• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?

Tulunadu News Posted On May 24, 2025
0


0
Shares
  • Share On Facebook
  • Tweet It

ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿಗಳನ್ನು, ಪಾಕಿಗಳನ್ನು ಓಡಿಸಬೇಕು ಎನ್ನುವ ಕೂಗು ಎಲ್ಲೆಡೆ ಕೇಳಿಬರುತ್ತಿವೆ. ಆದರೆ ಯಾವ ರಾಜ್ಯಗಳು ಅದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿವೆ ಎನ್ನುವುದು ಈಗಿರುವ ಪ್ರಶ್ನೆ. ಈ ನಿಟ್ಟಿನಲ್ಲಿ ಗುಜರಾತ್ ಬೃಹತ್ ಹೆಜ್ಜೆಯನ್ನು ಇಟ್ಟಿದೆ. ಅಹಮದಾಬಾದಿನ ಚಾಂಡೋಲ ಎನ್ನುವ ಪ್ರದೇಶದಲ್ಲಿ ಬೃಹತ್ ಧ್ವಂಸ ಕಾರ್ಯ ಆರಂಭಿಸಿರುವ ಅಲ್ಲಿನ ಸ್ಥಳೀಯಾಡಳಿತ ಅದಕ್ಕೆ 60 ಜೆಸಿಬಿ, 40 ಕ್ರೇನ್ಸ್ ಮತ್ತು ರಕ್ಷಣೆಗೆ 3000 ಪೊಲೀಸರನ್ನು ಬಳಸಿದೆ. ಎಲ್ಲಿ ಧ್ವಂಸ ಕಾರ್ಯ ನಡೆಯುತ್ತಿದೆಯೋ ಇಲ್ಲಿಯೇ ಈ ವರ್ಷ 200 ಅಕ್ರಮ ಬಾಂಗ್ಲಾದೇಶಿ ನಾಗರಿಕರನ್ನು ಬಂಧಿಸಲಾಗಿತ್ತು. ಮೇ 20, 2025 ರಂದು ಬೆಳಿಗ್ಗೆ 6 ಗಂಟೆಯಿಂದ ಈ ಅಕ್ರಮ ನಿರ್ಮಾಣ ತೆರವು ಕಾರ್ಯಾಚರಣೆ ಸಮರೋಪಾದಿಯಲ್ಲಿ ಆರಂಭವಾಗಿದೆ.

ವರದಿಯ ಪ್ರಕಾರ ಮೊದಲ ಹಂತದ ಕಾರ್ಯಾಚರಣೆಯಲ್ಲಿ 1.5 ಲಕ್ಷ ಚದರ ಅಡಿ ಜಾಗವನ್ನು ತೆರವುಗೊಳಿಸಿ ಆ ಏರಿಯಾವನ್ನು ಸಮತಟ್ಟುಗೊಳಿಸಲಾಗಿತ್ತು. ಈಗ ಎರಡನೇ ಹಂತದ ತೆರವು ಕಾರ್ಯಾಚರಣೆಯಲ್ಲಿ ಹೆಚ್ಚುವರಿಯಾಗಿ 2.5 ಲಕ್ಷ ಚದರ ಅಡಿ ಜಾಗವನ್ನು ತೆರವುಗೊಳಿಸಲಾಗಿದೆ. ಇದಕ್ಕಾಗಿ 60 ಜೆಸಿಬಿ, 40 ಕ್ರೇನ್ ಗಳನ್ನು ಮತ್ತು ಭದ್ರತಾ ವ್ಯವಸ್ಥೆಗಾಗಿ 3000 ಪೊಲೀಸರನ್ನು ನಿಯೋಜಿಸಲಾಗಿತ್ತು. ಮೇ 19 ರ ಮಧ್ಯಾಹ್ನದಿಂದಲೇ ಅಹಮದಾಬಾದ್ ಮುನ್ಸಿಪಲ್ ಕಾರ್ಪೋರೇಶನ್ ಧ್ವನಿವರ್ಧಕಗಳ ಮೂಲಕ ಅಕ್ರಮ ವಲಸಿಗರನ್ನು ಮನೆಬಿಟ್ಟು ತೆರಳುವಂತೆ ಸೂಚಿಸಿತ್ತು. ಕೆಲವರು ಅಲ್ಲಿ ಕಳೆದ ವಾರವಷ್ಟೇ ಬಂದು ಬೀಡುಬಿಟ್ಟಿದ್ದರು.

ಈ ಬಗ್ಗೆ ಮಾಹಿತಿ ನೀಡಿದ ಅಹಮದಾಬಾದ್ ನಗರ ಪೊಲೀಸ್ ಕಮೀಷನರ್ ಜಿ ಎಸ್ ಮಲ್ಲಿಕ್ ಅವರು ಚಂದೋಲಾ ಸರೋವರ ಬಹಳ ವರ್ಷಗಳಿಂದ ಬಾಂಗ್ಲಾದೇಶಿಗರ ಹಾಟ್ ಸ್ಪಾಟ್ ಆಗಿ ಬದಲಾಗಿದೆ. ಇನ್ನು ಅವರು ಅಕ್ರಮ ಚಟುವಟಿಕೆಗಳನ್ನು ನಡೆಸುವ ಮೂಲಕ ರಾಜ್ಯದ ಭದ್ರತೆಗೂ ಕಂಟಕವಾಗಿದ್ದರು. ಪ್ರತಿ ವರ್ಷ ಇಲ್ಲಿ 10 ರಿಂದ 40 ಅಕ್ರಮ ಬಾಂಗ್ಲಾ ದೇಶಿಗಳನ್ನು ಬಂಧಿಸಲಾಗುತ್ತಿತ್ತು. ಈ ಬಾರಿ 250 ಅಕ್ರಮ ಬಾಂಗ್ಲಾದೇಶಿಗಳನ್ನು ಬಂಧಿಸಲಾಗಿದೆ. ಎರಡನೇ ಹಂತದ ಕಾರ್ಯಾಚರಣೆಯ ವೇಳೆ ಭದ್ರತಾ ವ್ಯವಸ್ಥೆಗಾಗಿ 3000 ಪೊಲೀಸರ ನೇಮಕವಾಗಿದ್ದು, ಅದರಲ್ಲಿ ಜಂಟಿ ಆಯುಕ್ತರು, ಹೆಚ್ಚುವರಿ ಆಯುಕ್ತರು, ಆರು ಡಿಸಿಪಿಗಳು ಮತ್ತು ಪೊಲೀಸ್ ಇನ್ಸಪೆಕ್ಟರ್ ಗಳು ಒಳಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನು 3000 ಪೊಲೀಸರ ಜೊತೆ 25 ಸಿಆರ್ ಪಿಎಫ್ ತುಕಡಿಗಳು ಕೂಡ ಸೇರಿವೆ. ಇನ್ನು ಡ್ರೋನ್ ಕ್ಯಾಮೆರಾಗಳನ್ನು ಬಳಸಿ ಈ ಕಾರ್ಯಾಚರಣೆಯ ಮೇಲೆ ಕಣ್ಗಾವಲು ಇಡಲು ಬಳಸಲಾಗಿದೆ. ಒಂದು ವೇಳೆ ಅಗತ್ಯಬಿದ್ದರೆ ಹೆಚ್ಚುವರಿ ಸಮಯ ತೆಗೆದುಕೊಂಡು ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ಮುಗಿಸಲಾಗುವುದು ಎಂದು ತಿಳಿಸಿದ್ದಾರೆ.

 

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search