• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!

TULUNADU NEWS Posted On June 16, 2025
0


0
Shares
  • Share On Facebook
  • Tweet It

ಮಹಾರಾಷ್ಟ್ರದ ಶನಿ ಶಿಂಗನಾಪುರ ದೇಶದ ಅತೀ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದು. ಇಲ್ಲಿ ನಿತ್ಯ ಅಸಂಖ್ಯಾತ ಭಕ್ತರು ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸುತ್ತಾರೆ. ಇದರ ಆಡಳಿತ ನೋಡಿಕೊಳ್ಳುತ್ತಿರುವ ಟ್ರಸ್ಟ್ ನ ಅಧೀನ ಸುಮಾರು 2000 ಕ್ಕಿಂತಲೂ ಹೆಚ್ಚು ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಾರೆ ಎಂದು ಹೇಳಲಾಗುತ್ತದೆ. ಇಲ್ಲಿ ಇತ್ತೀಚೆಗೆ 167 ಸಿಬ್ಬಂದಿಗಳನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಆ 167 ರಲ್ಲಿ 114 ಮಂದಿ ಮುಸ್ಲಿಮರು ಎನ್ನುವುದೇ ಈಗ ಇರುವ ವಿಷಯ. ಹಾಗಾದ್ರೆ ಹಿಂದೂ ದೇವಾಲಯಗಳಲ್ಲಿ ಮುಸ್ಲಿಮರು ಕೆಲಸ ಮಾಡುತ್ತಿರುವುದು ಸರಿಯಾ ಎನ್ನುವ ಪ್ರಶ್ನೆ ಬರುತ್ತದೆ. ಇಲ್ಲಿ ಮುಸ್ಲಿಮ್ ಸಿಬ್ಬಂದಿಗಳನ್ನು ಕೆಲಸಕ್ಕೆ ನಿಯೋಜನೆಗೊಳಿಸಲಾಗಿತ್ತು. ಆದರೆ ಈಗ ಅದರಲ್ಲಿ 114 ಮಂದಿಯನ್ನು ವಜಾಮಾಡಲಾಗಿದೆ. ಇಷ್ಟು ದಿನ ಕೆಲಸಕ್ಕೆ ಇದ್ದವರನ್ನು ಈಗ ವಜಾ ಮಾಡಲು ಕಾರಣವೇನು ಎನ್ನುವ ಪ್ರಶ್ನೆ ಉದ್ಭವಿಸಿತ್ತು.

ಶನಿ ಶಿಂಗಾಪುರ ದೇವಸ್ಥಾನದ ಆಡಳಿತವನ್ನು ನಿರ್ವಹಿಸುತ್ತಿರುವ ಟ್ರಸ್ಟ್ ಪ್ರಕಾರ ವಜಾ ಮಾಡಿರುವ ಸಿಬ್ಬಂದಿಗಳನ್ನು ಶಿಸ್ತು ಉಲ್ಲಂಘನೆ ಮಾಡಿರುವ ಕಾರಣಕ್ಕೆ ಕೆಲಸದಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಲಾಗಿದೆ. ಅವರು ಕೆಲಸಕ್ಕೆ ನಿರಂತರವಾಗಿ ಗೈರಾಗಿದ್ದರು ಮತ್ತು ಉದ್ಯೋಗದಲ್ಲಿ ಸರಿಯಾಗಿ ಶಿಸ್ತಿನಿಂದ ಸೇವೆಯಲ್ಲಿ ನಿರತರಾಗಿರಲಿಲ್ಲ ಎನ್ನುವ ಕಾರಣಕ್ಕೆ ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಟ್ರಸ್ಟ್ ಹೇಳಿದೆ.

ಆದರೆ ಸಕಾಲ್ ಹಿಂದೂ ಸಮಾಜ್ ಎನ್ನುವ ಹಿಂದೂ ಪರ ಸಂಘಟನೆಯವರು ಶನಿ ಶಿಂಗಾಪುರ ಕ್ಷೇತ್ರದ ಸನ್ನಿಧಿಯಲ್ಲಿ ಮೂರ್ತಿ ಆರಾಧನೆಯನ್ನು ಒಪ್ಪದ, ಹಿಂದೂ ದೇವರ ಬಗ್ಗೆ ಭಕ್ತಿ ಇಲ್ಲದವರನ್ನು ಅಲ್ಲಿ ಕೆಲಸಕ್ಕೆ ನೇಮಿಸಿದ ಕುರಿತು ತಗಾದೆ ತೆಗೆದಿದ್ದು, ಅಂತಹ ಎಲ್ಲರನ್ನು ಕೂಡಲೇ ಕೆಲಸದಿಂದ ತೆಗೆದುಹಾಕುವಂತೆ ಟ್ರಸ್ಟ್ ಮೇಲೆ ಒತ್ತಡ ಹಾಕಿದೆ. ಅದರೊಂದಿಗೆ ಒಂದು ವಿಡಿಯೋವನ್ನು ಕೂಡ ಈ ಸಂಘಟನೆಯವರು ಬಿಡುಗಡೆ ಮಾಡಿದ್ದು, ಅದರಲ್ಲಿ ಹಿಂದೂಯೇತರರೊಬ್ಬರು ದೇವಳದಲ್ಲಿ ಪೇಟಿಂಗ್ ಕೆಲಸವನ್ನು ಮಾಡುತ್ತಿದ್ದಾರೆ ಎನ್ನುವುದು ಗೊತ್ತಾಗುತ್ತಿದೆ. ಆದರೆ ಮುಸ್ಲಿಮರನ್ನು ತೆಗೆದು ಹಾಕಿರುವ ಕ್ರಮವನ್ನು ಸಮರ್ಥಿಸಿರುವ ದೇವಳದ ಸಿಇಒ ಅವರು ಯಾವುದೇ ಪೂರ್ವಾಗ್ರಹ ಇಲ್ಲದೇ, ಕೇವಲ ಕೆಲಸ ಸರಿಯಾಗಿ ಮಾಡುತ್ತಿರಲಿಲ್ಲ ಎನ್ನುವ ಕಾರಣಕ್ಕೆ ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಹೇಳಿದ್ದಾರೆ. “ಇಲ್ಲಿ ನಾವು ಯಾವುದೇ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕುವಾಗ ಧರ್ಮಾಧಾರಿತವಾಗಿ ನೋಡದೇ, ಕೇವಲ ಅವರು ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿಲ್ಲ ಎನ್ನುವ ಏಕೈಕ ಕಾರಣಕ್ಕಾಗಿ ಕೆಲಸದಿಂದ ತೆಗೆದುಹಾಕುವುದಾಗಿ” ತಿಳಿಸಿದ್ದಾರೆ. ಇಲ್ಲಿ ಅನೇಕರು ಹಲವು ಕಾಲದಿಂದ ಕೆಲಸಕ್ಕೆ ಹಾಜರಾಗುತ್ತಿಲ್ಲ. ಅಂತವರ ಸಂಬಳವನ್ನು ಹಿಡಿದಿಟ್ಟುಕೊಂಡು ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಹೀಗೆ ಉಚ್ಚಾಟನಾ ಕ್ರಮ ತೆಗೆದುಕೊಂಡಿರುವ ಮೊದಲ ಬ್ಯಾಚ್ ಇದು” ಎಂದು ಹೇಳಲಾಗಿದೆ.

0
Shares
  • Share On Facebook
  • Tweet It


- Advertisement -


Trending Now
ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
TULUNADU NEWS June 25, 2025
ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
TULUNADU NEWS June 25, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
  • Popular Posts

    • 1
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • 2
      ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • 3
      ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • 4
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search