• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

TULUNADU NEWS Posted On June 18, 2025
0


0
Shares
  • Share On Facebook
  • Tweet It

ಸುಮಾರು 70 ತೊಲ ಬಂಗಾರದ ಆಭರಣಗಳು, 80 ಸಾವಿರ ರೂಪಾಯಿ ನಗದು, ಭಗವದ್ಗೀತೆ ಪುಸ್ತಕ, ಪಾಸ್ ಪೋರ್ಟ್ ಪುಸ್ತಕಗಳು ಇದು ಮೊದಲು ಯಾರು ಅಲ್ಲಿ ಹೋಗಿದ್ದರೋ ಅವರಿಗೆ ಸಿಕ್ಕಿರುವ ವಸ್ತುಗಳು. ಜೂನ್ 12 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಹಮದಾಬಾದ್ ನಿಂದ ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೆಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ದುರಂತ ಅಂತ್ಯ ಕಂಡಿತ್ತು.

ಬೋಯಿಂಗ್ 787 -8 ಡ್ರೀಮ್ ಲೈನರ್ ವಿಮಾನ ಮೊದಲು ಟೆಕ್ ಆಫ್ ಆದ ಕೆಲವೇ ಸೆಕೆಂಡ್ ಗಳಲ್ಲಿ ಬಿಜೆ ಮೆಡಿಕಲ್ ಕಾಲೇಜಿನ ಸಿವಿಲ್ ಆಸ್ಪತ್ರೆಯ ಭೋಜನಾಲಯ ಇರುವ ಕಟ್ಟಡಕ್ಕೆ ಹೊಡೆದು ನಂತರ ಹಿರಿಯ ವೈದ್ಯರು ತಂಗುವ ಅಲ್ಲಿನ ಹಾಸ್ಟೆಲ್ ನಲ್ಲಿ ಸಿಲುಕಿಕೊಂಡಿತು. ಇದರಿಂದ ಎರಡೂ ಕಟ್ಟಡಗಳಿಗೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಇದೇ ಸಂದರ್ಭದಲ್ಲಿ ಅಲ್ಲಿಯೇ ಸನಿಹದಲ್ಲಿದ್ದ ರಾಜು ಪಟೇಲ್, 56 ವರ್ಷ ಪ್ರಾಯದ ಕಟ್ಟಡ ನಿರ್ಮಾಣಕಾರ ತಕ್ಷಣ ಅಲ್ಲಿಗೆ ಹೋಗಿದ್ದು, ಮೊದಲ 15 – 20 ನಿಮಿಷ ಅವರು ಅಲ್ಲಿ ಹತ್ತಿರಕ್ಕೂ ಹೋಗಲು ಸಾಧ್ಯವಿರಲಿಲ್ಲವಂತೆ. ಈ ಬಗ್ಗೆ ಮಾಹಿತಿ ನೀಡಿದ ಅವರು ” ನಮ್ಮ ತಂಡದ ಬಳಿ ಸ್ಟೇಚರ್ ಇರಲಿಲ್ಲ, ಆದರೆ ನಾವು ಎದೆಗುಂದಲಿಲ್ಲ. ಸಾರಿ ಮತ್ತು ಶೀಟ್ಸ್ ಬಳಸಿ ಗಾಯಾಳುಗಳನ್ನು ಎತ್ತುವ ಪ್ರಯತ್ನ ಮಾಡಿದೆವು. ಮೊದಲ ಅಗ್ನಿಶಾಮಕ ದಳ ಹಾಗೂ 108 ಅಂಬ್ಯುಲೆನ್ಸ್ ಬಂದ ಕೂಡಲೇ ನಾವು ರಕ್ಷಣಾ ಕಾರ್ಯಾಚರಣೆಗೆ ಧುಮುಕಿದೆವು” ಎಂದು ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ.

“ಅಲ್ಲಿ ಬಿದ್ದಿದ್ದ ಹೆಚ್ಚಿನ ಸಾಮಾಗ್ರಿಗಳು ಸುಟ್ಟ ಸ್ಥಿತಿಯಲ್ಲಿ ಮತ್ತು ಮುರಿದ ಪರಿಸ್ಥಿತಿಯಲ್ಲಿತ್ತು. ಮೊದಲ ಆದ್ಯತೆಯಾಗಿ ಗಾಯಾಳುಗಳನ್ನು ರಕ್ಷಿಸುವ ಕೆಲಸ ನಡೆಸಲಾಯಿತು. ನಂತರ ಅಲ್ಲಿ ಪರಿಶೀಲಿಸಿದಾಗ 70 ತೊಲ ಬಂಗಾರದ ಆಭರಣಗಳು, 80 ಸಾವಿರ ನಗದು, ಅನೇಕ ಪಾಸ್ ಪೋರ್ಟ್ ಗಳು, ಭಗವದ್ಗೀತೆ ಸಿಕ್ಕಿದೆ. ಇದೆಲ್ಲವನ್ನು ನಾವು ಪೊಲೀಸ್ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದೇವೆ” ಎಂದು ಪಟೇಲ್ ತಿಳಿಸಿದರು. ಪಟೇಲ್ ಹಾಗೂ ಅವರ ತಂಡಕ್ಕೆ ರಾತ್ರಿ 9 ಗಂಟೆಯ ತನಕ ಅಲ್ಲಿ ರಕ್ಷಣಾ ಕಾರ್ಯಗಳಿಗೆ ಕೈಜೋಡಿಸಲು ಅನುಮತಿ ನೀಡಲಾಗಿತ್ತು.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
TULUNADU NEWS December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
TULUNADU NEWS December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search