಾಡಿದ್ದಾರೆ.


ಒಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಈ ವಿಷಯ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ. ತಮನ್ನಾ ಭಾಟಿಯಾ ಅವರು ರಾಷ್ಟ್ರದ ಪ್ರಖ್ಯಾತ ನಟಿ. ಆದರೆ ಸರಕಾರದ ಸೋಪು ಮತ್ತು ಡಿಟರ್ಜೆಂಟ್ ಪ್ರಚಾರಕ್ಕೆ ಇವರೇ ಬೇಕಿತ್ತಾ ಎನ್ನುವ ಪ್ರಶ್ನೆ ಉದ್ಭವಿಸಲಿದೆ. ಕರ್ನಾಟಕದಲ್ಲಿಯೂ ಪ್ರಖ್ಯಾತ ಕಲಾವಿದರಿದ್ದಾರೆ. ಇನ್ನು ನಮ್ಮ ಉತ್ಪನ್ನಗಳು ರಾಷ್ಟ್ರವ್ಯಾಪಿ ಪ್ರಚಾರವಾಗಬೇಕಾದರೆ ರಾಷ್ಟ್ರದ ಪ್ರಖ್ಯಾತ ನಟ, ನಟಿಯರು ಬೇಕು ಎನ್ನುವ ಕಾರಣಕ್ಕೆ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿರಬಹುದು ಎನ್ನುವ ವಾದವೂ ಇದೆ. ಆದರೆ ಕರ್ನಾಟಕದಲ್ಲದವರೊಂದಿಗೆ ಇಷ್ಟು ದೊಡ್ಡ ಮೊತ್ತಕ್ಕೆ ಒಪ್ಪಂದ ಮಾಡಿರುವುದು ಮುಂದಿನ ದಿನಗಳಲ್ಲಿ ಇದು ಮೈಸೂರ್ ಸ್ಯಾಂಡಲ್ ಸೋಪ್ ಗೆ ಎಷ್ಟು ಲಾಭ ತರುತ್ತದೆ ಎನ್ನುವುದು ಕಾಲವೇ ಉತ್ತರಿಸುತ್ತದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search