• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!

Tulunadu News Posted On May 30, 2025
0


0
Shares
  • Share On Facebook
  • Tweet It

ರಾಮನಗರಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಇನ್ನು ಮಾಂಸಾಹಾರ, ಮದ್ಯ ಮಾರಾಟ ಮಾಡುವಂತಿಲ್ಲ ಎಂದು ಅಯೋಧ್ಯೆ ನಗರ ನಿಗಮ ಹೊಸ ನಿಯಮವನ್ನು ಜಾರಿಗೆ ತಂದಿದೆ. ಈ ಮೂಲಕ ಸಂಪೂರ್ಣವಾಗಿ ಇಡೀ ಅಯೋಧ್ಯೆಯಲ್ಲಿ ಪಾವಿತ್ರತೆಯನ್ನು ಕಾಪಾಡಲು ಸ್ಥಳಿಯಾಡಳಿತ ತೀರ್ಮಾನ ಮಾಡಿದೆ. ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲು ಅಯೋಧ್ಯಾ ನಗರ ನಿಗಮ ಈ ಮೊದಲೇ ನಿರ್ಧಾರ ಮಾಡಿತ್ತು. ಆದರೆ ಈಗ ಅದು ಅನುಷ್ಟಾನಕ್ಕೆ ಬರಲು ಸಿದ್ಧತೆ ನಡೆಸಲಾಗಿದೆ. ಈಗಾಗಲೇ ಮಾಂಸಹಾರ ಮತ್ತು ಮದ್ಯ ಮಾರಾಟ ಮಾಡುತ್ತಿದ್ದ ಮಳಿಗೆಗಳಿಗೆ ನೋಟಿಸು ಜಾರಿ ಮಾಡಲಾಗಿದೆ. ಆ ನೋಟಿಸಿನಲ್ಲಿ ಮುಂದಿನ ಏಳು ದಿನಗಳ ಒಳಗೆ ಮಾಂಸದ ಖಾದ್ಯಗಳನ್ನು ಮತ್ತು ಮದ್ಯವನ್ನು ಮಾರಾಟ ಮಾಡುವುದನ್ನು ನಿಲ್ಲಿಸುವಂತೆ ಖಡಕ್ ಸೂಚನೆ ನೀಡಲಾಗಿದೆ. ಇದು ಅಯೋಧ್ಯೆಯ ರಾಮ ಮಂದಿರದ 15 ಕಿ.ಮೀ ಸುತ್ತಮುತ್ತಲು ಜಾರಿಗೆ ಬರಲಿದೆ. ಇದರೊಂದಿಗೆ ರಾಮಪಥದಲ್ಲಿ ತಂಬಾಕು, ಗುಟ್ಕಾ, ಒಳವಸ್ತುಗಳ ಜಾಹೀರಾತುಗಳನ್ನು ಕೂಡ ಹಾಕುವಂತಿಲ್ಲ ಎನ್ನುವ ನಿಯಮ ಜಾರಿಗೆ ತರಲಾಗಿದೆ. ರಾಮಪಥ ಅಯೋಧ್ಯೆಯ ರಾಮ ಮಂದಿರದಿಂದ ಫೈಜಾಬಾದ್ ಸೇರಿಸಿಕೊಂಡು 15 ಕಿಲೋ ಮೀಟರ್ ವ್ಯಾಪ್ತಿಯಲ್ಲಿದೆ.

ಇನ್ನು ಅಧಿಕಾರಿಗಳ ಪ್ರಕಾರ ರಾಮಪಥದ ಅರ್ಧ ಕಿಲೋ ಮೀಟರ್ ನಂತರವೇ ಮಾಂಸಾಹಾರ, ಮದ್ಯ ಮಾರಬಹುದು. ಇಲ್ಲಿಯ ತನಕ ರಾಮಪಥ ಬರುವ ಫೈಜಾಬಾದ್ ನಲ್ಲಿ ಇದನ್ನೆಲ್ಲಾ ಮಾರಲಾಗುತ್ತಿತ್ತು. ಇನ್ನು ಹಾಗೆ ಮಾರುವಂತಿಲ್ಲ. ಒಂದೋ ಈ ಹೋಟೇಲುಗಳು ಮಾಂಸಹಾರ ವ್ಯಾಪಾರ ನಿಲ್ಲಿಸಬೇಕು ಅಥವಾ ತಮ್ಮ ಹೋಟೇಲನ್ನು ರಾಮಪಥದ ನಂತರದ ಅರ್ಧ ಕಿಲೋ ಮೀಟರ್ ದೂರದಲ್ಲಿ ತೆರೆಯಬೇಕು.

ಅಯೋಧ್ಯೆಯ ನಗರದಲ್ಲಿ ಮಾಂಸಹಾರ, ಮದ್ಯ ಮಾರುವುದು ಹಲವು ಕಾಲದ ಹಿಂದೆಯೇ ನಿಲ್ಲಿಸಲಾಗಿದೆ. ಆದರೆ ಈಗ ರಾಮಪಥ ಫೈಜಾಬಾದನ್ನು ಸೇರಿಸಿಕೊಂಡು ಬೆಳೆದಿರುವುದರಿಂದ ಆ ಪ್ರದೇಶದಲ್ಲಿ ಇದನ್ನು ಜಾರಿಗೆ ತರುವ ಅವಶ್ಯಕತೆ ಇತ್ತು.

ಇಂತಹ ನಿಯಮ ಸ್ಥಳೀಯಾಡಳಿತದ ಸಭೆಯಲ್ಲಿ ಪಾಸಾಗುತ್ತಿದ್ದಂತೆ ಅಯೋಧ್ಯೆಯ ಆಹಾರ ಸುರಕ್ಷತಾ ವಿಭಾಗದ ಅಧಿಕಾರಿಗಳು ತಮ್ಮ ತಂಡದೊಂದಿಗೆ ರಾಮಪಥ ಸ್ಥಳಕ್ಕೆ ಬಂದು ಏಳು ದಿನಗಳ ಒಳಗೆ ತಮ್ಮ ಅಂಗಡಿಗಳಲ್ಲಿ ಮಾಂಸಹಾರ ಮಾರದಂತೆ ಸೂಚನೆ ನೀಡಿದರು. ಇನ್ನು ಒಂದು ವೇಳೆ ಈ ಸೂಚನೆ ಉಲ್ಲಂಘಿಸಿದ್ದಲ್ಲಿ ಸ್ಥಳೀಯಾಡಳಿತ ತೆಗೆದುಕೊಳ್ಳುವ ಮುಂದಿನ ಯಾವುದೇ ಕಾನೂನು ಕ್ರಮದ ಬಗ್ಗೆ ಎಚ್ಚರಿಕೆಯನ್ನು ಕೂಡ ನೀಡಿದರು. ಧರ್ಮಪಥ, ರಾಮಪಥ, 14 ಕೋಸಿ ಮತ್ತು ಪಂಚಕೋಸಿ ಮಾರ್ಗದಲ್ಲಿ ಇನ್ನು ಮಾಂಸಹಾರ ಮಾರಲಾಗುವುದಿಲ್ಲ.

ಅಯೋಧ್ಯೆ ನಗರ ನಿಗಮ ಈ ನಿಯಮವನ್ನು ತಮ್ಮ ಸಭೆಯಲ್ಲಿ ಅಂಗೀಕರಿಸಿದ ನಂತರ ಇದು ಕಟ್ಟುನಿಟ್ಟಾಗಿ ಜಾರಿಗೆ ಬರಲಿದೆ ಎಂದು ಗೊತ್ತಾದ ನಂತರ ಇಲ್ಲಿಯ ತನಕ ಮಾಂಸಾಹಾರ ಮಾರುತ್ತಿದ್ದ ವ್ಯಾಪಾರಿಗಳು ಕೂಡ ಇನ್ನು ಮುಂದೆ ತಮ್ಮ ಅಂಗಡಿಗಳಲ್ಲಿ ಸಸ್ಯಹಾರವನ್ನು ಮಾರಲು ನಿರ್ಧರಿಸಿದ್ದಾರೆ. ಸ್ಥಳಿಯಾಡಳಿತದ ಸೂಚನೆಯನ್ನು ಒಪ್ಪಿಕೊಂಡಿರುವ ವ್ಯಾಪಾರಿಗಳು ತಮ್ಮ ಅಂಗಡಿಗಳಲ್ಲಿ ಸಸ್ಯಹಾರ ಮಾರುವ ಬಗ್ಗೆ ಮಾಡಬೇಕಾದ ಬದಲಾವಣೆಗಳನ್ನು ಮಾಡಲು ಮುಂದಾಗಿದ್ದಾರೆ. ಅಯೋಧ್ಯೆಯ ಸ್ಥಳೀಯಾಡಳಿತದ ಈ ಕ್ರಮದಿಂದ ಭಾರತದ ಸನಾತನ ಪರಂಪರೆಯ ಶುದ್ಧತೆ ಮತ್ತು ಪಾವಿತ್ರತೆ ಮುಂಬರುವ ದಿನಗಳಲ್ಲಿ ಪೂರ್ಣವಾಗಿ ರಾಮನೂರಿನಲ್ಲಿ ಕಾಣಸಿಗಲಿದೆ ಎಂದು ಹೇಳಲಾಗುತ್ತಿದೆ.

0
Shares
  • Share On Facebook
  • Tweet It


- Advertisement -


Trending Now
ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
Tulunadu News June 25, 2025
ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
Tulunadu News June 25, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
  • Popular Posts

    • 1
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • 2
      ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • 3
      ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • 4
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search