• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಪಾನನ್ನು ಹಿಂದಿಕ್ಕಿ ಜಗತ್ತಿನ ಆರ್ಥಿಕತೆಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದ ಭಾರತ!

Tulunadu News Posted On May 26, 2025
0


0
Shares
  • Share On Facebook
  • Tweet It

ಕೊನೆಗೂ ಅಧಿಕೃತವಾಗಿ ಭಾರತ ಜಗತ್ತಿನ ಆರ್ಥಿಕತೆಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದೆ. ಇದನ್ನು ಘೋಷಿಸಿದವರು ನೀತಿ ಆಯೋಗದ ಸಿಇಒ ಬಿ.ವಿ.ಆರ್.ಸುಬ್ರಹ್ಮಣ್ಯಂ. ನೀತಿ ಆಯೋಗದ 10 ನೇ ಆಡಳಿತ ಮಂಡಳಿಯ ಸಭೆಯ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸುಬ್ರಹ್ಮಣ್ಯಂ ಅವರು ಜಗತ್ತಿನ ಆರ್ಥಿಕತೆಯಲ್ಲಿ ಭಾರತದ ಸ್ಥಾನಮಾನಗಳ ಬಗ್ಗೆ ಮಾಹಿತಿ ನೀಡಿದರು.

” ನಾವು ಪ್ರಪಂಚದ ನಾಲ್ಕನೇ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆದಿದ್ದೇವೆ. ನಮ್ಮದು ನಾಲ್ಕು ಟ್ರಿಲಿಯನ್ ಇಕಾನಮಿ ಆಗಿದೆ. ನಾವು ಈ ಮೂಲಕ ಜಪಾನ್ ದೇಶವನ್ನು ಕೂಡ ಹಿಂದಿಕ್ಕಿದ್ದೇವೆ, ಈಗ ನಮ್ಮ ಮುಂದೆ ಯುಎಸ್, ಚೀನಾ, ಜರ್ಮನಿ ರಾಷ್ಟ್ರಗಳ ಆರ್ಥಿಕತೆ ಮಾತ್ರ ದೊಡ್ಡದಿದೆ. ಇನ್ನು ನಾವು ಹಾಕಿಕೊಂಡಿರುವ ನಮ್ಮ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಕ್ಕೆ ತರುವಲ್ಲಿ ಸಫಲರಾದರೆ ಮುಂದಿನ 2.5 ಅಥವಾ 3 ವರ್ಷಗಳ ಒಳಗೆ ನಾವು ಮೂರನೇ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯಲಿದ್ದೇವೆ” ಎಂದು ಸುಬ್ರಹ್ಮಣ್ಯಂ ತಿಳಿಸಿದ್ದಾರೆ.

ಇನ್ನು ಅಮೇರಿಕಾದಲ್ಲಿ ಮಾರಲ್ಪಡುತ್ತಿರುವ ಎಪಲ್ ಕಂಪೆನಿಯ ಐಫೋನ್ ಗಳು ಭವಿಷ್ಯದಲ್ಲಿ ಅಮೇರಿಕಾದಲ್ಲಿಯೇ ತಯಾರಾಗಬೇಕೆ ವಿನ: ಭಾರತ ಅಥವಾ ವಿಶ್ವದ ಬೇರೆ ಕಡೆ ತಯಾರಾಗಲು ನಾವು ಬಯಸುವುದಿಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ” ಯಾವುದೇ ರೀತಿಯ ಸುಂಕ ಏರಿಕೆಯ ವಿಷಯವೇ ಇರಲಿ, ಅದು ಇನ್ನು ಅನಿಶ್ಚಿತತೆಯಾಗಿಯೇ ಇದೆ. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಭಾರತದಷ್ಟು ಕಡಿಮೆ ದರದಲ್ಲಿ ವಸ್ತುಗಳನ್ನು ಉತ್ಪಾದಿಸುವ ಬೇರೆ ರಾಷ್ಟ್ರ ಇಲ್ಲ” ಎಂದು ಅವರು ಹೇಳಿದರು.

ಇನ್ನು ರಾಷ್ಟ್ರದ ಆಸ್ತಿಯ ಮೌಲ್ಯ ಅಂದಾಜನ್ನು ಮಾಡುವ ಪ್ರಕ್ರಿಯೆ ಆರಂಭವಾಗಿದ್ದು ಈ ಬಗ್ಗೆ ಅಗಸ್ಟ್ ನಲ್ಲಿ ಘೋಷಿಸಲಾಗುವುದು ಎಂದು ತಿಳಿಸಿದರು. ಇನ್ನು ಅಂತರಾಷ್ಟ್ರೀಯ ಹಣಕಾಸು ಸಂಸ್ಥೆಯೇ ಭಾರತದ ಆರ್ಥಿಕತೆ ಜಪಾನಿಗಿಂತ ಹೆಚ್ಚಿದೆ ಎಂದು ಹೇಳಿದ್ದು, 2024 ರಲ್ಲಿ ಭಾರತ ಐದನೇ ಸ್ಥಾನದಲ್ಲಿದ್ದು, 2025 ರಲ್ಲಿ ನಾಲ್ಕನೇ ಸ್ಥಾನಕ್ಕೆ ಬಂದಿರುವುದು ನಿಜಕ್ಕೂ ಅಭಿಮಾನದ ವಿಷಯವಾಗಿದೆ.

2025 ರ ಭಾರತದ ಸಾಮಾನ್ಯ ಜಿಡಿಪಿ ಡಾಲರ್ 4.187 ಟ್ರಿಲಿಯನ್ ಆಗಿದ್ದು, ಜಪಾನಿಗಿಂತ ಒಂದಿಷ್ಟು ಪ್ರಮಾಣ ಹೆಚ್ಚಿದೆ. ಇನ್ನು ಐಎಂಎಫ್ ಪ್ರಕಾರ ಭಾರತದ ನಾಗರಿಕರ ತಲಾ ಆದಾಯ 2013 – 14 ರಲ್ಲಿ ಡಾಲರ್ 1,438 ಆಗಿದ್ದರೆ ಈಗ 2025 ರಲ್ಲಿ ಡಾಲರ್ 2880 ಆಗಿದೆ.

0
Shares
  • Share On Facebook
  • Tweet It


- Advertisement -


Trending Now
ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
Tulunadu News June 26, 2025
ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
Tulunadu News June 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
  • Popular Posts

    • 1
      ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • 2
      ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • 3
      ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • 4
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • 5
      ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search