• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!

TULUNADU NEWS Posted On June 17, 2025
0


0
Shares
  • Share On Facebook
  • Tweet It

ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕುಸಿಯುತ್ತಿದೆ, ಮುಸ್ಲಿಮರ ಸಂಖ್ಯೆ ಏರಿಕೆಯಾಗುತ್ತಿದೆ ಎಂದು ಅಂತರಾಷ್ಟ್ರೀಯ ಹಿಂದೂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.

ಕೊಪ್ಪಳದಲ್ಲಿ ನಡೆದ ಹಿಂದೂಗಳ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಒಂದೆಡೆ ಮುಸ್ಲಿಮರ ಜನಸಂಖ್ಯೆ ಹೆಚ್ಚಳವಾಗುತ್ತಿದ್ದರೆ, ಹಿಂದೂಗಳ ಜನಸಂಖ್ಯೆ ಕುಸಿಯುತ್ತಿದೆ, ಭಾರತದಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಭಾರತದಲ್ಲಿ ಹಿಂದೂಗಳನ್ನು ಸುರಕ್ಷಿತವಾಗಿರಿಸಲು ಜನಸಂಖ್ಯೆಯನ್ನು ಹೆಚ್ಚಿಸಬೇಕು. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರವನ್ನು ಯೋಜನಾಬದ್ಧವಾಗಿ ನಿರ್ಮಿಸಿದಮತೆ, ಹಿಂದೂಗಳ ಸಂಖ್ಯೆಯನ್ನೂ ಹೆಚ್ಚಿಸಬೇಕು ಎಂದು ಪುನರುಚ್ಚರಿಸಿದರು. ಪ್ರತಿ ಶನಿವಾರ ಹನುಮಾನ್ ಚಾಲೀಸಾ ಪಠಣೆಯ ಮೂಲಕ ಹಿಂದೂಗಳನ್ನು ಒಗ್ಗೂಡಿಸುವ ಕರೆ ನೀಡಿದ ಅವರು, ಹಿಂದೂಗಳಾಗಿ, ಹಿಂದೂಗಳ ಜೊತೆ ಮಾತ್ರ ವ್ಯಾಪಾರ ಮಾಡಿ, ಹಿಂದೂಗಳಿಗೆ ಮಾತ್ರ ಉದ್ಯೋಗ ನೀಡಿ ಎಂದು ಸಲಹೆ ನೀಡಿದರು.

ಹಿಂದೂ ಧರ್ಮದಲ್ಲಿ ಆರೋಗ್ಯ, ವಿಜ್ಞಾನ ಮತ್ತು ಧ್ಯೇಯ ನಿರ್ವಹಣೆಯ ಅಂಶಗಳಿರುವುದಾಗಿ ಉಲ್ಲೇಖಿಸಿ ಅವರು, ನಿತ್ಯ ಬೆಳಿಗ್ಗೆ ಹಿಂದೂ ದೇವರ ಸ್ಮರಣೆ ಮಾಡಿ, ಪೋಷಕರ ಚರಣಗಳಿಗೆ ನಮಸ್ಕರಿಸಿ ಎಂದು ತಿಳಿಸಿದರು.

ಹಿಂದೂ ಧರ್ಮ 2000 ವರ್ಷಗಳ ಹಿಂದೆ ಭಾರತದಲ್ಲಿ ಸಂಪೂರ್ಣವಾಗಿ ಹಿಂದೂಗಳೇ ಇದ್ದರು. ಈಗ ಆ ಸಂಖ್ಯೆ ಕುಸಿದಿದೆ. ಸುರಕ್ಷಿತ ಮತ್ತು ಸಮೃದ್ಧ ಹಿಂದೂವಾಗಿ ಧರ್ಮವನ್ನು ಬೆಳೆಸಬೇಕು ಎಂದು ಅವರು ಕರೆ ನೀಡಿದರು. ತೊಗಾಡಿಯಾ ಹೇಳಿಕೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ- ವಿರೋಧ ಅಭಿಪ್ರಾಯಗಳ ಮಹಾಪೂರವೇ ಹರಿದುಬರುತ್ತಿದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
TULUNADU NEWS March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
TULUNADU NEWS March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search