• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ…

Tulunadu News Posted On June 20, 2025
0


0
Shares
  • Share On Facebook
  • Tweet It

ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ, ಕಿರುಕುಳ ವಿರುದ್ಧ ಉಪ್ಪಿನಂಗಡಿಯ ಹಿರಿಯ ನಾಗರಿಕ ಯು.ಜಿ.ರಾಧಾ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆಗೆತ್ತಿಕೊಂಡಿರುವ ಹೈಕೋರ್ಟ್, ಕಾನೂನನಿನ ಚೌಕಟ್ಟನ್ನು ಮೀರಿ ಅರ್ಜಿದಾರರಿಗೆ ಯಾವುದೇ ತೊಂದರೆ ನೀಡದಂತೆ ನಿರ್ಭಂದಿಸಿ ಮಧ್ಯಂತರ ಆದೇಶ ಮಾಡಿದೆ.

ಪೊಲೀಸರು ಮಧ್ಯರಾತ್ರಿ ಮನೆಗೆ ಆಗಮಿಸಿ ಆರೋಪಿಯ ರೀತಿಯಲ್ಲಿ ಫೋಟೋ ತೆಗೆಸಿ ವೈಯಕ್ತಿಕ ಸ್ವಾತಂತ್ರ್ಯಕ್ಕೆ ದಕ್ಕೆ ಉಂಟು ಮಾಡಿದ್ದಾರೆಂದು ಆರೋಪಿಸಿ ಯು.ಜಿ.ರಾಧಾ ಅವರು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿ, ಈ ಸಂಬಂಧ ಪ್ರತಿವಾದಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ್ದರು. ಕರ್ನಾಟಕ ಸರಕಾರದ ಗೃಹ ಇಲಾಖೆ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ದಕ ಜಿಲ್ಲಾ ಪೊಲೀಸ್ ಅಧೀಕ್ಷಕರು, ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್, ದಕ ಎಸ್ಪಿ ಡಾ ಕೆ ಅರುಣ್, ಉಪ್ಪಿನಂಗಡಿ ಎಸ್ ಐ ಅವಿನಾಶ್ ಗೌಡ ಇವರನ್ನು ಪ್ರತಿವಾದಿಗಳಾಗಿ ಮಾಡಲಾಗಿದೆ. ಯುಜಿ ರಾಧಾ ಅವರು ಸಲ್ಲಿಸಿದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರ ಏಕಸದಸ್ಯ ಪೀಠ ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ಘಟನೆಗೆ ಸಂಬಂಧಿಸಿ ದಾಖಲೆ ಸಮೇತ ಉತ್ತರಿಸಬೇಕು ಎಂದು ಪ್ರತಿವಾದಿಗಳಿಗೆ ನೋಟಿಸು ಜಾರಿ ಮಾಡಿದೆ.

ಜೂನ್ 1 ರಂದು ಯು ಜಿ ರಾಧಾ ಅವರು ಉಪ್ಪಿನಂಗಡಿ ಪೇಟೆಯಲ್ಲಿರುವ ತಮ್ಮ ಮೆಡಿಕಲ್ ಶಾಪ್ ನಲ್ಲಿದ್ದಾಗ ಪೊಲೀಸರು ಮೆಡಿಕಲ್ ಟೆಸ್ಟಿಗೆ ಬಂದಿದ್ದರು. ಮರುದಿನ ಮಧ್ಯರಾತ್ರಿ ಅವರ ಮನೆಗೆ ತೆರಳಿದ ಪೊಲೀಸರು ಅವರ ಫೋಟೋ ತೆಗೆದು ಜಿಪಿಎಸ್ ಮೂಲಕ ಅಪಲೋಡ್ ಮಾಡಿದ್ದರು. ಈ ಬಗ್ಗೆ ಪ್ರಶ್ನಿಸಿದಾಗ ಎಸ್ಪಿಯವರ ಸೂಚನೆ ಇದೆ ಎಂದು ಪೊಲೀಸರು ತಿಳಿಸಿದ್ದರು. ಪೊಲೀಸರ ಈ ಕ್ರಮದ ವಿರುದ್ಧ ಜೂನ್ 3 ರಂದು ಯುಜಿ ರಾಧಾ ಅವರು ಹೈಕೋರ್ಟ್ ಮೆಟ್ಟಲೇರಿದ್ದರು.

ತಮ್ಮ ವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಪೊಲೀಸರು ವಿನಾಕಾರಣ ಕಸಿದಿದ್ದಾರೆ. ಆರೋಪಿಯ ರೀತಿ ನನ್ನನ್ನು ಪೊಲೀಸರು ನಡೆಸಿಕೊಂಡಿದ್ದು, ಇದರಿಂದ ನನ್ನ ಖಾಸಗಿತನ, ಚಾರಿತ್ರ್ಯಕ್ಕೆ ದಕ್ಕೆಯಾಗಿದೆ. ಈ ಮೂಲಕ ನನಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗಿದೆ. ಹೀಗಾಗಿ ನನಗೆ 20 ಲಕ್ಷ ರೂ ಮಾನನಷ್ಟ ಪರಿಹಾರ ನೀಡಬೇಕು ಎಂದು ಯು.ಜಿ.ರಾಧಾ ರಿಟ್ ಅರ್ಜಿಯಲ್ಲಿ ಕೋರಿದ್ದಾರೆ. ಅರ್ಜಿದಾರರ ಪರ ಹಿರಿಯ ವಕೀಲರಾದ ಅರುಣ್ ಶ್ಯಾಮ್ ಪುತ್ತೂರು ವಾದಿಸಿದ್ದಾರೆ.

ಜೂನ್ 19 ರಂದು ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಪೀಠ, ಪ್ರಕರಣ ವಿಚಾರಣೆಯಲ್ಲಿರುವುದರಿಂದ, ಕಾನೂನು ಪರಿವ್ಯಾಪ್ತಿಯನ್ನು ಹೊರತುಪಡಿಸಿ ದೂರುದಾರರಿಗೆ ಯಾವುದೇ ರೀತಿಯ ಕಿರುಕುಳವನ್ನು ಪೊಲೀಸರು ನೀಡಬಾರದು. ದೂರುದಾರರ ಮನೆಗಳಿಗೆ ಪೊಲೀಸರು ಆಗಮಿಸಿದ ವಿದ್ಯಮಾನಕ್ಕೆ ಸಂಬಂಧಿಸಿ ದಾಖಲೆ ಸಲ್ಲಿಸಬೇಕು ಎಂದು ಸೂಚಿಸಿ ಪ್ರತಿವಾದಿಗಳಿಗೆ ನೋಟಿಸು ಜಾರಿಗೆ ಆದೇಶಿಸಿದೆ. ಘಟನೆ ಕುರಿತು ಯು ಜಿ ರಾಧಾ ಅವರು ಪೊಲೀಸ್ ದೂರು ಪ್ರಾಧಿಕಾರ ಹಾಗೂ ರಾಷ್ಟ್ರೀಯ ಮಾನ ಹಕ್ಕು ಆಯೋಗಕ್ಕೆ ಪ್ರತ್ಯೇಕ ದೂರು ಸಲ್ಲಿಸಿದ್ದರು.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search