• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ – ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!

Tulunadu News Posted On May 30, 2025
0


0
Shares
  • Share On Facebook
  • Tweet It

ಆಂಧ್ರಪ್ರದೇಶದ ಮುಖ್ಯಮಂತ್ರಿ, ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ನೀತಿ ಆಯೋಗದ ಸಭೆಯ ಬಳಿಕ ಮಾತನಾಡಿ ತಾವು ಈಗಾಗಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ 500 ರೂಪಾಯಿ ಹಾಗೂ 2000 ರೂಪಾಯಿ ನೋಟುಗಳನ್ನು ಬ್ಯಾನ್ ಮಾಡುವಂತೆ ಮನವಿ ಮಾಡಿದ್ದು, ದೇಶದಲ್ಲಿ ಭ್ರಷ್ಟಾಚಾರವನ್ನು ಕಡಿಮೆ ಮಾಡಲು ದೊಡ್ಡ ಮುಖಬೆಲೆಯ ನೋಟುಗಳನ್ನು ಬ್ಯಾನ್ ಮಾಡುವುದೊಂದೇ ಪರಿಹಾರ ಎಂದು ತಿಳಿಸಿರುವುದಾಗಿ ಹೇಳಿದ್ದಾರೆ.

ಕಡಪದಲ್ಲಿ ತೆಲುಗು ದೇಶಂ ಪಾರ್ಟಿ (ಟಿಡಿಪಿ) ಇದರ ಮಹಾ ಸಮ್ಮೇಳನದಲ್ಲಿ ಮಾತನಾಡಿದ ನಾಯ್ಡು 2016 ರಲ್ಲಿ ಮೋದಿಯವರು 500 ಹಾಗೂ 1000 ರೂ ಮುಖಬೆಲೆಯ ನೋಟುಗಳನ್ನು ಅಮ್ಯಾನೀಕರಣಗೊಳಿಸಿದ ಸಂದರ್ಭದಲ್ಲಿ ಡಿಜಿಟಲ್ ಕರೆನ್ಸಿಯನ್ನು ಜಾರಿಗೆ ತರುವಂತೆ ತಾವೇ ಸಲಹೆ ನೀಡಿದ್ದಾಗಿ ಹೇಳಿದರು. ಆಗ ಎನ್ ಡಿಎ ಸಂಚಾಲಕರಾಗಿದ್ದ ಚಂದ್ರಬಾಬು ನಾಯ್ಡು ವಿವಿಧ ಎನ್ ಡಿಎ ಮುಖ್ಯಮಂತ್ರಿಗಳ, ತಜ್ಞರ ಹಾಗೂ ಎನ್ ಡಿಎ ರಚಿಸಲು ಕಾರಣೀಕರ್ತರಾಗಿರುವ ಹಲವರ ನಿಯೋಗವನ್ನು ರಚಿಸಿ, ನೀತಿ ನಿಯೋಗದ ಸಹಕಾರದಲ್ಲಿ ಒಂದು ಕಾರ್ಯಯೋಜನೆಯನ್ನು ಸಿದ್ಧಪಡಿಸಿದ್ದರು. ಅದು ಶೀಘ್ರ ಹಣ ವಿಲೇವಾರಿಯನ್ನು ನೋಟಿನ ಹಣದ ಕೈಬದಲಾವಣೆ ಇಲ್ಲದೇ ಮಾಡಬಹುದು ಎನ್ನುವ ಕಾರ್ಯಸೂಚಿ ರಚಿಸಲಾಗಿತ್ತು.

ಅದರ ನಂತರ ತಾವು ಮೋದಿಯವರನ್ನು ಭೇಟಿಯಾಗಿ ಡಿಜಿಟಲ್ ಕರೆನ್ಸಿ ಇರುವಾಗ ಈ 500 ಹಾಗೂ 2000 ರೂ ಮುಖಬೆಲೆಯ ಕರೆನ್ಸಿ ನೋಟುಗಳನ್ನು ಬ್ಯಾನ್ ಮಾಡಬೇಕು. ರಾಜಕೀಯದಲ್ಲಿಯೂ ಹಣ ಹಂಚುವುದು ನಿಲ್ಲಬೇಕು ಎಂದು ತಿಳಿಸಿದ್ದೆ ಎಂದು ಬಹಿರಂಗ ವೇದಿಕೆಯಲ್ಲಿ ಹೇಳಿದ ನಾಯ್ಡು ನನ್ನ ಮಾತಿಗೆ ಒಪ್ಪಿಗೆ ಇದ್ರೆ, ಪ್ರೋತ್ಸಾಹದ ಕರತಾಡನ ಮಾಡಿ ಎಂದು ಕೇಳಿಕೊಂಡರು. ಅದಕ್ಕೆ ಸಮಾವೇಶದಲ್ಲಿ ಚಪ್ಪಾಳೆಗಳು ಕಿಕ್ಕಿರಿದು ಮೊಳಗಿದವು. ಅದರಲ್ಲಿ ಸಂತೃಪ್ತರಾದ ನಾಯ್ಡು ” ಇದು ಒಂದೇ ಭ್ರಷ್ಟ್ರಾಚಾರ ತೊಲಗಿಸಲು ದಾರಿ” ಎಂದರು.

ಇನ್ನು ರಾಜಕೀಯ ಪಕ್ಷಗಳಿಗೆ ದೇಣಿಗೆಯನ್ನು ಕೂಡ ಡಿಜಿಟಲ್ ಕರೆನ್ಸಿ ಮೂಲಕ ನೀಡಿದರೆ ಆಗ ಪಕ್ಷದಲ್ಲಿಯೂ ಪಾರದರ್ಶಕತೆ ಇರುತ್ತದೆ ಎಂದು ಅವರು ಹೇಳಿದರು.

ನಾವು ಆಡಳಿತದಲ್ಲಿ ಪಾರದರ್ಶತೆಗಾಗಿ ಶ್ರಮಿಸುತ್ತಾ ಬಂದಿದ್ದೇವೆ. ಅದು ಹೊರವರ್ತುಲದ ರಿಂಗ್ ರೋಡ್ ನಿಂದ ಹಿಡಿದು ಓಬಲಾಪುರಂ ಇಲ್ಲಿನ ಗಣಿಗಾರಿಕೆ ಇರಬಹುದು. ನಾವು ದಶಕದ ಹಿಂದೆ ಓಬಲಾಪುರಂ ಗಣಿಗಾರಿಕೆ ವಿರುದ್ಧ ಅಭಿಯಾನ ಆರಂಭಿಸಿದಾಗ ಅದು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತು. ಆದರೆ ಈಗ ದಶಕದ ಬಳಿಕ ನ್ಯಾಯಾಲಯ ಕೂಡ ಅಲ್ಲಿ ಅವ್ಯವಹಾರ ಆಗಿದೆ ಎಂದು ಹೇಳಿದೆ. ನಮ್ಮ ಅಂದಿನ ಹೋರಾಟಗಳೇ ಈಗ ದೇಶದ ಜನರ ಕಣ್ಣು ತೆರೆಸಿವೆ” ಎಂದು ಹೇಳಿದ ನಾಯ್ಡು ನಮ್ಮ ಹೋರಾಟದ ಫಲಶ್ರುತಿಯಾಗಿ ಸಿಬಿಐ ನ್ಯಾಯಾಲಯ ನಾಲ್ಕು ಆರೋಪಿಗಳಿಗೆ ಏಳು ವರ್ಷ ಶಿಕ್ಷೆ ವಿಧಿಸುವಂತಾಯಿತು. ಅದರಲ್ಲಿ ಕರ್ನಾಟಕದ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಕೂಡ ಸೇರಿದ್ದಾರೆ ಎಂದರು.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search