• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ – ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!

TULUNADU NEWS Posted On June 24, 2025
0


0
Shares
  • Share On Facebook
  • Tweet It

ರಾಜ್ಯ ಸರಕಾರಕ್ಕೆ ಎರಡು ವರ್ಷ ತುಂಬುತ್ತಿದ್ದಂತೆ ಆಡಳಿತ ಪಕ್ಷ ಕಾಂಗ್ರೆಸ್ ನಲ್ಲಿ ಶಾಸಕರು ಒಂದೊಂದು ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಾ ಸುದ್ದಿಯಲ್ಲಿದ್ದಾರೆ. ಈಗ ಇದಕ್ಕೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕಾಂಗ್ರೆಸ್ ಶಾಸಕ ಎನ್. ವೈ, ಗೋಪಾಲಕೃಷ್ಣ ಹೊಸ ಸೇರ್ಪಡೆ. ತಮ್ಮ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಾಧ್ಯವಾಗದಿರುವ ಬಗ್ಗೆ ತಮ್ಮ ಬೇಸರವನ್ನು ಬಹಿರಂಗ ವೇದಿಕೆಯಲ್ಲಿ ಅವರು ಹೊರಹಾಕಿದ್ದಾರೆ. ಅವರು ತಮ್ಮ ವಿಧಾನಸಭಾ ಕ್ಷೇತ್ರದ ಕಣಕುಪ್ಪೆಯಲ್ಲಿ ನೂತನ ಟೂಲ್ಸ್ ಫ್ಯಾಬ್ರಿಕ್ ಕಂಪೆನಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
“ನಾನು ಶಾಸಕನಾಗಿದ್ದುಕೊಂಡೇ ನಮ್ಮ ಗ್ರಾಮಗಳಲ್ಲಿ ಒಂದು ಚರಂಡಿ ಅಥವಾ ಒಂದು ರಸ್ತೆ ಮಾಡಲು ಆಗಲ್ಲ. ಕಣ್ಣಿಗೆ ಕಾಣುವಂತಹ ಶಾಲೆಯನ್ನು ಕಟ್ಟುವುದಕ್ಕೆ ಆಗ್ತಿಲ್ಲ” ಎಂದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಶಾಸಕ, ಕಾಂಗ್ರೆಸ್ ಮುಖಂಡ ಎನ್. ವೈ ಗೋಪಾಲಕೃಷ್ಣ ನೋವು ತೋಡಿಕೊಂಡಿದ್ದಾರೆ.


ಭಾಷಣವನ್ನು ಆರಂಭಿಸಿದ ತಕ್ಷಣ ಅವರು ಹೇಳಿದ ಮೊದಲ ಮಾತುಗಳು ಕರ್ನಾಟಕದ ಪ್ರಸ್ತುತ ಪರಿಸ್ಥಿತಿಯನ್ನು ಹೇಳಿದಂತೆ ಇತ್ತು. ” ಶಾಸಕನಾದ ನನಗೆ ನನ್ನ ಕ್ಷೇತ್ರದ ಹಳ್ಳಿಗಳಲ್ಲಿ ಚರಂಡಿ ಅಥವಾ ರಸ್ತೆ ಮಾಡಲು ಸಾಧ್ಯವಾಗುತ್ತಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಈ ಖಾಸಗಿ ಕಂಪೆನಿಯವರು ಇಲ್ಲಿಗೆ ಬಂದು ಇಷ್ಟು ದೊಡ್ಡ ಫ್ಯಾಕ್ಟರಿ ಕಟ್ಟಿ ನಡೆಸುತ್ತಾರೆ ಎಂದರೆ ಅದು ನಮ್ಮ ಪುಣ್ಯ ಎಂದು ಹೇಳಿದರು. ಇವರು ಹೀಗೆ ಇಲ್ಲಿ ಬಂದು ವ್ಯವಹಾರ ಮಾಡುವುದರಿಂದ ಗ್ರಾಮದ 200 ರಿಂದ 300 ಜನರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗ ಸಿಕ್ಕಿದಂತೆ ಆಗುತ್ತದೆ. ಆದರೆ ನಾವು ಶಾಸಕರಾಗಿದ್ದುಕೊಂಡು ಏನು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಎನ್. ವೈ ಗೋಪಾಲಕೃಷ್ಣ ಹೇಳಿದರು.

ರಾಜ್ಯ ಕಾಂಗ್ರೆಸ್ ನಲ್ಲಿ ಹೀಗೆ ಅಸಮಾಧಾನ ಹೊರಹಾಕುತ್ತಿರುವ ಶಾಸಕರಲ್ಲಿ ಇವರು ಮೊದಲನೇಯವರಲ್ಲ. ಹಿರಿಯ ಶಾಸಕ ಬಿ.ಆರ್.ಪಾಟೀಲ ಬಳಿಕ ಕಾಗವಾಡ ಶಾಸಕ ರಾಜು ಕಾಗೆ ಅವರು ತಮ್ಮದೇ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಯವರು ಸಮುದಾಯ ಭವನ ಕಾಮಗಾರಿಗೆ ಸಂಬಂಧಿಸಿದಂತೆ 13 ಕೋಟಿ ರೂಪಾಯಿ ವರ್ಕ್ ಆರ್ಡರ್ ಬಿಡುಗಡೆ ಮಾಡದೇ ಸತಾಯಿಸುತ್ತಿದ್ದಾರೆ. ಇನ್ನೆರಡು ದಿನದಲ್ಲಿ ಸಿಎಂ ಅವರನ್ನು ಭೇಟಿ ಮಾಡಿ ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ ಎಂದು ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತ ತಾವು ವಸತಿ ಹಗರಣದ ಬಗ್ಗೆ ಮಾಡಿರುವ ಆರೋಪದಿಂದ ಹಿಂದೆ ಸರಿಯಲ್ಲ. ನಾನು ಸತ್ಯವನ್ನೇ ಹೇಳಿದ್ದೀನಿ. ನನ್ನ ಹೇಳಿಕೆಗೆ ಈಗಲೂ ಬದ್ಧ ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ, ಶಾಸಕ ಬಿ. ಆರ್. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. “ವಸತಿಗಾಗಿ ಹಣ” ಕುರಿತ ತಮ್ಮ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಪಾಟೀಲ್ ಅವರು “ನನ್ನ ಹೇಳಿಕೆ ಸರಿಯಾಗಿದೆ ಎಂದು ರಾಜು ಕಾಗೆ ಕೂಡ ಹೇಳಿದ್ದಾರೆ. ಇನ್ನು ಹಲವರು ಇದರ ಬಗ್ಗೆ ಮಾತನಾಡುವವರಿದ್ದಾರೆ” ಎಂದರು. ಆ ಮೂಲಕ ಕಾಂಗ್ರೆಸ್ಸಿನಲ್ಲಿ ಇನ್ನು ಹಲವು ಅಸಮಾಧಾನಿತ ಶಾಸಕರು ಇದ್ದಾರೆ ಎನ್ನುವ ಹಿಂಟ್ ನೀಡಿದ್ದಾರೆ. ಇನ್ನು ಬಿ. ಆರ್, ಪಾಟೀಲ್ ಅವರಿಗೆ ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಬೆಂಬಲ ಸೂಚಿಸಿದ್ದಾರೆ. ವಸತಿ ಸಚಿವ ಜಮೀರ್ ತಕ್ಷಣ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್ಸಿನಲ್ಲಿ ಹತಾಶೆ, ಆಕ್ರೋಶದ ಬೇಗುದಿ ಬೇಯುತ್ತಿದೆ. ಯಾವಾಗ ಸ್ಫೋಟವಾಗುತ್ತಿದೆ ಎಂದು ಭಿಜೆಪಿ ಮುಖಂಡರು ಕಾಯುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
TULUNADU NEWS December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
TULUNADU NEWS December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search