• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!

Tulunadu News Posted On May 23, 2025
0


0
Shares
  • Share On Facebook
  • Tweet It

ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಸೇರಿದ ತಿರುಮಲ ದೇವಸ್ಥಾನದ ಕಾಂಪ್ಲೆಕ್ಸ್ ನಲ್ಲಿ ವ್ಯಕ್ತಿಯೊಬ್ಬ ನಮಾಜ್ ಸಲ್ಲಿಸುತ್ತಿರುವುದು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಷಯ ಅಲ್ಲಿನ ಸ್ಥಳೀಯರಲ್ಲಿ ಮತ್ತು ದೇವಳದ ಭಕ್ತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ವ್ಯಕ್ತಿ ನಮಾಜ್ ಸಲ್ಲಿಸಿದ್ದು ತಿರುಮಲ ಕಲ್ಯಾಣ ಮಂಟಪದ ಆವರಣದಲ್ಲಿ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಈ ದೃಶ್ಯ ಈಗ ವೈರಲ್ ಆಗಿದೆ.

ಈ ದೃಶ್ಯದಲ್ಲಿ ತಲೆಗೆ ಧಾರ್ಮಿಕ ಶಿರಸ್ತ್ರಾಣ ಧರಿಸಿದ ವ್ಯಕ್ತಿ ನಮಾಜ್ ಸಲ್ಲಿಸುತ್ತಿದ್ದು, ಅದು ಪುರೋಹಿತ್ ಸಂಗಮ್ ಪ್ರದೇಶದ ವ್ಯಾಪ್ತಿಗೆ ಬರುತ್ತದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಇದರ ವಿಜಿಲೆನ್ಸ್ ತಂಡ ತನಿಖೆಯನ್ನು ಆರಂಭಿಸಿದ್ದು, ವ್ಯಕ್ತಿಯ ಪತ್ತೆಗಾಗಿ ತಂಡಗಳನ್ನು ರಚಿಸಲಾಗಿದೆ. ಸದ್ಯ ಆ ವ್ಯಕ್ತಿ ಬಾಡಿಗೆ ವಾಹನದ ಚಾಲಕ ಎಂದು ಹೇಳಲಾಗುತ್ತಿದ್ದು, ಹಿಂದೂ ಯಾತ್ರಿಗಳನ್ನು ಕರೆದುಕೊಂಡು ತಿರುಪತಿಗೆ ಬಂದಿದ್ದ ಎನ್ನಲಾಗುತ್ತಿದೆ. ಹತ್ತು ನಿಮಿಷದ ತನಕ

ನಮಾಜ್ ಸಲ್ಲಿಸಿ ನಂತರ ಆ ವ್ಯಕ್ತಿ ನಂತರ ಅಲ್ಲಿಂದ ತೆರಳಿದ್ದಾನೆ. ನಮಾಜ್ ಸಲ್ಲಿಸುವ ಮೊದಲು ಅಲ್ಲಿನ ಸ್ಥಳೀಯ ವ್ಯಕ್ತಿಯೊಬ್ಬರ ಬಳಿ ಅನುಮತಿಯನ್ನು ಆ ಚಾಲಕ ಕೇಳಿದ್ದಾರೆ. ಅದಕ್ಕೆ ಆ ಸ್ಥಳೀಯ ವ್ಯಕ್ತಿ ಸಮ್ಮತಿಸಿದ ನಂತರವೇ ನಮಾಜ್ ಸಲ್ಲಿಸಲಾಗಿದೆ. ಆದರೆ ಅನುಮತಿ ನೀಡಿದ ವ್ಯಕ್ತಿ ನಮಾಜ್ ಸಲ್ಲಿಸುವ ದೃಶ್ಯ ಚಿತ್ರಿಸಿ ವೈರಲ್ ಮಾಡಿದ್ದಾನೆ ಎಂದು ಕೂಡ ಹೇಳಲಾಗುತ್ತದೆ. ಭಾರತೀಯ ಜನತಾ ಪಾರ್ಟಿ ಈ ಘಟನೆಯನ್ನು ಖಂಡಿಸಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ನಮಾಜ್ ಸಲ್ಲಿಸಿದ ವ್ಯಕ್ತಿಯನ್ನು ಹುಡುಕುತ್ತಿದ್ದಾರೆ.

 

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search