• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ…

TULUNADU NEWS Posted On June 27, 2025
0


0
Shares
  • Share On Facebook
  • Tweet It

ರಾಷ್ಟ್ರೀಯ ತನಿಖಾ ದಳ (ಎನ್ ಐಎ) ತಂಡದ ವಕೀಲರು ಎನ್ ಐಎ ವಿಶೇಷ ನ್ಯಾಯಾಲಯದಲ್ಲಿ ನೀಡಿರುವ ಮಾಹಿತಿಯಲ್ಲಿ ಆತಂಕಕಾರಿ ವಿಷಯವೊಂದು ಬೆಳಕಿಗೆ ಬಂದಿದೆ. ಎನ್ ಐಎ ಅಧಿಕಾರಿಗಳು ನೀಡಿರುವ ಮಾಹಿತಿಯಂತೆ ಅವರು ಬಂಧಿಸಿರುವ ಪಿಎಫ್ ಐ ಕಾರ್ಯಕರ್ತರನ್ನು ತೀವ್ರವಾಗಿ ವಿಚಾರಣೆ ನಡೆಸಿದಾಗ ಸುಮಾರು 950 ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುವ ಪಟ್ಟಿ ಸಿದ್ಧವಾಗಿದೆ. ಆದ್ದರಿಂದ ಬಂಧಿಸಲ್ಪಡುವ ಯಾವುದೇ ಪಿಎಫ್ ಐ ಕಾರ್ಯಕರ್ತನಿಗೆ ಜಾಮೀನು ನೀಡುವುದಕ್ಕೆ ಎನ್ ಐಎ ತೀವ್ರ ಆಕ್ಷೇಪ ಸಲ್ಲಿಸಿದೆ.

ಈ ವಿಷಯ ಇನ್ನಷ್ಟು ಮುನ್ನಲೆಗೆ ಬರಲು ಕಾರಣ, ಮೇ 21 ರಂದು ಸುಪ್ರೀಂ ಕೋರ್ಟ್ ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಶ್ರೀನಿವಾಸನ್ ಕೊಲೆಯ ಆರೋಪಿಗಳಿಗೆ ಜಾಮೀನು ಮಂಜೂರು ಮಾಡುವ ವಿಷಯದಲ್ಲಿ ವಿಚಾರಣೆ ನಡೆಯುವಾಗ, ವಾದ- ಪ್ರತಿವಾದ ಆಲಿಸಿದ ನ್ಯಾಯಾಲಯ ” ಒಬ್ಬನೇ ವ್ಯಕ್ತಿ ಕೊಲೆಯಾಗಿರುವುದು. ಅದಕ್ಕೆ ಎಷ್ಟು ಮಂದಿಯನ್ನು ಜೈಲಿಗೆ ಹಾಕುತ್ತೀರಿ” ಎಂದು ಕೇಳಿದೆ.

ಈ ವಿಷಯದಲ್ಲಿ ದೇಶದ ಆಟರ್ನಿ ಜನರಲ್ ಆಫ್ ಇಂಡಿಯಾ (ಎಎಸ್ ಜಿ) ರಾಜಾ ತಾಕರೆ ಅವರು ಆಕ್ಷೇಪ ವ್ಯಕ್ತಪಡಿಸಿ ತಮ್ಮ ವಾದದಲ್ಲಿ “ಪಿಎಫ್ ಐ ಬಳಿ ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುವ ಹಿಟ್ ಲಿಸ್ಟ್ ತಯಾರಾಗಿದೆ. ಇದು ಕೇವಲ ಒಂದು ಕೊಲೆಯ ವಿಷಯ ಮಾತ್ರವಲ್ಲ, ಇದರ ಹಿಂದೆ ಬಹಳ ದೊಡ್ಡ ಪಿತೂರಿ ಕೂಡ ನಡೆಯುತ್ತಿದೆ. ಪಿಎಫ್ ಐ ಮುಖಂಡರಾದ ಯಾಹ್ಯಾ ತಂಗಳ್ ಹಾಗೂ ಅಬ್ದುಲ್ ರಾವುಫ್ ಅವರಿಗೆ ಆರ್ ಎಸ್ ಎಸ್ ಮುಖಂಡ ಶ್ರೀನಿವಾಸನ್ ಕೊಲೆಯ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವ ವಿಷಯ ಮಾತ್ರವಲ್ಲ, ಬಹಳ ದೊಡ್ಡ ವ್ಯಾಪ್ತಿಯಲ್ಲಿ ಈ ಪ್ರಕರಣವನ್ನು ನೋಡಬೇಕು” ಎಂದು ಮನವಿ ಮಾಡಿದರು.

ಇನ್ನು ಎಎಸ್ ಜಿ ತಾಕರೆ ಅವರು ಮುಂದುವರೆದು ” ಆರೋಪಿ ತಂಗಳ್ ಆತನ ವಕೀಲರು ಹೇಳಿದಂತೆ ಕೇವಲ ಪ್ರತಿಭಟನಾಕಾರನಲ್ಲ, ಆತ ಕೊಲೆಯ ಹಿಂದಿನ ಮಾಸ್ಟರ್ ಮೈಂಡ್ ಕೂಡ ಆಗಿದ್ದಾನೆ” ಎಂದು ತಿಳಿಸಿದರು. ಆಪ್ರೋವರ್ ಒಬ್ಬರ ಒಪ್ಪಿತ ದಾಖಲೆಯಲ್ಲಿರುವ ಮಾಹಿತಿಯನ್ನು ಹೇಳಿದ ತಾಕರೆಯವರು ಪಿಎಫ್ ಐ ಕಾರ್ಯಕರ್ತ ಸುಬೈರ್ ಕೊಲೆಯಾದಾಗ, ಪಿಎಫ್ ಐ ಪ್ರತೀಕಾರದ ಕ್ರಮವಾಗಿ ಹಿಂದೂ ಮುಖಂಡನೊಬ್ಬನ ಹತ್ಯೆಗಾಗಿ ಏಳು ತಂಡಗಳನ್ನು ರಚಿಸಿತ್ತು. ಅದರಲ್ಲಿ ತಂಗಳ್ ಹಾಗೂ ರಾವೂಫ್ ಕೂಡ ತಂಡವೊಂದರ ಸದಸ್ಯರಾಗಿದ್ದು, ಆ ತಂಡವೇ ಶ್ರೀನಿವಾಸ್ ಹತ್ಯೆಯ ಸಂಚು ನಡೆಸಿತ್ತು. ಸುಬೈರ್ ಶವ ಇಟ್ಟಿದ್ದ ಆಸ್ಪತ್ರೆಯ ಹೊರಗೆ ಅಷ್ಟೂ ರಣತಂತ್ರಗಳು ನಡೆದಿದ್ದು, ಅದು ಜಾರಿಗೆ ಬಂದಿದೆ. ತಂಗಳ್ ಈ ಹಿಂದೆನೂ ಕೇರಳ ಹೈಕೋರ್ಟಿನ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿರುವ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ ” ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಓಕಾ ಅವರು “ತಂಗಳ್ ಹಾಗೂ ಇತರ ಆರೋಪಿಗಳು ಈ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಹೇಗೆ ಸಾಬೀತುಪಡಿಸುತ್ತೀರಿ. ” ಈ ವ್ಯಕ್ತಿಗಳು ಎಲ್ಲಿಯೋ ಕುಳಿತುಕೊಂಡಿದ್ದರೆ, ಅವರನ್ನೇ ಈ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂದು ಹೇಗೆ ಹೇಳಲು ಸಾಧ್ಯ?” ಎಂದು ಪ್ರಶ್ನಿಸಿದರು. “ಇನ್ನು ಒಬ್ಬ ಮಾತ್ರ ಕೊಲೆಯಾಗಿದ್ದಾನೆ” ಎಂದು ಹೇಳಿದರು.

ಒಟ್ಟಿನಲ್ಲಿ ಈ ಪ್ರಕರಣದಿಂದ ಒಂದೊಂದು ವಿಷಯ ಸ್ಪಷ್ಟವಾಗಿದೆ. ಎನ್ ಐಎ ಬಳಿ ಪಿಎಫ್ ಐ ಸಿದ್ಧಪಡಿಸಿದ ಹಿಟ್ ಲಿಸ್ಟ್ ಇದ್ದು, ಅದರಲ್ಲಿ 950 ಹಿಂದೂ ಮುಖಂಡರ ಹೆಸರು ಇದೆ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
TULUNADU NEWS July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
TULUNADU NEWS July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search