• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!

Tulunadu News Posted On May 30, 2025
0


0
Shares
  • Share On Facebook
  • Tweet It

ರಾಮನಗರಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಇನ್ನು ಮಾಂಸಾಹಾರ, ಮದ್ಯ ಮಾರಾಟ ಮಾಡುವಂತಿಲ್ಲ ಎಂದು ಅಯೋಧ್ಯೆ ನಗರ ನಿಗಮ ಹೊಸ ನಿಯಮವನ್ನು ಜಾರಿಗೆ ತಂದಿದೆ. ಈ ಮೂಲಕ ಸಂಪೂರ್ಣವಾಗಿ ಇಡೀ ಅಯೋಧ್ಯೆಯಲ್ಲಿ ಪಾವಿತ್ರತೆಯನ್ನು ಕಾಪಾಡಲು ಸ್ಥಳಿಯಾಡಳಿತ ತೀರ್ಮಾನ ಮಾಡಿದೆ. ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲು ಅಯೋಧ್ಯಾ ನಗರ ನಿಗಮ ಈ ಮೊದಲೇ ನಿರ್ಧಾರ ಮಾಡಿತ್ತು. ಆದರೆ ಈಗ ಅದು ಅನುಷ್ಟಾನಕ್ಕೆ ಬರಲು ಸಿದ್ಧತೆ ನಡೆಸಲಾಗಿದೆ. ಈಗಾಗಲೇ ಮಾಂಸಹಾರ ಮತ್ತು ಮದ್ಯ ಮಾರಾಟ ಮಾಡುತ್ತಿದ್ದ ಮಳಿಗೆಗಳಿಗೆ ನೋಟಿಸು ಜಾರಿ ಮಾಡಲಾಗಿದೆ. ಆ ನೋಟಿಸಿನಲ್ಲಿ ಮುಂದಿನ ಏಳು ದಿನಗಳ ಒಳಗೆ ಮಾಂಸದ ಖಾದ್ಯಗಳನ್ನು ಮತ್ತು ಮದ್ಯವನ್ನು ಮಾರಾಟ ಮಾಡುವುದನ್ನು ನಿಲ್ಲಿಸುವಂತೆ ಖಡಕ್ ಸೂಚನೆ ನೀಡಲಾಗಿದೆ. ಇದು ಅಯೋಧ್ಯೆಯ ರಾಮ ಮಂದಿರದ 15 ಕಿ.ಮೀ ಸುತ್ತಮುತ್ತಲು ಜಾರಿಗೆ ಬರಲಿದೆ. ಇದರೊಂದಿಗೆ ರಾಮಪಥದಲ್ಲಿ ತಂಬಾಕು, ಗುಟ್ಕಾ, ಒಳವಸ್ತುಗಳ ಜಾಹೀರಾತುಗಳನ್ನು ಕೂಡ ಹಾಕುವಂತಿಲ್ಲ ಎನ್ನುವ ನಿಯಮ ಜಾರಿಗೆ ತರಲಾಗಿದೆ. ರಾಮಪಥ ಅಯೋಧ್ಯೆಯ ರಾಮ ಮಂದಿರದಿಂದ ಫೈಜಾಬಾದ್ ಸೇರಿಸಿಕೊಂಡು 15 ಕಿಲೋ ಮೀಟರ್ ವ್ಯಾಪ್ತಿಯಲ್ಲಿದೆ.

ಇನ್ನು ಅಧಿಕಾರಿಗಳ ಪ್ರಕಾರ ರಾಮಪಥದ ಅರ್ಧ ಕಿಲೋ ಮೀಟರ್ ನಂತರವೇ ಮಾಂಸಾಹಾರ, ಮದ್ಯ ಮಾರಬಹುದು. ಇಲ್ಲಿಯ ತನಕ ರಾಮಪಥ ಬರುವ ಫೈಜಾಬಾದ್ ನಲ್ಲಿ ಇದನ್ನೆಲ್ಲಾ ಮಾರಲಾಗುತ್ತಿತ್ತು. ಇನ್ನು ಹಾಗೆ ಮಾರುವಂತಿಲ್ಲ. ಒಂದೋ ಈ ಹೋಟೇಲುಗಳು ಮಾಂಸಹಾರ ವ್ಯಾಪಾರ ನಿಲ್ಲಿಸಬೇಕು ಅಥವಾ ತಮ್ಮ ಹೋಟೇಲನ್ನು ರಾಮಪಥದ ನಂತರದ ಅರ್ಧ ಕಿಲೋ ಮೀಟರ್ ದೂರದಲ್ಲಿ ತೆರೆಯಬೇಕು.

ಅಯೋಧ್ಯೆಯ ನಗರದಲ್ಲಿ ಮಾಂಸಹಾರ, ಮದ್ಯ ಮಾರುವುದು ಹಲವು ಕಾಲದ ಹಿಂದೆಯೇ ನಿಲ್ಲಿಸಲಾಗಿದೆ. ಆದರೆ ಈಗ ರಾಮಪಥ ಫೈಜಾಬಾದನ್ನು ಸೇರಿಸಿಕೊಂಡು ಬೆಳೆದಿರುವುದರಿಂದ ಆ ಪ್ರದೇಶದಲ್ಲಿ ಇದನ್ನು ಜಾರಿಗೆ ತರುವ ಅವಶ್ಯಕತೆ ಇತ್ತು.

ಇಂತಹ ನಿಯಮ ಸ್ಥಳೀಯಾಡಳಿತದ ಸಭೆಯಲ್ಲಿ ಪಾಸಾಗುತ್ತಿದ್ದಂತೆ ಅಯೋಧ್ಯೆಯ ಆಹಾರ ಸುರಕ್ಷತಾ ವಿಭಾಗದ ಅಧಿಕಾರಿಗಳು ತಮ್ಮ ತಂಡದೊಂದಿಗೆ ರಾಮಪಥ ಸ್ಥಳಕ್ಕೆ ಬಂದು ಏಳು ದಿನಗಳ ಒಳಗೆ ತಮ್ಮ ಅಂಗಡಿಗಳಲ್ಲಿ ಮಾಂಸಹಾರ ಮಾರದಂತೆ ಸೂಚನೆ ನೀಡಿದರು. ಇನ್ನು ಒಂದು ವೇಳೆ ಈ ಸೂಚನೆ ಉಲ್ಲಂಘಿಸಿದ್ದಲ್ಲಿ ಸ್ಥಳೀಯಾಡಳಿತ ತೆಗೆದುಕೊಳ್ಳುವ ಮುಂದಿನ ಯಾವುದೇ ಕಾನೂನು ಕ್ರಮದ ಬಗ್ಗೆ ಎಚ್ಚರಿಕೆಯನ್ನು ಕೂಡ ನೀಡಿದರು. ಧರ್ಮಪಥ, ರಾಮಪಥ, 14 ಕೋಸಿ ಮತ್ತು ಪಂಚಕೋಸಿ ಮಾರ್ಗದಲ್ಲಿ ಇನ್ನು ಮಾಂಸಹಾರ ಮಾರಲಾಗುವುದಿಲ್ಲ.

ಅಯೋಧ್ಯೆ ನಗರ ನಿಗಮ ಈ ನಿಯಮವನ್ನು ತಮ್ಮ ಸಭೆಯಲ್ಲಿ ಅಂಗೀಕರಿಸಿದ ನಂತರ ಇದು ಕಟ್ಟುನಿಟ್ಟಾಗಿ ಜಾರಿಗೆ ಬರಲಿದೆ ಎಂದು ಗೊತ್ತಾದ ನಂತರ ಇಲ್ಲಿಯ ತನಕ ಮಾಂಸಾಹಾರ ಮಾರುತ್ತಿದ್ದ ವ್ಯಾಪಾರಿಗಳು ಕೂಡ ಇನ್ನು ಮುಂದೆ ತಮ್ಮ ಅಂಗಡಿಗಳಲ್ಲಿ ಸಸ್ಯಹಾರವನ್ನು ಮಾರಲು ನಿರ್ಧರಿಸಿದ್ದಾರೆ. ಸ್ಥಳಿಯಾಡಳಿತದ ಸೂಚನೆಯನ್ನು ಒಪ್ಪಿಕೊಂಡಿರುವ ವ್ಯಾಪಾರಿಗಳು ತಮ್ಮ ಅಂಗಡಿಗಳಲ್ಲಿ ಸಸ್ಯಹಾರ ಮಾರುವ ಬಗ್ಗೆ ಮಾಡಬೇಕಾದ ಬದಲಾವಣೆಗಳನ್ನು ಮಾಡಲು ಮುಂದಾಗಿದ್ದಾರೆ. ಅಯೋಧ್ಯೆಯ ಸ್ಥಳೀಯಾಡಳಿತದ ಈ ಕ್ರಮದಿಂದ ಭಾರತದ ಸನಾತನ ಪರಂಪರೆಯ ಶುದ್ಧತೆ ಮತ್ತು ಪಾವಿತ್ರತೆ ಮುಂಬರುವ ದಿನಗಳಲ್ಲಿ ಪೂರ್ಣವಾಗಿ ರಾಮನೂರಿನಲ್ಲಿ ಕಾಣಸಿಗಲಿದೆ ಎಂದು ಹೇಳಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search