• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ

Tulunadu News Posted On May 24, 2025
0


0
Shares
  • Share On Facebook
  • Tweet It

ಕರ್ನಾಟಕ ರಾಜ್ಯದ ವಿಧಾನಸಭೆಗೆ ಇಂದು ಚುನಾವಣೆ ನಡೆದರೆ ಭಾರತೀಯ ಜನತಾ ಪಾರ್ಟಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಏರಲಿದೆ. ಜೆಡಿಎಸ್ ಮೂರನೇ ಸ್ಥಾನದಲ್ಲಿರಲಿದೆ ಎಂದು ಹೈದ್ರಾಬಾದ್ ಮೂಲದ ಪೀಪಲ್ಸ್ ಪಲ್ಸ್ ಮತ್ತು ಕೊಡೆಮೊ ಟೆಕ್ನಾಲಜೀಸ್ ನಡೆಸಿದ ಸಮೀಕ್ಷಾ ವರದಿ ಹೇಳಿದೆ.
ಸುಮಾರು 1 ತಿಂಗಳ ಕಾಲ ನಡೆಸಿದ ಈ ಸಮೀಕ್ಷೆಯಲ್ಲಿ 10,481 ಜನರ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಚುನಾವಣೆ ನಡೆದರೆ 136 ರಿಂದ 159 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಲಿದೆ ಎಂದು ಸಮೀಕ್ಷೆಯಲ್ಲಿ ಭಾಗವಹಿಸಿದವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ 62 ರಿಂದ 82 ಸೀಟುಗಳನ್ನು ಪಡೆಯಲಿದೆ. 2023 ರ ಚುನಾವಣೆಯಲ್ಲಿ ಶೇ 42.88 ರಷ್ಟು ಮತಗಳನ್ನು ಪಡೆದಿದ್ದ ಕಾಂಗ್ರೆಸ್, ಈಗ ಚುನಾವಣೆ ನಡೆದರೆ ಮತಗಳಿಗೆ ಪ್ರಮಾಣ ಶೇ 40.3ಕ್ಕೆ ಕುಸಿಯಲಿದೆ. ಸದ್ಯ ಕಾಂಗ್ರೆಸ್ ಆಡಳಿತ ವಿರೋಧ ಅಲೆ ಎದುರಿಸುತ್ತಿದೆ ಎಂದು ಸಮೀಕ್ಷೆ ಹೇಳಿರುವುದಾಗಿ ವರದಿಯಾಗಿದೆ.
ಜೆಡಿಎಸ್ ಕೇವಲ 3 ರಿಂದ 6 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆಗಳಿದ್ದು, ಅದರ ಮತಗಳಿಕೆ ಪ್ರಮಾಣ ಶೇ 5 ಕ್ಕೆ ಕುಸಿಯಲಿದೆ. 2023 ರಲ್ಲಿ ಜೆಡಿಎಸ್ ಶೇ 18.3 ರಷ್ಟು ಮತಗಳನ್ನು ಪಡೆದಿತ್ತು. ಆ ಮೂಲಕ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಹೇಳಿದೆ. ರಾಜ್ಯ ರಾಜಕಾರಣದಲ್ಲಿ ಕಳೆದ 20 ವರ್ಷಗಳಲ್ಲಿ (2004, 2008, 2018) ರಲ್ಲಿ ಬಿಜೆಪಿ ಅತೀ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅಧಿಕಾರದ ಗದ್ದುಗೆ ಏರಲು ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದೆ.

ಸಿದ್ಧರಾಮಯ್ಯ ಅತ್ಯಂತ ಜನಪ್ರಿಯ ಸಿಎಂ
ಕಾಂಗ್ರೆಸ್ ಪಕ್ಷದಲ್ಲಿ ಸಿದ್ಧರಾಮಯ್ಯ ಈಗಲೂ ಅತ್ಯಂತ ಜನಪ್ರಿಯ ಮುಖ್ಯಮಂತ್ರಿಯಾಗಿದ್ದಾರೆ. ಶೇ 29.2 ರಷ್ಟು ಮತದಾರರು ಸಿದ್ಧರಾಮಯ್ಯ ಅವರಿಗಾಗಿ ಮತ ಹಾಕಲಿದ್ದಾರೆ. ಮತ್ತೊಂದೆಡೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರವಾಗಿ ಮತ ಹಾಕುವವರ ಸಂಖ್ಯೆ ಶೇ 10.7 ರಷ್ಟು. ಬಿ.ಎಸ್.ಯಡಿಯೂರಪ್ಪ ಅವರಿಗಾಗಿ ಮತ ಹಾಕುವವರ ಸಂಖ್ಯೆ ಶೇ 5.5, ಬಸವರಾಜ ಬೊಮ್ಮಾಯಿಗೆ ಶೇ 3.6, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪರವಾಗಿ ಶೇ 5.2 ರಷ್ಟು ಮತಗಳು ಆಯಾ ಪಕ್ಷಗಳಿಗೆ ಸಿಗುವ ಸಾಧ್ಯತೆಗಳಿವೆ.

ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಅತ್ಯಂತ ಜನಪ್ರಿಯ

ಮನೆಯ ಯಜಮಾನಿಗೆ ಮಾಸಿಕ ಎರಡು ಸಾವಿರ ನೀಡುವ ಕಾಂಗ್ರೆಸ್ ಸರಕಾರದ ಗೃಹಲಕ್ಷ್ಮಿ ಅತ್ಯಂತ ಜನಪ್ರಿಯ ಗ್ಯಾರಂಟಿ ಯೋಜನೆ ಎಂದು ಸಮೀಕ್ಷೆಯಲ್ಲಿ ಪಾಲ್ಗೊಂಡ ಶೇ 45.5 ರಷ್ಟು ಜನರು ಹೇಳಿದ್ದಾರೆ. ನಂತರದ ಸ್ಥಾನದಲ್ಲಿ ಶಕ್ತಿ (19%), ಅನ್ನಭಾಗ್ಯ (17%), ಗೃಹಜ್ಯೋತಿ (13.5%), ಯುವನಿಧಿ (2%) ಸ್ಥಾನ ಪಡೆದಿದೆ. ಶೇ 3 ರಷ್ಟು ಜನರಿಗೆ ಗ್ಯಾರಂಟಿಗಳ ಮಾಹಿತಿ ಇಲ್ಲ ಎಂದು ವರದಿ ಹೇಳಿದೆ.

 

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search