• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ – ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!

Tulunadu News Posted On May 30, 2025
0


0
Shares
  • Share On Facebook
  • Tweet It

ಆಂಧ್ರಪ್ರದೇಶದ ಮುಖ್ಯಮಂತ್ರಿ, ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ನೀತಿ ಆಯೋಗದ ಸಭೆಯ ಬಳಿಕ ಮಾತನಾಡಿ ತಾವು ಈಗಾಗಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ 500 ರೂಪಾಯಿ ಹಾಗೂ 2000 ರೂಪಾಯಿ ನೋಟುಗಳನ್ನು ಬ್ಯಾನ್ ಮಾಡುವಂತೆ ಮನವಿ ಮಾಡಿದ್ದು, ದೇಶದಲ್ಲಿ ಭ್ರಷ್ಟಾಚಾರವನ್ನು ಕಡಿಮೆ ಮಾಡಲು ದೊಡ್ಡ ಮುಖಬೆಲೆಯ ನೋಟುಗಳನ್ನು ಬ್ಯಾನ್ ಮಾಡುವುದೊಂದೇ ಪರಿಹಾರ ಎಂದು ತಿಳಿಸಿರುವುದಾಗಿ ಹೇಳಿದ್ದಾರೆ.

ಕಡಪದಲ್ಲಿ ತೆಲುಗು ದೇಶಂ ಪಾರ್ಟಿ (ಟಿಡಿಪಿ) ಇದರ ಮಹಾ ಸಮ್ಮೇಳನದಲ್ಲಿ ಮಾತನಾಡಿದ ನಾಯ್ಡು 2016 ರಲ್ಲಿ ಮೋದಿಯವರು 500 ಹಾಗೂ 1000 ರೂ ಮುಖಬೆಲೆಯ ನೋಟುಗಳನ್ನು ಅಮ್ಯಾನೀಕರಣಗೊಳಿಸಿದ ಸಂದರ್ಭದಲ್ಲಿ ಡಿಜಿಟಲ್ ಕರೆನ್ಸಿಯನ್ನು ಜಾರಿಗೆ ತರುವಂತೆ ತಾವೇ ಸಲಹೆ ನೀಡಿದ್ದಾಗಿ ಹೇಳಿದರು. ಆಗ ಎನ್ ಡಿಎ ಸಂಚಾಲಕರಾಗಿದ್ದ ಚಂದ್ರಬಾಬು ನಾಯ್ಡು ವಿವಿಧ ಎನ್ ಡಿಎ ಮುಖ್ಯಮಂತ್ರಿಗಳ, ತಜ್ಞರ ಹಾಗೂ ಎನ್ ಡಿಎ ರಚಿಸಲು ಕಾರಣೀಕರ್ತರಾಗಿರುವ ಹಲವರ ನಿಯೋಗವನ್ನು ರಚಿಸಿ, ನೀತಿ ನಿಯೋಗದ ಸಹಕಾರದಲ್ಲಿ ಒಂದು ಕಾರ್ಯಯೋಜನೆಯನ್ನು ಸಿದ್ಧಪಡಿಸಿದ್ದರು. ಅದು ಶೀಘ್ರ ಹಣ ವಿಲೇವಾರಿಯನ್ನು ನೋಟಿನ ಹಣದ ಕೈಬದಲಾವಣೆ ಇಲ್ಲದೇ ಮಾಡಬಹುದು ಎನ್ನುವ ಕಾರ್ಯಸೂಚಿ ರಚಿಸಲಾಗಿತ್ತು.

ಅದರ ನಂತರ ತಾವು ಮೋದಿಯವರನ್ನು ಭೇಟಿಯಾಗಿ ಡಿಜಿಟಲ್ ಕರೆನ್ಸಿ ಇರುವಾಗ ಈ 500 ಹಾಗೂ 2000 ರೂ ಮುಖಬೆಲೆಯ ಕರೆನ್ಸಿ ನೋಟುಗಳನ್ನು ಬ್ಯಾನ್ ಮಾಡಬೇಕು. ರಾಜಕೀಯದಲ್ಲಿಯೂ ಹಣ ಹಂಚುವುದು ನಿಲ್ಲಬೇಕು ಎಂದು ತಿಳಿಸಿದ್ದೆ ಎಂದು ಬಹಿರಂಗ ವೇದಿಕೆಯಲ್ಲಿ ಹೇಳಿದ ನಾಯ್ಡು ನನ್ನ ಮಾತಿಗೆ ಒಪ್ಪಿಗೆ ಇದ್ರೆ, ಪ್ರೋತ್ಸಾಹದ ಕರತಾಡನ ಮಾಡಿ ಎಂದು ಕೇಳಿಕೊಂಡರು. ಅದಕ್ಕೆ ಸಮಾವೇಶದಲ್ಲಿ ಚಪ್ಪಾಳೆಗಳು ಕಿಕ್ಕಿರಿದು ಮೊಳಗಿದವು. ಅದರಲ್ಲಿ ಸಂತೃಪ್ತರಾದ ನಾಯ್ಡು ” ಇದು ಒಂದೇ ಭ್ರಷ್ಟ್ರಾಚಾರ ತೊಲಗಿಸಲು ದಾರಿ” ಎಂದರು.

ಇನ್ನು ರಾಜಕೀಯ ಪಕ್ಷಗಳಿಗೆ ದೇಣಿಗೆಯನ್ನು ಕೂಡ ಡಿಜಿಟಲ್ ಕರೆನ್ಸಿ ಮೂಲಕ ನೀಡಿದರೆ ಆಗ ಪಕ್ಷದಲ್ಲಿಯೂ ಪಾರದರ್ಶಕತೆ ಇರುತ್ತದೆ ಎಂದು ಅವರು ಹೇಳಿದರು.

ನಾವು ಆಡಳಿತದಲ್ಲಿ ಪಾರದರ್ಶತೆಗಾಗಿ ಶ್ರಮಿಸುತ್ತಾ ಬಂದಿದ್ದೇವೆ. ಅದು ಹೊರವರ್ತುಲದ ರಿಂಗ್ ರೋಡ್ ನಿಂದ ಹಿಡಿದು ಓಬಲಾಪುರಂ ಇಲ್ಲಿನ ಗಣಿಗಾರಿಕೆ ಇರಬಹುದು. ನಾವು ದಶಕದ ಹಿಂದೆ ಓಬಲಾಪುರಂ ಗಣಿಗಾರಿಕೆ ವಿರುದ್ಧ ಅಭಿಯಾನ ಆರಂಭಿಸಿದಾಗ ಅದು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತು. ಆದರೆ ಈಗ ದಶಕದ ಬಳಿಕ ನ್ಯಾಯಾಲಯ ಕೂಡ ಅಲ್ಲಿ ಅವ್ಯವಹಾರ ಆಗಿದೆ ಎಂದು ಹೇಳಿದೆ. ನಮ್ಮ ಅಂದಿನ ಹೋರಾಟಗಳೇ ಈಗ ದೇಶದ ಜನರ ಕಣ್ಣು ತೆರೆಸಿವೆ” ಎಂದು ಹೇಳಿದ ನಾಯ್ಡು ನಮ್ಮ ಹೋರಾಟದ ಫಲಶ್ರುತಿಯಾಗಿ ಸಿಬಿಐ ನ್ಯಾಯಾಲಯ ನಾಲ್ಕು ಆರೋಪಿಗಳಿಗೆ ಏಳು ವರ್ಷ ಶಿಕ್ಷೆ ವಿಧಿಸುವಂತಾಯಿತು. ಅದರಲ್ಲಿ ಕರ್ನಾಟಕದ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಕೂಡ ಸೇರಿದ್ದಾರೆ ಎಂದರು.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search