• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!

Tulunadu News Posted On May 29, 2025
0


0
Shares
  • Share On Facebook
  • Tweet It

ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲಿ ಹಿಂದೂ ಮುಖಂಡರ, ಮುಸ್ಲಿಂ ನಾಯಕರ ಮತ್ತು ಯಾವುದರಲ್ಲಿಯೂ ಗುರುತಿಸದೇ ಪ್ರತೀಕಾರಕ್ಕೆ ಹತ್ಯೆಗೊಳಗಾದ ಯುವಕರ ಕಥೆಯನ್ನು ಹೇಳುತ್ತಾ ಹೋದರೆ ಅದೇ ಒಂದು ಪ್ರತ್ಯೇಕ ಅಧ್ಯಾಯವಾದಿತು. ಹಾಗೆ ಸುಮ್ಮನೆ ಈ ಕೆಳಕಂಡ ಹೆಸರುಗಳನ್ನು ಓದುತ್ತಾ ಹೋಗಿ. ನಿಮ್ಮ ಮನಸ್ಸಿನಂಗಳದಲ್ಲಿ ಆ ದಿನಗಳು ಹಾಗೆ ಸರಿದು ಹೋಗಬಹುದು.

2003 ಮೇ. ಎಂ ಡಿ ಜಬ್ಬಾರ್. ತಾಲೂಕು ಪಂಚಾಯತ್ ಅಧ್ಯಕ್ಷನಾಗಿದ್ದ ಎಂ ಡಿ ಜಬ್ಬಾರ್ ಅವರನ್ನು ಮಂಗಳೂರಿನ ತಾಲೂಕು ಪಂಚಾಯತ್ ಕಚೇರಿಯ ಆವರಣದಲ್ಲಿಯೇ ಹತ್ಯೆ ಮಾಡಲಾಗಿತ್ತು. 2003 ಅಗಸ್ಟ್ ನಲ್ಲಿ ಕಾಟಿಪಳ್ಳದ ಅಬ್ದುಲ್ ರವೂಫ್, ಅದೇ ವರ್ಷ ಡಿಸೆಂಬರ್ ನಲ್ಲಿ ನರಸಿಂಹ ಶೆಟ್ಟಿಗಾರ್, ಎರಡೇ ದಿನಗಳ ಅಂತರದಲ್ಲಿ ಫಾರೂಕ್ ಹತ್ಯೆಯಾಗಿತ್ತು. ಅದರ ಬಳಿಕ ಮರುವರ್ಷ ಕಾಟಿಪಳ್ಳದ ಉದಯ ಪೂಜಾರಿ ಹತ್ಯೆಯಾದರೆ 2005 ಜೂನ್ 7 ರಂದು ಪೊಳಲಿ ಅನಂತು ಪೂಜಾರಿ ಭೀಕರವಾಗಿ ಕೊಲೆಯಾಗಿ ಹೋಗಿದ್ದರು. ಮರುವರ್ಷ ಡಿಸೆಂಬರ್ 1 ರಂದು ಕುಳಾಯಿ ಸಮೀಪ ಹಿಂದೂ ಮುಖಂಡ ಸುಖಾನಂದ ಶೆಟ್ಟಿಯವರನ್ನು ಮತಾಂಧರು ಹತ್ಯೆ ಮಾಡಿದ್ದರು.

2008 ಜನವರಿ 20 ರಂದು ತಂಝೀಮ್ ಕಾಟಿಪಳ್ಳ, 2009 ಫೆಬ್ರವರಿಯಲ್ಲಿ ಕ್ಯಾಂಡಲ್ ಸಂತು ಪೂಜಾರಿ ಕೊಲೆಯಾಗಿದ್ದರು. ಅದರ ಬಳಿಕ ನಾಲ್ಕು ವರ್ಷ ಒಂದಿಷ್ಟು ಶಾಂತಿಯುತವಾಗಿ ಎಲ್ಲವೂ ನಿರಾಂತಕವಾಗಿ ಸಾಗುತ್ತಿದ್ದ ಕರಾವಳಿಯಲ್ಲಿ 2014 ಮಾರ್ಚ್ ನಲ್ಲಿ ರಾಜೇಶ್ ಪೂಜಾರಿ, 2015 ಸೆಪ್ಟೆಂಬರ್ 7 ರಂದು ಸಜೀಪ ನಾಸೀರ್, ಎರಡು ತಿಂಗಳ ಒಳಗೆ ಪ್ರಶಾಂತ ಪೂಜಾರಿ ಹಾಗೂ ಹರೀಶ್ ಪೂಜಾರಿ ಕೊಲೆಯಾಗಿ ಹೋಗಿದ್ದರು. 2016 ಏಪ್ರಿಲ್ 12 ರಂದು ರಾಜೇಶ್ ಪೂಜಾರಿ, ಅದೇ ತಿಂಗಳು ಸಫ್ವಾನ್ ಹತ್ಯೆಯಾಗಿದ್ದರೆ, ಮರುವರ್ಷ ಎರಡು ಹತ್ಯೆಗಳು ದಕ್ಷಿಣ ಕನ್ನಡದಲ್ಲಿ ನಡೆದು ಹೋಗಿದ್ದವು. ಅದರಲ್ಲಿ 2017 ಜೂನ್ ನಲ್ಲಿ ಅಶ್ರಫ್ ಕಲಾಯಿ ಹಾಗೂ ಜುಲೈನಲ್ಲಿ ಶರತ್ ಮಡಿವಾಳ. 2018 ಜನವರಿಯಲ್ಲಿ ಸುರತ್ಕಲ್ ನಲ್ಲಿ ದೀಪಕ್ ರಾವ್ ಕೊಲೆಯಾದರೆ ಅದಕ್ಕೆ ಪ್ರತಿಕಾರವಾಗಿ ಅದೇ ದಿನ ಅಬ್ದುಲ್ ಬಶೀರ್ ಹತ್ಯೆಯಾಗಿದ್ದರು.

2022 ರ ದಕ್ಷಿಣ ಕನ್ನಡ ಜಿಲ್ಲೆ ನಾಲ್ಕು ಕೋಮು ಸಂಬಂಧಿತ ಹತ್ಯೆಗಳಿಗೆ ಸಾಕ್ಷಿಯಾದದ್ದು ಮಾತ್ರ ದುರಂತ. 2022 ಜುಲೈ 19 ಮಸೂದ್ ಬೆಳ್ಳಾರೆ, ಜುಲೈ 26 ಪ್ರವೀಣ್ ನೆಟ್ಟಾರು, ಜುಲೈ 28 ಫಾಜಿಲ್, ಡಿಸೆಂಬರ್ 24 ಅಬ್ದುಲ್ ಜಲೀಲ್ ಹತ್ಯೆಗೊಳಗಾದರು. ಎರಡು ವರ್ಷ ಮೌನವಾಗಿದ್ದ ದಕ್ಷಿಣ ಕನ್ನಡ 2025 ರಲ್ಲಿ ಹೆಚ್ಚು ಕಡಿಮೆ ಒಂದೇ ತಿಂಗಳ ಅವಧಿಯಲ್ಲಿ ಅಶ್ರಫ್, ಸುಹಾಸ್ ಶೆಟ್ಟಿ, ಅಬ್ದುಲ್ ರೆಹಮಾನ್ ಹತ್ಯೆಗಳ ಮೂಲಕ ಮತ್ತೆ ರಾಜ್ಯದಲ್ಲಿ ಸುದ್ದಿಯಲ್ಲಿದೆ.

ಪ್ರತಿ ಬಾರಿ ಇಂತಹ ಹತ್ಯೆಗಳಾದಾಗ ಮಂಗಳೂರು ಕಂಪಿಸಿದೆ. ಜನಸಾಮಾನ್ಯರು ತತ್ತರಿಸಿದ್ದಾರೆ. ಹೊರಗಿನ ಜನ ಮಂಗಳೂರಿಗೆ ಏನೇನೋ ಹಣೆಪಟ್ಟಿ ಕಟ್ಟಿದ್ದಾರೆ. ಇಲ್ಲಿ ಬರಬೇಕಿದ್ದ ಕಂಪೆನಿಗಳು ಹಿಂದೇಟು ಹಾಕಿವೆ. ಶಿಕ್ಷಣ ಸಂಸ್ಥೆಗಳು ನರಳಿವೆ. ಬಸ್ಸು ವ್ಯವಸ್ಥೆ ಅತಂತ್ರಕ್ಕೆ ಒಳಗಾಗಿದೆ. ಮತ್ತೆ ಎಲ್ಲವನ್ನು ಉದರದಲ್ಲಿ ಇಟ್ಟುಕೊಂಡು ಮಂಗಳೂರು ಮುಂದುವರೆದಿದೆ. ಆದರೆ ಈ ಎಲ್ಲಾ ಕಥೆಗಳ ಹಿಂದೆ ಮೃತಪಟ್ಟವರ ಮನೆಯವರ ದು:ಖ ಅಡಗಿದೆ. ಅದನ್ನು ಅಳಿಸಲು ಯಾವತ್ತೂ ಸಾಧ್ಯವಿಲ್ಲ. ಅದರೊಂದಿಗೆ ಎಲ್ಲವೂ ಇದ್ದು, ಎಲ್ಲಿಗೋ ಬೆಳೆಯಬೇಕಿದ್ದ ದಕ್ಷಿಣ ಕನ್ನಡ ಇವತ್ತಿಗೂ ಅಲ್ಲಿಯೇ ಇದೆ ಎನ್ನುವುದು ಮಾತ್ರ ಸತ್ಯ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search