• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!

TULUNADU NEWS Posted On June 16, 2025
0


0
Shares
  • Share On Facebook
  • Tweet It

ಮಹಾರಾಷ್ಟ್ರದ ಶನಿ ಶಿಂಗನಾಪುರ ದೇಶದ ಅತೀ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದು. ಇಲ್ಲಿ ನಿತ್ಯ ಅಸಂಖ್ಯಾತ ಭಕ್ತರು ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸುತ್ತಾರೆ. ಇದರ ಆಡಳಿತ ನೋಡಿಕೊಳ್ಳುತ್ತಿರುವ ಟ್ರಸ್ಟ್ ನ ಅಧೀನ ಸುಮಾರು 2000 ಕ್ಕಿಂತಲೂ ಹೆಚ್ಚು ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಾರೆ ಎಂದು ಹೇಳಲಾಗುತ್ತದೆ. ಇಲ್ಲಿ ಇತ್ತೀಚೆಗೆ 167 ಸಿಬ್ಬಂದಿಗಳನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಆ 167 ರಲ್ಲಿ 114 ಮಂದಿ ಮುಸ್ಲಿಮರು ಎನ್ನುವುದೇ ಈಗ ಇರುವ ವಿಷಯ. ಹಾಗಾದ್ರೆ ಹಿಂದೂ ದೇವಾಲಯಗಳಲ್ಲಿ ಮುಸ್ಲಿಮರು ಕೆಲಸ ಮಾಡುತ್ತಿರುವುದು ಸರಿಯಾ ಎನ್ನುವ ಪ್ರಶ್ನೆ ಬರುತ್ತದೆ. ಇಲ್ಲಿ ಮುಸ್ಲಿಮ್ ಸಿಬ್ಬಂದಿಗಳನ್ನು ಕೆಲಸಕ್ಕೆ ನಿಯೋಜನೆಗೊಳಿಸಲಾಗಿತ್ತು. ಆದರೆ ಈಗ ಅದರಲ್ಲಿ 114 ಮಂದಿಯನ್ನು ವಜಾಮಾಡಲಾಗಿದೆ. ಇಷ್ಟು ದಿನ ಕೆಲಸಕ್ಕೆ ಇದ್ದವರನ್ನು ಈಗ ವಜಾ ಮಾಡಲು ಕಾರಣವೇನು ಎನ್ನುವ ಪ್ರಶ್ನೆ ಉದ್ಭವಿಸಿತ್ತು.

ಶನಿ ಶಿಂಗಾಪುರ ದೇವಸ್ಥಾನದ ಆಡಳಿತವನ್ನು ನಿರ್ವಹಿಸುತ್ತಿರುವ ಟ್ರಸ್ಟ್ ಪ್ರಕಾರ ವಜಾ ಮಾಡಿರುವ ಸಿಬ್ಬಂದಿಗಳನ್ನು ಶಿಸ್ತು ಉಲ್ಲಂಘನೆ ಮಾಡಿರುವ ಕಾರಣಕ್ಕೆ ಕೆಲಸದಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಲಾಗಿದೆ. ಅವರು ಕೆಲಸಕ್ಕೆ ನಿರಂತರವಾಗಿ ಗೈರಾಗಿದ್ದರು ಮತ್ತು ಉದ್ಯೋಗದಲ್ಲಿ ಸರಿಯಾಗಿ ಶಿಸ್ತಿನಿಂದ ಸೇವೆಯಲ್ಲಿ ನಿರತರಾಗಿರಲಿಲ್ಲ ಎನ್ನುವ ಕಾರಣಕ್ಕೆ ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಟ್ರಸ್ಟ್ ಹೇಳಿದೆ.

ಆದರೆ ಸಕಾಲ್ ಹಿಂದೂ ಸಮಾಜ್ ಎನ್ನುವ ಹಿಂದೂ ಪರ ಸಂಘಟನೆಯವರು ಶನಿ ಶಿಂಗಾಪುರ ಕ್ಷೇತ್ರದ ಸನ್ನಿಧಿಯಲ್ಲಿ ಮೂರ್ತಿ ಆರಾಧನೆಯನ್ನು ಒಪ್ಪದ, ಹಿಂದೂ ದೇವರ ಬಗ್ಗೆ ಭಕ್ತಿ ಇಲ್ಲದವರನ್ನು ಅಲ್ಲಿ ಕೆಲಸಕ್ಕೆ ನೇಮಿಸಿದ ಕುರಿತು ತಗಾದೆ ತೆಗೆದಿದ್ದು, ಅಂತಹ ಎಲ್ಲರನ್ನು ಕೂಡಲೇ ಕೆಲಸದಿಂದ ತೆಗೆದುಹಾಕುವಂತೆ ಟ್ರಸ್ಟ್ ಮೇಲೆ ಒತ್ತಡ ಹಾಕಿದೆ. ಅದರೊಂದಿಗೆ ಒಂದು ವಿಡಿಯೋವನ್ನು ಕೂಡ ಈ ಸಂಘಟನೆಯವರು ಬಿಡುಗಡೆ ಮಾಡಿದ್ದು, ಅದರಲ್ಲಿ ಹಿಂದೂಯೇತರರೊಬ್ಬರು ದೇವಳದಲ್ಲಿ ಪೇಟಿಂಗ್ ಕೆಲಸವನ್ನು ಮಾಡುತ್ತಿದ್ದಾರೆ ಎನ್ನುವುದು ಗೊತ್ತಾಗುತ್ತಿದೆ. ಆದರೆ ಮುಸ್ಲಿಮರನ್ನು ತೆಗೆದು ಹಾಕಿರುವ ಕ್ರಮವನ್ನು ಸಮರ್ಥಿಸಿರುವ ದೇವಳದ ಸಿಇಒ ಅವರು ಯಾವುದೇ ಪೂರ್ವಾಗ್ರಹ ಇಲ್ಲದೇ, ಕೇವಲ ಕೆಲಸ ಸರಿಯಾಗಿ ಮಾಡುತ್ತಿರಲಿಲ್ಲ ಎನ್ನುವ ಕಾರಣಕ್ಕೆ ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಹೇಳಿದ್ದಾರೆ. “ಇಲ್ಲಿ ನಾವು ಯಾವುದೇ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕುವಾಗ ಧರ್ಮಾಧಾರಿತವಾಗಿ ನೋಡದೇ, ಕೇವಲ ಅವರು ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿಲ್ಲ ಎನ್ನುವ ಏಕೈಕ ಕಾರಣಕ್ಕಾಗಿ ಕೆಲಸದಿಂದ ತೆಗೆದುಹಾಕುವುದಾಗಿ” ತಿಳಿಸಿದ್ದಾರೆ. ಇಲ್ಲಿ ಅನೇಕರು ಹಲವು ಕಾಲದಿಂದ ಕೆಲಸಕ್ಕೆ ಹಾಜರಾಗುತ್ತಿಲ್ಲ. ಅಂತವರ ಸಂಬಳವನ್ನು ಹಿಡಿದಿಟ್ಟುಕೊಂಡು ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಹೀಗೆ ಉಚ್ಚಾಟನಾ ಕ್ರಮ ತೆಗೆದುಕೊಂಡಿರುವ ಮೊದಲ ಬ್ಯಾಚ್ ಇದು” ಎಂದು ಹೇಳಲಾಗಿದೆ.

0
Shares
  • Share On Facebook
  • Tweet It




Trending Now
ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
TULUNADU NEWS August 4, 2025
"2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
TULUNADU NEWS August 4, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
    • ಬೈಕಂಪಾಡಿಯಲ್ಲಿ ಅಮೋನಿಯಾ ಅನಿಲ ಸೋರಿಕೆ, ನಾಲ್ವರು ತೀವ್ರ ಅಸ್ವಸ್ಥ!
    • 2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
    • ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
  • Popular Posts

    • 1
      ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • 2
      "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • 3
      ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
    • 4
      ಬೈಕಂಪಾಡಿಯಲ್ಲಿ ಅಮೋನಿಯಾ ಅನಿಲ ಸೋರಿಕೆ, ನಾಲ್ವರು ತೀವ್ರ ಅಸ್ವಸ್ಥ!
    • 5
      2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!

  • Privacy Policy
  • Contact
© Tulunadu Infomedia.

Press enter/return to begin your search