• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

TULUNADU NEWS Posted On June 18, 2025
0


0
Shares
  • Share On Facebook
  • Tweet It

ಸುಮಾರು 70 ತೊಲ ಬಂಗಾರದ ಆಭರಣಗಳು, 80 ಸಾವಿರ ರೂಪಾಯಿ ನಗದು, ಭಗವದ್ಗೀತೆ ಪುಸ್ತಕ, ಪಾಸ್ ಪೋರ್ಟ್ ಪುಸ್ತಕಗಳು ಇದು ಮೊದಲು ಯಾರು ಅಲ್ಲಿ ಹೋಗಿದ್ದರೋ ಅವರಿಗೆ ಸಿಕ್ಕಿರುವ ವಸ್ತುಗಳು. ಜೂನ್ 12 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಹಮದಾಬಾದ್ ನಿಂದ ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೆಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ದುರಂತ ಅಂತ್ಯ ಕಂಡಿತ್ತು.

ಬೋಯಿಂಗ್ 787 -8 ಡ್ರೀಮ್ ಲೈನರ್ ವಿಮಾನ ಮೊದಲು ಟೆಕ್ ಆಫ್ ಆದ ಕೆಲವೇ ಸೆಕೆಂಡ್ ಗಳಲ್ಲಿ ಬಿಜೆ ಮೆಡಿಕಲ್ ಕಾಲೇಜಿನ ಸಿವಿಲ್ ಆಸ್ಪತ್ರೆಯ ಭೋಜನಾಲಯ ಇರುವ ಕಟ್ಟಡಕ್ಕೆ ಹೊಡೆದು ನಂತರ ಹಿರಿಯ ವೈದ್ಯರು ತಂಗುವ ಅಲ್ಲಿನ ಹಾಸ್ಟೆಲ್ ನಲ್ಲಿ ಸಿಲುಕಿಕೊಂಡಿತು. ಇದರಿಂದ ಎರಡೂ ಕಟ್ಟಡಗಳಿಗೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಇದೇ ಸಂದರ್ಭದಲ್ಲಿ ಅಲ್ಲಿಯೇ ಸನಿಹದಲ್ಲಿದ್ದ ರಾಜು ಪಟೇಲ್, 56 ವರ್ಷ ಪ್ರಾಯದ ಕಟ್ಟಡ ನಿರ್ಮಾಣಕಾರ ತಕ್ಷಣ ಅಲ್ಲಿಗೆ ಹೋಗಿದ್ದು, ಮೊದಲ 15 – 20 ನಿಮಿಷ ಅವರು ಅಲ್ಲಿ ಹತ್ತಿರಕ್ಕೂ ಹೋಗಲು ಸಾಧ್ಯವಿರಲಿಲ್ಲವಂತೆ. ಈ ಬಗ್ಗೆ ಮಾಹಿತಿ ನೀಡಿದ ಅವರು ” ನಮ್ಮ ತಂಡದ ಬಳಿ ಸ್ಟೇಚರ್ ಇರಲಿಲ್ಲ, ಆದರೆ ನಾವು ಎದೆಗುಂದಲಿಲ್ಲ. ಸಾರಿ ಮತ್ತು ಶೀಟ್ಸ್ ಬಳಸಿ ಗಾಯಾಳುಗಳನ್ನು ಎತ್ತುವ ಪ್ರಯತ್ನ ಮಾಡಿದೆವು. ಮೊದಲ ಅಗ್ನಿಶಾಮಕ ದಳ ಹಾಗೂ 108 ಅಂಬ್ಯುಲೆನ್ಸ್ ಬಂದ ಕೂಡಲೇ ನಾವು ರಕ್ಷಣಾ ಕಾರ್ಯಾಚರಣೆಗೆ ಧುಮುಕಿದೆವು” ಎಂದು ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ.

“ಅಲ್ಲಿ ಬಿದ್ದಿದ್ದ ಹೆಚ್ಚಿನ ಸಾಮಾಗ್ರಿಗಳು ಸುಟ್ಟ ಸ್ಥಿತಿಯಲ್ಲಿ ಮತ್ತು ಮುರಿದ ಪರಿಸ್ಥಿತಿಯಲ್ಲಿತ್ತು. ಮೊದಲ ಆದ್ಯತೆಯಾಗಿ ಗಾಯಾಳುಗಳನ್ನು ರಕ್ಷಿಸುವ ಕೆಲಸ ನಡೆಸಲಾಯಿತು. ನಂತರ ಅಲ್ಲಿ ಪರಿಶೀಲಿಸಿದಾಗ 70 ತೊಲ ಬಂಗಾರದ ಆಭರಣಗಳು, 80 ಸಾವಿರ ನಗದು, ಅನೇಕ ಪಾಸ್ ಪೋರ್ಟ್ ಗಳು, ಭಗವದ್ಗೀತೆ ಸಿಕ್ಕಿದೆ. ಇದೆಲ್ಲವನ್ನು ನಾವು ಪೊಲೀಸ್ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದೇವೆ” ಎಂದು ಪಟೇಲ್ ತಿಳಿಸಿದರು. ಪಟೇಲ್ ಹಾಗೂ ಅವರ ತಂಡಕ್ಕೆ ರಾತ್ರಿ 9 ಗಂಟೆಯ ತನಕ ಅಲ್ಲಿ ರಕ್ಷಣಾ ಕಾರ್ಯಗಳಿಗೆ ಕೈಜೋಡಿಸಲು ಅನುಮತಿ ನೀಡಲಾಗಿತ್ತು.

0
Shares
  • Share On Facebook
  • Tweet It


- Advertisement -


Trending Now
ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
TULUNADU NEWS June 25, 2025
ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
TULUNADU NEWS June 25, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
  • Popular Posts

    • 1
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • 2
      ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • 3
      ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • 4
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search