• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!

Tulunadu News Posted On May 23, 2025
0


0
Shares
  • Share On Facebook
  • Tweet It

ಭಾರತೀಯರು ವಿಶೇಷವಾಗಿ ರಾಜಸ್ಥಾನದ ಸಿಹಿ ತಿಂಡಿ ವ್ಯಾಪಾರಿಗಳು ಯಾವುದೇ ಕಾರಣಕ್ಕೂ ತಮ್ಮ ಸಿಹಿತಿಂಡಿಗಳ ಹೆಸರಿನಲ್ಲಿ ಒಂದು ಅಕ್ಷರವೂ ಪಾಕ್ ಎಂದು ಇರುವುದನ್ನು ಸಹಿಸುವುದಿಲ್ಲ ಎನ್ನುವುದನ್ನು ನಿರೂಪಿಸಿದ್ದಾರೆ. ಪಾಕಿಸ್ತಾನದ ಮೇಲೆ ಭಾರತದ ಆಪರೇಶನ್ ಸಿಂಧೂರ ಕಾರ್ಯಾಚರಣೆಯ ಯಶಸ್ಸಿನಿಂದ ಉತ್ತೇಜಿತರಾಗಿರುವ ಉದ್ಯಮಿಗಳು ತಮ್ಮ ಮಳಿಗೆಯಲ್ಲಿ ಒಂದೇ ಒಂದು ಪಾಕ್ ಶಬ್ದ ಇರಬಾರದು ಎಂದು ನಿರ್ಧರಿಸಿದ್ದಾರೆ.

ಜೈಪುರದಲ್ಲಿ ಮಾರುವ ಸಿಹಿತಿಂಡಿಗಳಾದ ಮೋತಿ ಪಾಕ್, ಆಮ್ ಪಾಕ್, ಗೋಂಡ್ ಪಾಕ್, ಮೈಸೂರ್ ಪಾಕ್ ಮತ್ತು ಇತರ ಪಾಕ್ ಹೆಸರಿನ ಸಿಹಿತಿಂಡಿಗಳು ಇನ್ನು ಮುಂದೆ ಮೋತಿ ಶ್ರೀ, ಆಮ್ ಶ್ರೀ, ಗೋಂಡ್ ಶ್ರೀ, ಮೈಸೂರು ಶ್ರೀ ಹೆಸರಿನಿಂದ ಕರೆಯಲ್ಪಡಲಿವೆ. ಇದು ಒಂದಿಷ್ಟು ವಿಪರೀತವಾಯಿತು ಎಂದು ಕೆಲವರಿಗೆ ಅನಿಸಬಹುದು. ಆದರೆ ರಾಷ್ಟ್ರಭಕ್ತಿಯ ವಿಷಯ ಬಂದಾಗ ಇದು ಭವಿಷ್ಯದಲ್ಲಿ ನಿಜಕ್ಕೂ ಉತ್ತಮ ಕಾರ್ಯ ಎಂದು ಅನಿಸದೇ ಇರದು.

ಅಲ್ಲಿನ ಸಿಹಿ ವ್ಯಾಪಾರಿಗಳ ಪ್ರಕಾರ, ಅಬ್ಬರದ ದೇಶಭಕ್ತಿಯನ್ನು ಮೈಗೂಡಿಸಿಕೊಂಡಾಗ ಇದೆಲ್ಲ ಸಹಜ. ಆಗ ಇದಕ್ಕೆ ಯಾವುದೇ ಲಾಜಿಕ್ ಹೊಂದುವುದಿಲ್ಲ. ಇನ್ನು ಈ ವಿಷಯದಲ್ಲಿ ಸರಿ ಮತ್ತು ತಪ್ಪುಗಳ ಚರ್ಚೆ ಅಗತ್ಯವೂ ಇರುವುದಿಲ್ಲ ಎಂದಿದ್ದಾರೆ. ಇಲ್ಲಿ ಪಾಕ್ ಎಂದರೆ ಪಾಕಿಸ್ತಾನದ ಶಾರ್ಟ್ ಫಾರಂ ಅಲ್ಲ ಎನ್ನುವುದನ್ನು ಯಾರೂ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅಷ್ಟಕ್ಕೂ ಸಿಹಿ ತಿಂಡಿಗಳೊಂದಿಗೆ ಪಾಕ್ ಎನ್ನುವ ಶಬ್ದ ಬಂದದ್ದು ಹೇಗೆ ಎಂದರೆ ಅದು ಪಾಕ ಎನ್ನುವ ಶಬ್ದವೇ ಆಗಿದೆ. ಇನ್ನು ಪಾಕ್ ಅಥವಾ ಪಾಕ್ ಎಂದರೆ ಅದು ಸಿಹಿ ತಿಂಡಿ ತಯಾರಿಸುವಾಗ ಉತ್ಪಾದಿಸಲಾಗುವ ಸಿಹಿದ್ರಾವಣ.

ಇನ್ನು ಹಿಂದಿ ಪಂಡಿತರ ಪ್ರಕಾರ ಹಿಂದಿ ಭಾಷೆಯಲ್ಲಿಯೂ ಪಾಗ್ ಎನ್ನುವ ಶಬ್ದ ಬಳಕೆಯಲ್ಲಿದೆ. ಪಾಗ್ ಎಂದರೆ ಸಿಹಿ ಸಿರಪ್ ಎಂದೇ ಉಲ್ಲೇಖಿಸಬಹುದು. ಈ ಕನ್ನಡದ ಪಾಕ ಮತ್ತು ಹಿಂದಿಯ ಪಾಗ ಎರಡೂ ಕೂಡ ಮೂಲ ಸಂಸ್ಕೃತದ ಶಬ್ದಗಳಾಗಿದ್ದು, ಅದರಲ್ಲಿ ಪಾಕ್ವ ಎಂದು ಹೇಳಲಾಗುತ್ತದೆ. ಅದರ ಮೂಲ ಅರ್ಥ ಬೇಯಿಸಿದ ಆಹಾರ ಎಂದೇ ಉಲ್ಲೇಖಿಸಲಾಗಿದೆ. ಒಟ್ಟಿನಲ್ಲಿ ಲಾಜಿಕ್ ಇಲ್ಲಿ ಅನ್ವಯವಾಗುವುದಿಲ್ಲ. ಯಾಕೆಂದರೆ ಪಾಕ್ ಎನ್ನುವುದು ನಮ್ಮ ಶತ್ರು ರಾಷ್ಟ್ರ. ಅದರ ಯಾವ ಸಣ್ಣ ನಿಶಾನೆಯೂ ನಮ್ಮ ಆಹಾರ ವಸ್ತುಗಳಲ್ಲಿ ಇರಬಾರದು ಎಂದು ಜೈಪುರದ ವ್ಯಾಪಾರಿಗಳು ದೃಢ ನಿರ್ಧಾರ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
Tulunadu News August 9, 2025
ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
Tulunadu News August 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
    • ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
    • ಬೈಕಂಪಾಡಿಯಲ್ಲಿ ಅಮೋನಿಯಾ ಅನಿಲ ಸೋರಿಕೆ, ನಾಲ್ವರು ತೀವ್ರ ಅಸ್ವಸ್ಥ!
    • 2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
    • ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
  • Popular Posts

    • 1
      ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • 2
      ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • 3
      ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
    • 4
      ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • 5
      ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!

  • Privacy Policy
  • Contact
© Tulunadu Infomedia.

Press enter/return to begin your search