• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಪಾನನ್ನು ಹಿಂದಿಕ್ಕಿ ಜಗತ್ತಿನ ಆರ್ಥಿಕತೆಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದ ಭಾರತ!

Tulunadu News Posted On May 26, 2025
0


0
Shares
  • Share On Facebook
  • Tweet It

ಕೊನೆಗೂ ಅಧಿಕೃತವಾಗಿ ಭಾರತ ಜಗತ್ತಿನ ಆರ್ಥಿಕತೆಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದೆ. ಇದನ್ನು ಘೋಷಿಸಿದವರು ನೀತಿ ಆಯೋಗದ ಸಿಇಒ ಬಿ.ವಿ.ಆರ್.ಸುಬ್ರಹ್ಮಣ್ಯಂ. ನೀತಿ ಆಯೋಗದ 10 ನೇ ಆಡಳಿತ ಮಂಡಳಿಯ ಸಭೆಯ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸುಬ್ರಹ್ಮಣ್ಯಂ ಅವರು ಜಗತ್ತಿನ ಆರ್ಥಿಕತೆಯಲ್ಲಿ ಭಾರತದ ಸ್ಥಾನಮಾನಗಳ ಬಗ್ಗೆ ಮಾಹಿತಿ ನೀಡಿದರು.

” ನಾವು ಪ್ರಪಂಚದ ನಾಲ್ಕನೇ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆದಿದ್ದೇವೆ. ನಮ್ಮದು ನಾಲ್ಕು ಟ್ರಿಲಿಯನ್ ಇಕಾನಮಿ ಆಗಿದೆ. ನಾವು ಈ ಮೂಲಕ ಜಪಾನ್ ದೇಶವನ್ನು ಕೂಡ ಹಿಂದಿಕ್ಕಿದ್ದೇವೆ, ಈಗ ನಮ್ಮ ಮುಂದೆ ಯುಎಸ್, ಚೀನಾ, ಜರ್ಮನಿ ರಾಷ್ಟ್ರಗಳ ಆರ್ಥಿಕತೆ ಮಾತ್ರ ದೊಡ್ಡದಿದೆ. ಇನ್ನು ನಾವು ಹಾಕಿಕೊಂಡಿರುವ ನಮ್ಮ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಕ್ಕೆ ತರುವಲ್ಲಿ ಸಫಲರಾದರೆ ಮುಂದಿನ 2.5 ಅಥವಾ 3 ವರ್ಷಗಳ ಒಳಗೆ ನಾವು ಮೂರನೇ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯಲಿದ್ದೇವೆ” ಎಂದು ಸುಬ್ರಹ್ಮಣ್ಯಂ ತಿಳಿಸಿದ್ದಾರೆ.

ಇನ್ನು ಅಮೇರಿಕಾದಲ್ಲಿ ಮಾರಲ್ಪಡುತ್ತಿರುವ ಎಪಲ್ ಕಂಪೆನಿಯ ಐಫೋನ್ ಗಳು ಭವಿಷ್ಯದಲ್ಲಿ ಅಮೇರಿಕಾದಲ್ಲಿಯೇ ತಯಾರಾಗಬೇಕೆ ವಿನ: ಭಾರತ ಅಥವಾ ವಿಶ್ವದ ಬೇರೆ ಕಡೆ ತಯಾರಾಗಲು ನಾವು ಬಯಸುವುದಿಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ” ಯಾವುದೇ ರೀತಿಯ ಸುಂಕ ಏರಿಕೆಯ ವಿಷಯವೇ ಇರಲಿ, ಅದು ಇನ್ನು ಅನಿಶ್ಚಿತತೆಯಾಗಿಯೇ ಇದೆ. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಭಾರತದಷ್ಟು ಕಡಿಮೆ ದರದಲ್ಲಿ ವಸ್ತುಗಳನ್ನು ಉತ್ಪಾದಿಸುವ ಬೇರೆ ರಾಷ್ಟ್ರ ಇಲ್ಲ” ಎಂದು ಅವರು ಹೇಳಿದರು.

ಇನ್ನು ರಾಷ್ಟ್ರದ ಆಸ್ತಿಯ ಮೌಲ್ಯ ಅಂದಾಜನ್ನು ಮಾಡುವ ಪ್ರಕ್ರಿಯೆ ಆರಂಭವಾಗಿದ್ದು ಈ ಬಗ್ಗೆ ಅಗಸ್ಟ್ ನಲ್ಲಿ ಘೋಷಿಸಲಾಗುವುದು ಎಂದು ತಿಳಿಸಿದರು. ಇನ್ನು ಅಂತರಾಷ್ಟ್ರೀಯ ಹಣಕಾಸು ಸಂಸ್ಥೆಯೇ ಭಾರತದ ಆರ್ಥಿಕತೆ ಜಪಾನಿಗಿಂತ ಹೆಚ್ಚಿದೆ ಎಂದು ಹೇಳಿದ್ದು, 2024 ರಲ್ಲಿ ಭಾರತ ಐದನೇ ಸ್ಥಾನದಲ್ಲಿದ್ದು, 2025 ರಲ್ಲಿ ನಾಲ್ಕನೇ ಸ್ಥಾನಕ್ಕೆ ಬಂದಿರುವುದು ನಿಜಕ್ಕೂ ಅಭಿಮಾನದ ವಿಷಯವಾಗಿದೆ.

2025 ರ ಭಾರತದ ಸಾಮಾನ್ಯ ಜಿಡಿಪಿ ಡಾಲರ್ 4.187 ಟ್ರಿಲಿಯನ್ ಆಗಿದ್ದು, ಜಪಾನಿಗಿಂತ ಒಂದಿಷ್ಟು ಪ್ರಮಾಣ ಹೆಚ್ಚಿದೆ. ಇನ್ನು ಐಎಂಎಫ್ ಪ್ರಕಾರ ಭಾರತದ ನಾಗರಿಕರ ತಲಾ ಆದಾಯ 2013 – 14 ರಲ್ಲಿ ಡಾಲರ್ 1,438 ಆಗಿದ್ದರೆ ಈಗ 2025 ರಲ್ಲಿ ಡಾಲರ್ 2880 ಆಗಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search