• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!

TULUNADU NEWS Posted On June 17, 2025
0


0
Shares
  • Share On Facebook
  • Tweet It

ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕುಸಿಯುತ್ತಿದೆ, ಮುಸ್ಲಿಮರ ಸಂಖ್ಯೆ ಏರಿಕೆಯಾಗುತ್ತಿದೆ ಎಂದು ಅಂತರಾಷ್ಟ್ರೀಯ ಹಿಂದೂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.

ಕೊಪ್ಪಳದಲ್ಲಿ ನಡೆದ ಹಿಂದೂಗಳ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಒಂದೆಡೆ ಮುಸ್ಲಿಮರ ಜನಸಂಖ್ಯೆ ಹೆಚ್ಚಳವಾಗುತ್ತಿದ್ದರೆ, ಹಿಂದೂಗಳ ಜನಸಂಖ್ಯೆ ಕುಸಿಯುತ್ತಿದೆ, ಭಾರತದಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಭಾರತದಲ್ಲಿ ಹಿಂದೂಗಳನ್ನು ಸುರಕ್ಷಿತವಾಗಿರಿಸಲು ಜನಸಂಖ್ಯೆಯನ್ನು ಹೆಚ್ಚಿಸಬೇಕು. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರವನ್ನು ಯೋಜನಾಬದ್ಧವಾಗಿ ನಿರ್ಮಿಸಿದಮತೆ, ಹಿಂದೂಗಳ ಸಂಖ್ಯೆಯನ್ನೂ ಹೆಚ್ಚಿಸಬೇಕು ಎಂದು ಪುನರುಚ್ಚರಿಸಿದರು. ಪ್ರತಿ ಶನಿವಾರ ಹನುಮಾನ್ ಚಾಲೀಸಾ ಪಠಣೆಯ ಮೂಲಕ ಹಿಂದೂಗಳನ್ನು ಒಗ್ಗೂಡಿಸುವ ಕರೆ ನೀಡಿದ ಅವರು, ಹಿಂದೂಗಳಾಗಿ, ಹಿಂದೂಗಳ ಜೊತೆ ಮಾತ್ರ ವ್ಯಾಪಾರ ಮಾಡಿ, ಹಿಂದೂಗಳಿಗೆ ಮಾತ್ರ ಉದ್ಯೋಗ ನೀಡಿ ಎಂದು ಸಲಹೆ ನೀಡಿದರು.

ಹಿಂದೂ ಧರ್ಮದಲ್ಲಿ ಆರೋಗ್ಯ, ವಿಜ್ಞಾನ ಮತ್ತು ಧ್ಯೇಯ ನಿರ್ವಹಣೆಯ ಅಂಶಗಳಿರುವುದಾಗಿ ಉಲ್ಲೇಖಿಸಿ ಅವರು, ನಿತ್ಯ ಬೆಳಿಗ್ಗೆ ಹಿಂದೂ ದೇವರ ಸ್ಮರಣೆ ಮಾಡಿ, ಪೋಷಕರ ಚರಣಗಳಿಗೆ ನಮಸ್ಕರಿಸಿ ಎಂದು ತಿಳಿಸಿದರು.

ಹಿಂದೂ ಧರ್ಮ 2000 ವರ್ಷಗಳ ಹಿಂದೆ ಭಾರತದಲ್ಲಿ ಸಂಪೂರ್ಣವಾಗಿ ಹಿಂದೂಗಳೇ ಇದ್ದರು. ಈಗ ಆ ಸಂಖ್ಯೆ ಕುಸಿದಿದೆ. ಸುರಕ್ಷಿತ ಮತ್ತು ಸಮೃದ್ಧ ಹಿಂದೂವಾಗಿ ಧರ್ಮವನ್ನು ಬೆಳೆಸಬೇಕು ಎಂದು ಅವರು ಕರೆ ನೀಡಿದರು. ತೊಗಾಡಿಯಾ ಹೇಳಿಕೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ- ವಿರೋಧ ಅಭಿಪ್ರಾಯಗಳ ಮಹಾಪೂರವೇ ಹರಿದುಬರುತ್ತಿದೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
TULUNADU NEWS January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
TULUNADU NEWS January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search