• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!

Tulunadu News Posted On May 24, 2025


  • Share On Facebook
  • Tweet It

ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಕನ್ಯಾನದಲ್ಲಿ ನಡೆದಿದೆ. ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ಚಾಲಕ ಸತೀಶ್ (33) ಮೃತ ದುರ್ದೈವಿ. ಪತ್ನಿಯ ಸೀಮಂತದ ದಿನ ಕುಸಿದು ಬಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ತಂದೆ, ತಾಯಿ, ಪತ್ನಿಯನ್ನು ಅಗಲಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಯುವ ಸಮುದಾಯದಲ್ಲಿ ಈ ಹಠಾತ್ತನೇ ಹೃದಯಾಘಾತ ಸಂಭವಿಸುತ್ತಿರುವುದು ನಿಜಕ್ಕೂ ಆತಂಕಕಾರಿಯಾಗಿರುವ ವಿಷಯ. ಕನ್ನಡದ ಖ್ಯಾತ ನಟ ಪುನೀತ್ ರಾಜಕುಮಾರ್ ಅವರಿಂದ ಹಿಡಿದು ಇತ್ತೀಚೆಗೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿಯವರ ತನಕ ಅನೇಕ ಯುವ ಹೃದಯಗಳು ಹಠಾತ್ತನೇ ಆಘಾತಗೊಳಗಾಗಿ ತಮ್ಮ ಉಸಿರನ್ನೇ ನಿಲ್ಲಿಸಿವೆ. ಇದಕ್ಕೆ ಕಾರಣಗಳು ಏನು ಎನ್ನುವುದರ ಬಗ್ಗೆ ಇಲ್ಲಿಯ ತನಕ ಸಮರ್ಪಕವಾಗಿರುವ ಉತ್ತರ ಯಾರ ಬಳಿಯಲ್ಲಿಯೂ ಇಲ್ಲ. ಯಾಕೆ? ಬೇರೆ ಬೇರೆ ಜನರು ತಮಗೆ ತೋಚಿದ್ದನ್ನು ಹೇಳಬಹುದು.

ಕೋವಿಡ್ ಲಸಿಕೆಗಳ ಬಗ್ಗೆ ಆರೋಪ ಮಾಡಿದವರೂ ಇದ್ದಾರೆ. ಈ ಕಾಲದ ಆಹಾರ ಶೈಲಿ, ಜೀವನ ಕ್ರಮ, ವ್ಯಾಯಾಮದ ಕೊರತೆ ಹೀಗೆ ಬೇರೆ ಬೇರೆ ಕಾರಣಗಳನ್ನು ಪಟ್ಟಿ ಮಾಡುತ್ತಾರೆ. ಆದರೆ ನಿರ್ದಿಷ್ಟವಾಗಿ ಇದೇ ಕಾರಣಕ್ಕೆ ಯುವಜನರಲ್ಲಿ ಹೃದಯಾಘಾತವಾಗುತ್ತಿದೆ ಎಂದು ಹೇಳುವ ಯಾವುದೇ ಅಧ್ಯಯನ ಇಲ್ಲಿಯ ತನಕ ನಡೆದಿಲ್ಲ. ಹೆಚ್ಚಿನ ಸಂದರ್ಭದಲ್ಲಿ ಯುವಕರು ಖುಷಿ ಖುಷಿಯಾಗಿ ಇರುವಾಗಲೇ ಸಾವನ್ನಪ್ಪುತ್ತಿದ್ದಾರೆ.

ಹೀಗೆ ಸಾವು ಸಂಭವಿಸುತ್ತಿರುವುದು ನಿಜಕ್ಕೂ ಯೋಚನೆ ಮಾಡಬೇಕಾದ ಸಂಗತಿ. ಈ ಹಠಾತ್ ಅಂತ್ಯಗಳಿಗೆ ಸೂಕ್ತ ಉತ್ತರ ಕಂಡುಹಿಡಿಯದೇ ಹೋದ್ದಲ್ಲಿ ಭವಿಷ್ಯದಲ್ಲಿ ನಮ್ಮ ದೇಶ ಅಮೂಲ್ಯವಾದ ಯುವಶಕ್ತಿಗಳನ್ನು ಕಳೆದುಕೊಂಡರೆ ಅದರಿಂದ ಆಗುವ ನಷ್ಟ ಚಿಕ್ಕದ್ದಲ್ಲ.

  • Share On Facebook
  • Tweet It


- Advertisement -


Trending Now
ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
Tulunadu News May 24, 2025
60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
Tulunadu News May 24, 2025
Leave A Reply

  • Recent Posts

    • ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
  • Popular Posts

    • 1
      ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 2
      60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • 3
      ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • 4
      ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • 5
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search