• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

TULUNADU NEWS Posted On June 18, 2025
0


0
Shares
  • Share On Facebook
  • Tweet It

ಸುಮಾರು 70 ತೊಲ ಬಂಗಾರದ ಆಭರಣಗಳು, 80 ಸಾವಿರ ರೂಪಾಯಿ ನಗದು, ಭಗವದ್ಗೀತೆ ಪುಸ್ತಕ, ಪಾಸ್ ಪೋರ್ಟ್ ಪುಸ್ತಕಗಳು ಇದು ಮೊದಲು ಯಾರು ಅಲ್ಲಿ ಹೋಗಿದ್ದರೋ ಅವರಿಗೆ ಸಿಕ್ಕಿರುವ ವಸ್ತುಗಳು. ಜೂನ್ 12 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಹಮದಾಬಾದ್ ನಿಂದ ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೆಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ದುರಂತ ಅಂತ್ಯ ಕಂಡಿತ್ತು.

ಬೋಯಿಂಗ್ 787 -8 ಡ್ರೀಮ್ ಲೈನರ್ ವಿಮಾನ ಮೊದಲು ಟೆಕ್ ಆಫ್ ಆದ ಕೆಲವೇ ಸೆಕೆಂಡ್ ಗಳಲ್ಲಿ ಬಿಜೆ ಮೆಡಿಕಲ್ ಕಾಲೇಜಿನ ಸಿವಿಲ್ ಆಸ್ಪತ್ರೆಯ ಭೋಜನಾಲಯ ಇರುವ ಕಟ್ಟಡಕ್ಕೆ ಹೊಡೆದು ನಂತರ ಹಿರಿಯ ವೈದ್ಯರು ತಂಗುವ ಅಲ್ಲಿನ ಹಾಸ್ಟೆಲ್ ನಲ್ಲಿ ಸಿಲುಕಿಕೊಂಡಿತು. ಇದರಿಂದ ಎರಡೂ ಕಟ್ಟಡಗಳಿಗೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಇದೇ ಸಂದರ್ಭದಲ್ಲಿ ಅಲ್ಲಿಯೇ ಸನಿಹದಲ್ಲಿದ್ದ ರಾಜು ಪಟೇಲ್, 56 ವರ್ಷ ಪ್ರಾಯದ ಕಟ್ಟಡ ನಿರ್ಮಾಣಕಾರ ತಕ್ಷಣ ಅಲ್ಲಿಗೆ ಹೋಗಿದ್ದು, ಮೊದಲ 15 – 20 ನಿಮಿಷ ಅವರು ಅಲ್ಲಿ ಹತ್ತಿರಕ್ಕೂ ಹೋಗಲು ಸಾಧ್ಯವಿರಲಿಲ್ಲವಂತೆ. ಈ ಬಗ್ಗೆ ಮಾಹಿತಿ ನೀಡಿದ ಅವರು ” ನಮ್ಮ ತಂಡದ ಬಳಿ ಸ್ಟೇಚರ್ ಇರಲಿಲ್ಲ, ಆದರೆ ನಾವು ಎದೆಗುಂದಲಿಲ್ಲ. ಸಾರಿ ಮತ್ತು ಶೀಟ್ಸ್ ಬಳಸಿ ಗಾಯಾಳುಗಳನ್ನು ಎತ್ತುವ ಪ್ರಯತ್ನ ಮಾಡಿದೆವು. ಮೊದಲ ಅಗ್ನಿಶಾಮಕ ದಳ ಹಾಗೂ 108 ಅಂಬ್ಯುಲೆನ್ಸ್ ಬಂದ ಕೂಡಲೇ ನಾವು ರಕ್ಷಣಾ ಕಾರ್ಯಾಚರಣೆಗೆ ಧುಮುಕಿದೆವು” ಎಂದು ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ.

“ಅಲ್ಲಿ ಬಿದ್ದಿದ್ದ ಹೆಚ್ಚಿನ ಸಾಮಾಗ್ರಿಗಳು ಸುಟ್ಟ ಸ್ಥಿತಿಯಲ್ಲಿ ಮತ್ತು ಮುರಿದ ಪರಿಸ್ಥಿತಿಯಲ್ಲಿತ್ತು. ಮೊದಲ ಆದ್ಯತೆಯಾಗಿ ಗಾಯಾಳುಗಳನ್ನು ರಕ್ಷಿಸುವ ಕೆಲಸ ನಡೆಸಲಾಯಿತು. ನಂತರ ಅಲ್ಲಿ ಪರಿಶೀಲಿಸಿದಾಗ 70 ತೊಲ ಬಂಗಾರದ ಆಭರಣಗಳು, 80 ಸಾವಿರ ನಗದು, ಅನೇಕ ಪಾಸ್ ಪೋರ್ಟ್ ಗಳು, ಭಗವದ್ಗೀತೆ ಸಿಕ್ಕಿದೆ. ಇದೆಲ್ಲವನ್ನು ನಾವು ಪೊಲೀಸ್ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದೇವೆ” ಎಂದು ಪಟೇಲ್ ತಿಳಿಸಿದರು. ಪಟೇಲ್ ಹಾಗೂ ಅವರ ತಂಡಕ್ಕೆ ರಾತ್ರಿ 9 ಗಂಟೆಯ ತನಕ ಅಲ್ಲಿ ರಕ್ಷಣಾ ಕಾರ್ಯಗಳಿಗೆ ಕೈಜೋಡಿಸಲು ಅನುಮತಿ ನೀಡಲಾಗಿತ್ತು.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
TULUNADU NEWS October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
TULUNADU NEWS October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search