• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!

TULUNADU NEWS Posted On July 1, 2025
0


0
Shares
  • Share On Facebook
  • Tweet It

ಇದು ಕೇರಳದ ಮಲ್ಲಪುರಂನಲ್ಲಿ ನಡೆದ ಹೃದಯ ವಿದ್ರಾವಕ ಘಟನೆ. ಒಂದು ವರ್ಷದ ಮಗುವಿಗೆ ಜಾಂಡಿಸ್ ಬಂದಿತ್ತು. ಆದರೆ ಮಗುವಿನ ಪೋಷಕರು ಇಂದಿನ ಕಾಲದ ಚಿಕಿತ್ಸೆ ನೀಡಲು ಬಯಸಲಿಲ್ಲ. ಅವರು ಆಧುನಿಕ ಚಿಕಿತ್ಸೆ ನೀಡಲು ತಮ್ಮ ಧಾರ್ಮಿಕ ನಂಬಿಕೆ ಒಪ್ಪುತ್ತಿಲ್ಲ. ಆದ್ದರಿಂದ ಚಿಕಿತ್ಸೆ ನೀಡದ ನಿರ್ಧಾರಕ್ಕೆ ಬಂದಿದ್ದರು.

ಆದ್ದರಿಂದ ಎಸೆನ್ ಈರ್ಹಾನ್ ಎನ್ನುವ ಆ ಮಗುವಿಗೆ ಯಾವುದೇ ಚಿಕಿತ್ಸೆ ಸಿಗಲಿಲ್ಲ ಎಂದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. ಮಗುವಿನ ಹೆತ್ತವರಾದ ನವಾಝ್ ಹಾಗೂ ಹೀರಾ ಹರೇರಾ ಕೊಟ್ಟಾಕಲ್ ನಲ್ಲಿ ವಾಸಿಸುತ್ತಿದ್ದು, ಚಿಕಿತ್ಸೆ ಸಿಗದೇ ಮಗು ಜೂನ್ 27 ರಂದು ಮೃತಪಟ್ಟಿದೆ. ಮಗುವಿನ ತಾಯಿ ಆಕ್ಯುಪಂಚರ್ ಪರಿಣಿತರಾಗಿದ್ದಾರೆ. ಅವರು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಇಂದಿನ ಚಿಕಿತ್ಸಾ ಕ್ರಮಗಳ ಬಗ್ಗೆ ವಿರೋಧವನ್ನು ವ್ಯಕ್ತಪಡಿಸುತ್ತಾ ಬಂದಿರುವುದು ಪೊಲೀಸರ ಗಮನಕ್ಕೆ ಬಂದಿದೆ.

ಅದರ ನಂತರ ಸ್ಥಳೀಯಾಡಳಿತದ ಅಧಿಕಾರಿಗಳು ಇವರನ್ನು ವಿಚಾರಿಸಿದಾಗ ಹೊರಗೆ ಬಂದಿರುವ ಮಾಹಿತಿ ನಿಜಕ್ಕೂ ಗಾಬರಿ ಹುಟ್ಟಿಸುವಂತದ್ದು. ಏನೆಂದು ಹೇಳಿದರೆ ಒಂದು ವರ್ಷದ ಮಗುವಿಗೆ ಇಲ್ಲಿಯ ತನಕ ಲಸಿಕೆ ಆಗಿರಲೇ ಇಲ್ಲ.

ಮಗು ಸತ್ತ ತಕ್ಷಣ ಅದರ ಹೆತ್ತವರು ಮಗುವಿನ ದಫನ ಕಾರ್ಯ ನೆರವೇರಿಸಿದ್ದಾರೆ. ಆದರೆ ಮಗುವಿನ ಸಾವಿಗೆ ವೈದ್ಯಕೀಯವಾಗಿ ಅದರ ಕಾಯಿಲೆಯನ್ನು ನಿರ್ಲಕ್ಷಿಸಿದ್ದೇ ಕಾರಣ ಎಂದು ಪೊಲೀಸರಿಗೆ ತಿಳಿದ ನಂತರ ಮಗುವಿನ ಶವವನ್ನು ಮತ್ತೆ ಹೊರಗೆ ತೆಗೆಯಲಾಗಿದೆ. ಪೊಲೀಸರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದು, ಪೋಸ್ಟ್ ಮಾರ್ಟ್ ವರದಿ ಕೈ ಸೇರಿದ ಬಳಿಕ ಮುಂದಿನ ಕಾನೂನು ಪ್ರಕ್ರಿಯೆ ನಡೆಸುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮಗುವಿನ ಹೆತ್ತವರಿಂದ ತಿಳಿದು ಬಂದ ಮಾಹಿತಿಯ ಪ್ರಕಾರ ಮಗುವನ್ನು ಮಳೆಯ ನೀರಿಗೆ ಹಿಡಿದರೆ ಜಾಂಡೀಸ್ ಗುಣಮುಖವಾಗುತ್ತದೆ ಎಂದು ಅವರು ನಂಬಿದ್ದಾರೆ. ಆದರೆ ಹಸುಳೆಗೆ ಈ ವಿಷಯದಲ್ಲಿ ಯಾವುದೇ ಚಿಕಿತ್ಸೆ ನೀಡಲಾಗಿಲ್ಲ ಎನ್ನುವುದು ನಿಜಕ್ಕೂ ಬೇಸರದ ಸಂಗತಿ. ಒಟ್ಟಿನಲ್ಲಿ ವಿದ್ಯಾವಂತರಾದರೆ ಸಾಕಾಗುವುದಿಲ್ಲ. ವಾಸ್ತವ ಮತ್ತು ಪ್ರಸ್ತುತದ ನಡುವೆ ಮನುಷ್ಯ ಬದುಕಬೇಕಾಗಿದೆ ಎನ್ನುವುದು ಸತ್ಯ.

 

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
TULUNADU NEWS June 16, 2026
Najlepsze bonusy i sloty w polskim kasynie online
TULUNADU NEWS May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search