• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ

Tulunadu News Posted On May 24, 2025
0


0
Shares
  • Share On Facebook
  • Tweet It

ಕರ್ನಾಟಕ ರಾಜ್ಯದ ವಿಧಾನಸಭೆಗೆ ಇಂದು ಚುನಾವಣೆ ನಡೆದರೆ ಭಾರತೀಯ ಜನತಾ ಪಾರ್ಟಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಏರಲಿದೆ. ಜೆಡಿಎಸ್ ಮೂರನೇ ಸ್ಥಾನದಲ್ಲಿರಲಿದೆ ಎಂದು ಹೈದ್ರಾಬಾದ್ ಮೂಲದ ಪೀಪಲ್ಸ್ ಪಲ್ಸ್ ಮತ್ತು ಕೊಡೆಮೊ ಟೆಕ್ನಾಲಜೀಸ್ ನಡೆಸಿದ ಸಮೀಕ್ಷಾ ವರದಿ ಹೇಳಿದೆ.
ಸುಮಾರು 1 ತಿಂಗಳ ಕಾಲ ನಡೆಸಿದ ಈ ಸಮೀಕ್ಷೆಯಲ್ಲಿ 10,481 ಜನರ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಚುನಾವಣೆ ನಡೆದರೆ 136 ರಿಂದ 159 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಲಿದೆ ಎಂದು ಸಮೀಕ್ಷೆಯಲ್ಲಿ ಭಾಗವಹಿಸಿದವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ 62 ರಿಂದ 82 ಸೀಟುಗಳನ್ನು ಪಡೆಯಲಿದೆ. 2023 ರ ಚುನಾವಣೆಯಲ್ಲಿ ಶೇ 42.88 ರಷ್ಟು ಮತಗಳನ್ನು ಪಡೆದಿದ್ದ ಕಾಂಗ್ರೆಸ್, ಈಗ ಚುನಾವಣೆ ನಡೆದರೆ ಮತಗಳಿಗೆ ಪ್ರಮಾಣ ಶೇ 40.3ಕ್ಕೆ ಕುಸಿಯಲಿದೆ. ಸದ್ಯ ಕಾಂಗ್ರೆಸ್ ಆಡಳಿತ ವಿರೋಧ ಅಲೆ ಎದುರಿಸುತ್ತಿದೆ ಎಂದು ಸಮೀಕ್ಷೆ ಹೇಳಿರುವುದಾಗಿ ವರದಿಯಾಗಿದೆ.
ಜೆಡಿಎಸ್ ಕೇವಲ 3 ರಿಂದ 6 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆಗಳಿದ್ದು, ಅದರ ಮತಗಳಿಕೆ ಪ್ರಮಾಣ ಶೇ 5 ಕ್ಕೆ ಕುಸಿಯಲಿದೆ. 2023 ರಲ್ಲಿ ಜೆಡಿಎಸ್ ಶೇ 18.3 ರಷ್ಟು ಮತಗಳನ್ನು ಪಡೆದಿತ್ತು. ಆ ಮೂಲಕ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಹೇಳಿದೆ. ರಾಜ್ಯ ರಾಜಕಾರಣದಲ್ಲಿ ಕಳೆದ 20 ವರ್ಷಗಳಲ್ಲಿ (2004, 2008, 2018) ರಲ್ಲಿ ಬಿಜೆಪಿ ಅತೀ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅಧಿಕಾರದ ಗದ್ದುಗೆ ಏರಲು ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದೆ.

ಸಿದ್ಧರಾಮಯ್ಯ ಅತ್ಯಂತ ಜನಪ್ರಿಯ ಸಿಎಂ
ಕಾಂಗ್ರೆಸ್ ಪಕ್ಷದಲ್ಲಿ ಸಿದ್ಧರಾಮಯ್ಯ ಈಗಲೂ ಅತ್ಯಂತ ಜನಪ್ರಿಯ ಮುಖ್ಯಮಂತ್ರಿಯಾಗಿದ್ದಾರೆ. ಶೇ 29.2 ರಷ್ಟು ಮತದಾರರು ಸಿದ್ಧರಾಮಯ್ಯ ಅವರಿಗಾಗಿ ಮತ ಹಾಕಲಿದ್ದಾರೆ. ಮತ್ತೊಂದೆಡೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರವಾಗಿ ಮತ ಹಾಕುವವರ ಸಂಖ್ಯೆ ಶೇ 10.7 ರಷ್ಟು. ಬಿ.ಎಸ್.ಯಡಿಯೂರಪ್ಪ ಅವರಿಗಾಗಿ ಮತ ಹಾಕುವವರ ಸಂಖ್ಯೆ ಶೇ 5.5, ಬಸವರಾಜ ಬೊಮ್ಮಾಯಿಗೆ ಶೇ 3.6, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪರವಾಗಿ ಶೇ 5.2 ರಷ್ಟು ಮತಗಳು ಆಯಾ ಪಕ್ಷಗಳಿಗೆ ಸಿಗುವ ಸಾಧ್ಯತೆಗಳಿವೆ.

ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಅತ್ಯಂತ ಜನಪ್ರಿಯ

ಮನೆಯ ಯಜಮಾನಿಗೆ ಮಾಸಿಕ ಎರಡು ಸಾವಿರ ನೀಡುವ ಕಾಂಗ್ರೆಸ್ ಸರಕಾರದ ಗೃಹಲಕ್ಷ್ಮಿ ಅತ್ಯಂತ ಜನಪ್ರಿಯ ಗ್ಯಾರಂಟಿ ಯೋಜನೆ ಎಂದು ಸಮೀಕ್ಷೆಯಲ್ಲಿ ಪಾಲ್ಗೊಂಡ ಶೇ 45.5 ರಷ್ಟು ಜನರು ಹೇಳಿದ್ದಾರೆ. ನಂತರದ ಸ್ಥಾನದಲ್ಲಿ ಶಕ್ತಿ (19%), ಅನ್ನಭಾಗ್ಯ (17%), ಗೃಹಜ್ಯೋತಿ (13.5%), ಯುವನಿಧಿ (2%) ಸ್ಥಾನ ಪಡೆದಿದೆ. ಶೇ 3 ರಷ್ಟು ಜನರಿಗೆ ಗ್ಯಾರಂಟಿಗಳ ಮಾಹಿತಿ ಇಲ್ಲ ಎಂದು ವರದಿ ಹೇಳಿದೆ.

 

0
Shares
  • Share On Facebook
  • Tweet It


- Advertisement -


Trending Now
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Tulunadu News June 18, 2025
ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
  • Popular Posts

    • 1
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 2
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 3
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 4
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • 5
      ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search