• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ – ಹೈಕೋರ್ಟ್ ಆದೇಶ… ರಾಜ್ಯ ಸರಕಾರಕ್ಕೆ ಮುಖಭಂಗ!

Tulunadu News Posted On May 29, 2025
0


0
Shares
  • Share On Facebook
  • Tweet It

ಕ್ರಿಮಿನಲ್ ಪ್ರೊಸಿಜರ್ ಕೋಡ್ ( ಸಿಆರ್ ಪಿಸಿ) ಸೆಕ್ಷನ್ 321 ಅನ್ನು ಬಳಸಿ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಮುಂದಾದ ರಾಜ್ಯ ಸರಕಾರಕ್ಕೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ತೀವ್ರ ಮುಖಭಂಗ ಸಂಭವಿಸಿದೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ನೇತೃತ್ವದ ರಾಜ್ಯ ಸರಕಾರ ಆರೋಪಿಗಳ ಮೇಲಿನ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂದೆ ಪಡೆಯಲು ನಿರ್ಧರಿಸಿತ್ತು. ಇದರಲ್ಲಿ ಹುಬ್ಬಳ್ಳಿ ಗಲಭೆಯಲ್ಲಿ ಪಾತ್ರವಹಿಸಿದ ದುಷ್ಕರ್ಮಿಗಳ ಮೇಲಿನ ಪ್ರಕರಣಗಳು ಕೂಡ ಇತ್ತು. ಅದರೊಂದಿಗೆ ಬೇರೆ ಗಂಭೀರ ಪ್ರಕರಣದಲ್ಲಿ ಆರೋಪಿಗಳಾಗಿರುವವರ ಕೇಸ್ ಕೂಡ ಇತ್ತು. ಸಿಆರ್ ಪಿಸಿ ಸೆಕ್ಷನ್ 321 ರ ಪ್ರಕಾರ ಪಬ್ಲಿಕ್ ಪ್ರಾಸಿಕ್ಯೂಟರ್ ಹಾಗೂ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ನ್ಯಾಯಾಲಯದಲ್ಲಿ ಯಾವುದೇ ಪ್ರಕರಣದ ಅಂತಿಮ ತೀರ್ಪು ಬರುವ ಮೊದಲು ಅರ್ಜಿ ಸಲ್ಲಿಸಿ ರಾಜ್ಯ ಸರಕಾರದ ಪರವಾಗಿ ಪ್ರಕರಣವನ್ನು ಹಿಂದಕ್ಕೆ ಪಡೆದುಕೊಳ್ಳುವ ಅವಕಾಶವನ್ನು ಈ ಸೆಕ್ಷನ್ ನೀಡುತ್ತದೆ.

ಈ ಪ್ರಕರಣಗಳನ್ನು ಹಿಂದಕ್ಕೆ ಪಡೆದುಕೊಳ್ಳುವ ಮೂಲಕ ರಾಜ್ಯ ಸರಕಾರ ಆರೋಪಿಗಳಿಗೆ ಸಹಕರಿಸಿದಂತೆ ಆಗುತ್ತದೆ. ಇದು ರಾಜಕೀಯ ಪ್ರೇರಿತ ಮತ್ತು ರಾಜ್ಯ ಸರಕಾರದ ನಿರಂಕುಶ ನಿರ್ಧಾರವಾಗಿದೆ ಎಂದು ನ್ಯಾಯವಾದಿ ಗಿರೀಶ್ ಭಾರದ್ವಾಜ್ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು ಹಾಕಿದ್ದರು.

ಈ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಂಡ ರಾಜ್ಯ ಉಚ್ಚ ನ್ಯಾಯಾಲಯ ರಾಜ್ಯ ಸರಕಾರದ ತೀರ್ಮಾನದ ವಿರುದ್ಧ ತೀರ್ಪು ನೀಡಿದ್ದು, ಕಾನೂನಿನ ದೃಷ್ಟಿಯಲ್ಲಿ ಸರಕಾರದ ತೀರ್ಮಾನವನ್ನು ಅನೂರ್ಜಿತಗೊಳಿಸಿದೆ. ಇನ್ನು ರಾಜ್ಯ ಸರಕಾರ ಹಿಂದಕ್ಕೆ ಪಡೆದುಕೊಳ್ಳಬೇಕು ನಿರ್ಧರಿಸಿದ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧದ ಕಾನೂನು ಪ್ರಕ್ರಿಯೆಗಳು ಯಥಾವತ್ತಾಗಿ ನಡೆಯಬೇಕು ಎಂದು ಇದೇ ಸಂದರ್ಭದಲ್ಲಿ ಸೂಚನೆ ನೀಡಿದೆ.

ಈ ಆದೇಶ ರಾಜ್ಯ ಸರಕಾರ ಯಾವುದೇ ಕಾನೂನು ಬಳಸಿಕೊಂಡು ತಾನು ಬಯಸಿದಂತೆ ಆರೋಪಿಗಳ ವಿರುದ್ಧದ ಪ್ರಕರಣಗಳನ್ನು ಹಿಂದಕ್ಕೆ ಪಡೆದುಕೊಳ್ಳುವ ಸಂಪ್ರದಾಯಕ್ಕೆ ಬ್ರೇಕ್ ನೀಡಿದಂತೆ ಆಗಿದೆ. ಈ ಹಿಂದೆ ಗಂಭೀರ ಪ್ರಕರಣಗಳಲ್ಲಿ ರಾಜ್ಯ ಸರಕಾರಗಳು ಕ್ರಿಮಿನಲ್ ಪ್ರಕರಣಗಳನ್ನು ಹಿಂದಕ್ಕೆ ಪಡೆದುಕೊಳ್ಳುವ ಮೂಲಕ ಆರೋಪಿಗಳ ಕೃತ್ಯಗಳನ್ನು ಬೆಂಬಲಿಸಿದಂತೆ ಆದ ಪರಿಣಾಮ ಗಲಭೆಗಳು ಮತ್ತಷ್ಟು ನಡೆದು ರಾಜ್ಯದಲ್ಲಿ ಅಶಾಂತಿ, ದೊಂಬಿ, ಗಲಭೆಗಳಿಗೆ ಕಾರಣವಾಗಿತ್ತು.

ಈ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ದ್ವಿಸದಸ್ಯ ಪೀಠ ನೀಡಿದ ಸೂಚನೆ ಒಂದು ಕೋಮಿನ ಓಲೈಕೆಗಾಗಿ ಕೇಸ್ ವಾಪಾಸ್ ಪಡೆಯುವ ತಂತ್ರಕ್ಕೆ ತಡೆ ನೀಡಿದೆ ಎಂದೇ ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗಿದೆ. ಇನ್ನು ನ್ಯಾಯವಾದಿ ಗಿರೀಶ್ ಭಾರದ್ವಾಜ್ ಅವರು ಮನವಿ ಮಾಡಿ ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಗೆ ನೀಡಲು ಮಾನ್ಯ ನ್ಯಾಯಾಲಯ ಆದೇಶಿಸಬೇಕು ಎನ್ನುವ ಮನವಿಯನ್ನು ಕೂಡ ಪರಿಗಣಿಸಿರುವ ನ್ಯಾಯಾಲಯ ಆ ಪ್ರಕರಣಗಳನ್ನು ಎನ್ ಐಎಗೆ ನೀಡಲು ರಾಜ್ಯ ಸರಕಾರ ಕ್ರಮ ತಗೆದುಕೊಳ್ಳಬೇಕು ಎಂದು ಸೂಚಿಸಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search