• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಫೇಕ್ ಪನ್ನೀರ್ ಮಾರಿ ತಿಂಗಳಿಗೆ 42 ಲಕ್ಷ ರೂ ಸಂಪಾದಿಸುತ್ತಿದ್ದ ವ್ಯಾಪಾರಿ ಬಂಧನ!

Tulunadu News Posted On May 26, 2025
0


0
Shares
  • Share On Facebook
  • Tweet It

ಆತ ಉತ್ತರ ಪ್ರದೇಶದ ಗೋರಖಪುರದವನು. ಹೆಸರು ಮೊಹಮ್ಮದ್ ಖಲೀದ್. ವ್ಯಾಪಾರ ಪನ್ನೀರ್ ಮಾರುವುದು. ಹಾಗಾದ್ರೆ ಅವನ ಪನ್ನೀರ್ ಹೇಗೆ ತಯಾರಾಗುತ್ತಿತ್ತು? ಗೊತ್ತಾ? ಇಲ್ಲಿದೆ ಕುತೂಹಲಕಾರಿ ವಿಷಯ.

ಮೇ 21 ರಂದು ಉತ್ತರಪ್ರದೇಶದ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಫೇಕ್ ಪನ್ನೀರ್ ತಯಾರಿಸುತ್ತಿದ್ದ ಫ್ಯಾಕ್ಟರಿಯ ಮೇಲೆ ದಾಳಿ ಮಾಡಿದ್ದಾರೆ. ಅಲ್ಲಿ ಅವರಿಗೆ 40 ಕ್ವಿಂಟಾಲ್ ಫೇಕ್ ಪನ್ನೀರ್ ಪತ್ತೆಯಾಗಿದೆ. ಅದು ಅಲ್ಲಿ ಕೇವಲ 25 ಲೀಟರ್ ಹಾಲಿನಿಂದ ಮಾತ್ರ ತಯಾರಾಗಿತ್ತು. ಹಾಗಾದರೆ ಫೇಕ್ ಪನ್ನೀರ್ ತಯಾರು ಮಾಡುತ್ತಿದ್ದದ್ದು ಹೇಗೆ?

ಅದಕ್ಕಾಗಿ ಮೊಹಮ್ಮದ್ ಖಾಲೀದ್ ಸೋಪ್ ಬೀಜಗಳನ್ನು ಬಳಸುತ್ತಿದ್ದ. ಅದರೊಂದಿಗೆ ಪೋಸ್ಟರ್ ಕಲರ್ ಗಳು, ಸಲ್ಫೂರಿಕ್ ಆಮ್ಲ, ಫ್ಪಾಬ್ರಿಕ್ ವೈಟ್ನರ್, ಡಿಟರ್ಜೆಂಟ್, ಪಾಮ್ ಆಯಿಲ್, ಸೆಕ್ರರಿನ್ ( ಸಕ್ಕರೆಯ ಬದಲಿಗೆ ಬಳಸುವ ಸಿಹಿಯಾದ ವಸ್ತು) ಇದನ್ನೆಲ್ಲಾ ಬಳಸಿ ಫೇಕ್ ಪನ್ನೀರ್ ತಯಾರಿಸುತ್ತಿದ್ದ. ಈ ಫೇಕ್ ಪನ್ನೀರ್ ಸೇವಿಸಿದರೆ ಅದು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ ಪರಿಣಾಮ ಬೀರುತ್ತದೆ. ಇದನ್ನು ಸೇವಿಸುವ ಮನುಷ್ಯ ಭವಿಷ್ಯದಲ್ಲಿ ಆಂತರಿಕವಾಗಿ ದುರ್ಬಲನಾಗುತ್ತಾ, ಮುಂದೊಂದು ದಿನ ಕುಸಿದು ಬೀಳುವ ಸಾಧ್ಯತೆ ಇದೆ. ಅದನ್ನು ಉತ್ತರ ಪ್ರದೇಶದ ಕುಶಿನಗರ, ಮಹಾರಾಜಾಗಂಜ್, ಸಂತ ಕಬೀರ್ ನಗರ ಮತ್ತು ಡೆಹೋರಿಯಾ ಊರುಗಳಲ್ಲಿ ಮಾರಾಟ ಮಾಡಲಾಗುತ್ತಿತ್ತು. ಇದರಿಂದ ಮೊಹಮ್ಮದ್ ಖಲೀದ್ ತಿಂಗಳಿಗೆ 42 ಲಕ್ಷ ರೂಪಾಯಿ ಲಾಭ ಗಳಿಸುತ್ತಿದ್ದ.

ಆಹಾರ ಸುರಕ್ಷತಾ ಅಧಿಕಾರಿಗಳು ಅಲ್ಲಿ ತಯಾರಾಗಿ ಮಾರಾಟಕ್ಕೆಂದು ಇಟ್ಟಿದ್ದ 250 ಕೆಜಿ ಫೇಕ್ ಪನ್ನೀರ್ ಅನ್ನು ನಾಶ ಮಾಡಿ ಫ್ಯಾಕ್ಟರಿಯನ್ನು ಸೀಲ್ ಮಾಡಿದ್ದಾರೆ. ಸ್ಥಳೀಯರು ಇಲಾಖೆಯ ಈ ಕ್ರಮದಿಂದ ಸಂತೋಷ ವ್ಯಕ್ತಪಡಿಸಿದ್ದಾರೆ.

ಹೀಗೆ ಫೇಕ್ ಪನ್ನೀರ್ ಅನ್ನು ತಯಾರಿಸಿ ಮಾರುವ ಅವ್ಯವಹಾರ ಹರ್ಯಾಣದಲ್ಲಿ ಸಾಕಷ್ಟು ಕಡೆಗಳಲ್ಲಿ ಚಾಲ್ತಿಯಲ್ಲಿತ್ತು. ಆದರೆ ಈಗ ಅದು ಉತ್ತರ ಪ್ರದೇಶಕ್ಕೂ ಹರಡಿದೆ. ಇನ್ನು ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳ ಪ್ರಕಾರ ಅಲ್ಲಿಯ ಸ್ಥಳೀಯರನ್ನು ಈ ಫೇಕ್ ಪನ್ನೀರ್ ಉತ್ಪಾದನೆಯಲ್ಲಿ ಸಹಕರಿಸಲು ಆಹ್ವಾನಿಸುತ್ತಿದ್ದ. ಒಟ್ಟಿನಲ್ಲಿ ನಾವು ಸೇವಿಸುವ ಆಹಾರದ ಬಗ್ಗೆ ನಾವು ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಾಲುವುದಿಲ್ಲ. ಉತ್ತಮ ಕಂಪೆನಿಯ ನಂಬಿಕಾರ್ಹ ಆಹಾರ ವಸ್ತುಗಳನ್ನು ಖರೀದಿಸಿದರೆ ಕ್ಷೇಮ. ಇವನಿಗೆ ಸೂಕ್ತ ಶಿಕ್ಷೆ ಆದರೆ ಮಾತ್ರ ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ದಂಧೆಗಳನ್ನು ನಿಲ್ಲಿಸಬಹುದು.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search