• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!

TULUNADU NEWS Posted On June 17, 2025
0


0
Shares
  • Share On Facebook
  • Tweet It

ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಸಮಸ್ಯೆ ಮುಗಿಯುವಂತೆ ಕಾಣುತ್ತಿಲ್ಲ. ಮೂರುವರೆ ವರ್ಷಗಳ ಹಿಂದೆ ಟಾಟಾ ಗ್ರೂಪ್ ಮತ್ತೆ ಏರ್ ಇಂಡಿಯಾವನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ಬಳಿಕ ಮೊನ್ನೆಯಷ್ಟೇ ಭೀಕರ ದುರಂತವೊಂದು ಇತಿಹಾಸದಲ್ಲಿ ದಾಖಲಾಗಿ ಹೋಗಿರುವ ಸಂಗತಿ ನಿಮಗೆ ಗೊತ್ತೆ ಇದೆ. ದುರ್ಘಟನೆಯ ಬಳಿಕ ಈಗ ಜೂನ್ 17, 2025 ರಂದು ಭಾರತದಿಂದ ವಿವಿಧ ಸ್ಥಳಗಳಿಗೆ ತೆರಳಬೇಕಿದ್ದ ಏರ್ ಇಂಡಿಯಾಗಳ ಪ್ರಯಾಣವನ್ನು ಹಠಾತ್ ರದ್ದುಗೊಳಿಸಿರುವ ಘಟನೆ ನಡೆದಿದೆ.

ಅದರಲ್ಲಿ ಲಂಡನ್ – ಅಮೃತಸರ್, ಡೆಲ್ಲಿ – ದುಬೈ, ಬೆಂಗಳೂರು – ಲಂಡನ್, ಮುಂಬೈ – ಸಾನ್ ಫ್ರಾನ್ಸಿಸ್ಕೋ, ಅಹಮದಾಬಾದ್ – ಲಂಡನ್ ಗೆಟ್ವೀಕ್, ಡೆಲ್ಲಿ – ಪ್ಯಾರಿಸ್ ಸೇರಿವೆ. ಈ ಬಗ್ಗೆ ಏರ್ ಇಂಡಿಯಾ ಪ್ರಕಟನೆಯನ್ನು ಹೊರಡಿಸಿ ಎಐ 159 ಅಹಮದಾಬಾದ್ ನಿಂದ ಲಂಡನ್ ಗೆ ಗೆಟ್ವೇಕ್ ತೆರಳಬೇಕಿದ್ದ ವಿಮಾನ ರದ್ದಾಗಿದೆ. ಇದಕ್ಕೆ “ವಿಮಾನದ ಕೊರತೆ, ಆಗಸ ಹಾರಾಟದ ನಿಯಾಮಾವಳಿಗಳು, ಹೆಚ್ಚುವರಿ ಸುರಕ್ಷತಾ ಪರಿಶೀಲನಾ ಅಗತ್ಯ ಇದೆಲ್ಲವೂ ಇದ್ದು, ಯಾವುದೇ ತಾಂತ್ರಿಕ ಕಾರಣಗಳಿಂದ ರದ್ದಾದದ್ದು ಅಲ್ಲ” ಎಂದು ತಿಳಿಸಲಾಗಿದೆ.

ಇನ್ನು ಡೆಲ್ಲಿಯಿಂದ ಪ್ಯಾರಿಸ್ ಗೆ ಹೋಗಬೇಕಿದ್ದ ಎಐ 143 ವಿಮಾನ ರದ್ದಾಗಿರುವುದೇ ವಿಮಾನ ಹಾರಾಟದ ಮೊದಲು ಸುರಕ್ಷತಾ ಕಾರಣಗಳಿಗಾಗಿ ಕೈಗೊಂಡ ಕ್ರಮಗಳ ಬಗ್ಗೆ ಇರುವ ನಿಯಮಗಳು ಎಂದು ತಿಳಿದುಬಂದಿದೆ. ಇದರೊಂದಿಗೆ ಡೆಲ್ಲಿಯಿಂದ ರಾಂಚಿಗೆ ಹೋಗಬೇಕಿದ್ದ ಏರ್ ಇಂಡಿಯಾ ಏಕ್ಸಪ್ರೆಸ್ ಮತ್ತೆ ಡೆಲ್ಲಿ ವಿಮಾನ ನಿಲ್ದಾಣಕ್ಕೆ ಹಿಂದಿರುಗಲು ತಾಂತ್ರಿಕ ಕಾರಣಗಳು ಎನ್ನಲಾಗಿದೆ. ಆ ಬೋಯಿಂಗ್ 737 ಮ್ಯಾಕ್ಸ್ 8 ಮತ್ತೆ ಎಲ್ಲಾ ಪರೀಕ್ಷೆಯ ಬಳಿಕ ಮತ್ತೆ ತನ್ನ ಸೇವೆಯನ್ನು ಆರಂಭಿಸಿದೆ. ಒಟ್ಟಿನಲ್ಲಿ ಏರ್ ಇಂಡಿಯಾ ಈ ಎಲ್ಲಾ ಸಮಸ್ಯೆಗಳಿಂದ ಮುಕ್ತವಾಗಿ ಜನರಿಗೆ ಸೂಕ್ತ ವಾಯುಯಾನ ಸೌಲಭ್ಯ ನೀಡುವಂತಾಗಲಿ ಎಂದು ಹಾರೈಕೆ.

0
Shares
  • Share On Facebook
  • Tweet It


- Advertisement -


Trending Now
ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
TULUNADU NEWS June 25, 2025
ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
TULUNADU NEWS June 25, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
  • Popular Posts

    • 1
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • 2
      ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • 3
      ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • 4
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search