• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!

Tulunadu News Posted On May 23, 2025
0


0
Shares
  • Share On Facebook
  • Tweet It

ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಸೇರಿದ ತಿರುಮಲ ದೇವಸ್ಥಾನದ ಕಾಂಪ್ಲೆಕ್ಸ್ ನಲ್ಲಿ ವ್ಯಕ್ತಿಯೊಬ್ಬ ನಮಾಜ್ ಸಲ್ಲಿಸುತ್ತಿರುವುದು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಷಯ ಅಲ್ಲಿನ ಸ್ಥಳೀಯರಲ್ಲಿ ಮತ್ತು ದೇವಳದ ಭಕ್ತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ವ್ಯಕ್ತಿ ನಮಾಜ್ ಸಲ್ಲಿಸಿದ್ದು ತಿರುಮಲ ಕಲ್ಯಾಣ ಮಂಟಪದ ಆವರಣದಲ್ಲಿ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಈ ದೃಶ್ಯ ಈಗ ವೈರಲ್ ಆಗಿದೆ.

ಈ ದೃಶ್ಯದಲ್ಲಿ ತಲೆಗೆ ಧಾರ್ಮಿಕ ಶಿರಸ್ತ್ರಾಣ ಧರಿಸಿದ ವ್ಯಕ್ತಿ ನಮಾಜ್ ಸಲ್ಲಿಸುತ್ತಿದ್ದು, ಅದು ಪುರೋಹಿತ್ ಸಂಗಮ್ ಪ್ರದೇಶದ ವ್ಯಾಪ್ತಿಗೆ ಬರುತ್ತದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಇದರ ವಿಜಿಲೆನ್ಸ್ ತಂಡ ತನಿಖೆಯನ್ನು ಆರಂಭಿಸಿದ್ದು, ವ್ಯಕ್ತಿಯ ಪತ್ತೆಗಾಗಿ ತಂಡಗಳನ್ನು ರಚಿಸಲಾಗಿದೆ. ಸದ್ಯ ಆ ವ್ಯಕ್ತಿ ಬಾಡಿಗೆ ವಾಹನದ ಚಾಲಕ ಎಂದು ಹೇಳಲಾಗುತ್ತಿದ್ದು, ಹಿಂದೂ ಯಾತ್ರಿಗಳನ್ನು ಕರೆದುಕೊಂಡು ತಿರುಪತಿಗೆ ಬಂದಿದ್ದ ಎನ್ನಲಾಗುತ್ತಿದೆ. ಹತ್ತು ನಿಮಿಷದ ತನಕ

ನಮಾಜ್ ಸಲ್ಲಿಸಿ ನಂತರ ಆ ವ್ಯಕ್ತಿ ನಂತರ ಅಲ್ಲಿಂದ ತೆರಳಿದ್ದಾನೆ. ನಮಾಜ್ ಸಲ್ಲಿಸುವ ಮೊದಲು ಅಲ್ಲಿನ ಸ್ಥಳೀಯ ವ್ಯಕ್ತಿಯೊಬ್ಬರ ಬಳಿ ಅನುಮತಿಯನ್ನು ಆ ಚಾಲಕ ಕೇಳಿದ್ದಾರೆ. ಅದಕ್ಕೆ ಆ ಸ್ಥಳೀಯ ವ್ಯಕ್ತಿ ಸಮ್ಮತಿಸಿದ ನಂತರವೇ ನಮಾಜ್ ಸಲ್ಲಿಸಲಾಗಿದೆ. ಆದರೆ ಅನುಮತಿ ನೀಡಿದ ವ್ಯಕ್ತಿ ನಮಾಜ್ ಸಲ್ಲಿಸುವ ದೃಶ್ಯ ಚಿತ್ರಿಸಿ ವೈರಲ್ ಮಾಡಿದ್ದಾನೆ ಎಂದು ಕೂಡ ಹೇಳಲಾಗುತ್ತದೆ. ಭಾರತೀಯ ಜನತಾ ಪಾರ್ಟಿ ಈ ಘಟನೆಯನ್ನು ಖಂಡಿಸಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ನಮಾಜ್ ಸಲ್ಲಿಸಿದ ವ್ಯಕ್ತಿಯನ್ನು ಹುಡುಕುತ್ತಿದ್ದಾರೆ.

 

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search