• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!

TULUNADU NEWS Posted On June 17, 2025
0


0
Shares
  • Share On Facebook
  • Tweet It

ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಸಮಸ್ಯೆ ಮುಗಿಯುವಂತೆ ಕಾಣುತ್ತಿಲ್ಲ. ಮೂರುವರೆ ವರ್ಷಗಳ ಹಿಂದೆ ಟಾಟಾ ಗ್ರೂಪ್ ಮತ್ತೆ ಏರ್ ಇಂಡಿಯಾವನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ಬಳಿಕ ಮೊನ್ನೆಯಷ್ಟೇ ಭೀಕರ ದುರಂತವೊಂದು ಇತಿಹಾಸದಲ್ಲಿ ದಾಖಲಾಗಿ ಹೋಗಿರುವ ಸಂಗತಿ ನಿಮಗೆ ಗೊತ್ತೆ ಇದೆ. ದುರ್ಘಟನೆಯ ಬಳಿಕ ಈಗ ಜೂನ್ 17, 2025 ರಂದು ಭಾರತದಿಂದ ವಿವಿಧ ಸ್ಥಳಗಳಿಗೆ ತೆರಳಬೇಕಿದ್ದ ಏರ್ ಇಂಡಿಯಾಗಳ ಪ್ರಯಾಣವನ್ನು ಹಠಾತ್ ರದ್ದುಗೊಳಿಸಿರುವ ಘಟನೆ ನಡೆದಿದೆ.

ಅದರಲ್ಲಿ ಲಂಡನ್ – ಅಮೃತಸರ್, ಡೆಲ್ಲಿ – ದುಬೈ, ಬೆಂಗಳೂರು – ಲಂಡನ್, ಮುಂಬೈ – ಸಾನ್ ಫ್ರಾನ್ಸಿಸ್ಕೋ, ಅಹಮದಾಬಾದ್ – ಲಂಡನ್ ಗೆಟ್ವೀಕ್, ಡೆಲ್ಲಿ – ಪ್ಯಾರಿಸ್ ಸೇರಿವೆ. ಈ ಬಗ್ಗೆ ಏರ್ ಇಂಡಿಯಾ ಪ್ರಕಟನೆಯನ್ನು ಹೊರಡಿಸಿ ಎಐ 159 ಅಹಮದಾಬಾದ್ ನಿಂದ ಲಂಡನ್ ಗೆ ಗೆಟ್ವೇಕ್ ತೆರಳಬೇಕಿದ್ದ ವಿಮಾನ ರದ್ದಾಗಿದೆ. ಇದಕ್ಕೆ “ವಿಮಾನದ ಕೊರತೆ, ಆಗಸ ಹಾರಾಟದ ನಿಯಾಮಾವಳಿಗಳು, ಹೆಚ್ಚುವರಿ ಸುರಕ್ಷತಾ ಪರಿಶೀಲನಾ ಅಗತ್ಯ ಇದೆಲ್ಲವೂ ಇದ್ದು, ಯಾವುದೇ ತಾಂತ್ರಿಕ ಕಾರಣಗಳಿಂದ ರದ್ದಾದದ್ದು ಅಲ್ಲ” ಎಂದು ತಿಳಿಸಲಾಗಿದೆ.

ಇನ್ನು ಡೆಲ್ಲಿಯಿಂದ ಪ್ಯಾರಿಸ್ ಗೆ ಹೋಗಬೇಕಿದ್ದ ಎಐ 143 ವಿಮಾನ ರದ್ದಾಗಿರುವುದೇ ವಿಮಾನ ಹಾರಾಟದ ಮೊದಲು ಸುರಕ್ಷತಾ ಕಾರಣಗಳಿಗಾಗಿ ಕೈಗೊಂಡ ಕ್ರಮಗಳ ಬಗ್ಗೆ ಇರುವ ನಿಯಮಗಳು ಎಂದು ತಿಳಿದುಬಂದಿದೆ. ಇದರೊಂದಿಗೆ ಡೆಲ್ಲಿಯಿಂದ ರಾಂಚಿಗೆ ಹೋಗಬೇಕಿದ್ದ ಏರ್ ಇಂಡಿಯಾ ಏಕ್ಸಪ್ರೆಸ್ ಮತ್ತೆ ಡೆಲ್ಲಿ ವಿಮಾನ ನಿಲ್ದಾಣಕ್ಕೆ ಹಿಂದಿರುಗಲು ತಾಂತ್ರಿಕ ಕಾರಣಗಳು ಎನ್ನಲಾಗಿದೆ. ಆ ಬೋಯಿಂಗ್ 737 ಮ್ಯಾಕ್ಸ್ 8 ಮತ್ತೆ ಎಲ್ಲಾ ಪರೀಕ್ಷೆಯ ಬಳಿಕ ಮತ್ತೆ ತನ್ನ ಸೇವೆಯನ್ನು ಆರಂಭಿಸಿದೆ. ಒಟ್ಟಿನಲ್ಲಿ ಏರ್ ಇಂಡಿಯಾ ಈ ಎಲ್ಲಾ ಸಮಸ್ಯೆಗಳಿಂದ ಮುಕ್ತವಾಗಿ ಜನರಿಗೆ ಸೂಕ್ತ ವಾಯುಯಾನ ಸೌಲಭ್ಯ ನೀಡುವಂತಾಗಲಿ ಎಂದು ಹಾರೈಕೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
TULUNADU NEWS May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
TULUNADU NEWS May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search