• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!

TULUNADU NEWS Posted On June 17, 2025
0


0
Shares
  • Share On Facebook
  • Tweet It

ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಸಮಸ್ಯೆ ಮುಗಿಯುವಂತೆ ಕಾಣುತ್ತಿಲ್ಲ. ಮೂರುವರೆ ವರ್ಷಗಳ ಹಿಂದೆ ಟಾಟಾ ಗ್ರೂಪ್ ಮತ್ತೆ ಏರ್ ಇಂಡಿಯಾವನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ಬಳಿಕ ಮೊನ್ನೆಯಷ್ಟೇ ಭೀಕರ ದುರಂತವೊಂದು ಇತಿಹಾಸದಲ್ಲಿ ದಾಖಲಾಗಿ ಹೋಗಿರುವ ಸಂಗತಿ ನಿಮಗೆ ಗೊತ್ತೆ ಇದೆ. ದುರ್ಘಟನೆಯ ಬಳಿಕ ಈಗ ಜೂನ್ 17, 2025 ರಂದು ಭಾರತದಿಂದ ವಿವಿಧ ಸ್ಥಳಗಳಿಗೆ ತೆರಳಬೇಕಿದ್ದ ಏರ್ ಇಂಡಿಯಾಗಳ ಪ್ರಯಾಣವನ್ನು ಹಠಾತ್ ರದ್ದುಗೊಳಿಸಿರುವ ಘಟನೆ ನಡೆದಿದೆ.

ಅದರಲ್ಲಿ ಲಂಡನ್ – ಅಮೃತಸರ್, ಡೆಲ್ಲಿ – ದುಬೈ, ಬೆಂಗಳೂರು – ಲಂಡನ್, ಮುಂಬೈ – ಸಾನ್ ಫ್ರಾನ್ಸಿಸ್ಕೋ, ಅಹಮದಾಬಾದ್ – ಲಂಡನ್ ಗೆಟ್ವೀಕ್, ಡೆಲ್ಲಿ – ಪ್ಯಾರಿಸ್ ಸೇರಿವೆ. ಈ ಬಗ್ಗೆ ಏರ್ ಇಂಡಿಯಾ ಪ್ರಕಟನೆಯನ್ನು ಹೊರಡಿಸಿ ಎಐ 159 ಅಹಮದಾಬಾದ್ ನಿಂದ ಲಂಡನ್ ಗೆ ಗೆಟ್ವೇಕ್ ತೆರಳಬೇಕಿದ್ದ ವಿಮಾನ ರದ್ದಾಗಿದೆ. ಇದಕ್ಕೆ “ವಿಮಾನದ ಕೊರತೆ, ಆಗಸ ಹಾರಾಟದ ನಿಯಾಮಾವಳಿಗಳು, ಹೆಚ್ಚುವರಿ ಸುರಕ್ಷತಾ ಪರಿಶೀಲನಾ ಅಗತ್ಯ ಇದೆಲ್ಲವೂ ಇದ್ದು, ಯಾವುದೇ ತಾಂತ್ರಿಕ ಕಾರಣಗಳಿಂದ ರದ್ದಾದದ್ದು ಅಲ್ಲ” ಎಂದು ತಿಳಿಸಲಾಗಿದೆ.

ಇನ್ನು ಡೆಲ್ಲಿಯಿಂದ ಪ್ಯಾರಿಸ್ ಗೆ ಹೋಗಬೇಕಿದ್ದ ಎಐ 143 ವಿಮಾನ ರದ್ದಾಗಿರುವುದೇ ವಿಮಾನ ಹಾರಾಟದ ಮೊದಲು ಸುರಕ್ಷತಾ ಕಾರಣಗಳಿಗಾಗಿ ಕೈಗೊಂಡ ಕ್ರಮಗಳ ಬಗ್ಗೆ ಇರುವ ನಿಯಮಗಳು ಎಂದು ತಿಳಿದುಬಂದಿದೆ. ಇದರೊಂದಿಗೆ ಡೆಲ್ಲಿಯಿಂದ ರಾಂಚಿಗೆ ಹೋಗಬೇಕಿದ್ದ ಏರ್ ಇಂಡಿಯಾ ಏಕ್ಸಪ್ರೆಸ್ ಮತ್ತೆ ಡೆಲ್ಲಿ ವಿಮಾನ ನಿಲ್ದಾಣಕ್ಕೆ ಹಿಂದಿರುಗಲು ತಾಂತ್ರಿಕ ಕಾರಣಗಳು ಎನ್ನಲಾಗಿದೆ. ಆ ಬೋಯಿಂಗ್ 737 ಮ್ಯಾಕ್ಸ್ 8 ಮತ್ತೆ ಎಲ್ಲಾ ಪರೀಕ್ಷೆಯ ಬಳಿಕ ಮತ್ತೆ ತನ್ನ ಸೇವೆಯನ್ನು ಆರಂಭಿಸಿದೆ. ಒಟ್ಟಿನಲ್ಲಿ ಏರ್ ಇಂಡಿಯಾ ಈ ಎಲ್ಲಾ ಸಮಸ್ಯೆಗಳಿಂದ ಮುಕ್ತವಾಗಿ ಜನರಿಗೆ ಸೂಕ್ತ ವಾಯುಯಾನ ಸೌಲಭ್ಯ ನೀಡುವಂತಾಗಲಿ ಎಂದು ಹಾರೈಕೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
TULUNADU NEWS October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
TULUNADU NEWS October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search