• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?

TULUNADU NEWS Posted On July 3, 2025
0


0
Shares
  • Share On Facebook
  • Tweet It

ದೆಹಲಿಯ ನಾಗರಿಕರು ತಮ್ಮ ಐಷಾರಾಮಿ ರೇಂಜ್ ರೋವರ್ ಮತ್ತು ಇತರ ವಾಹನಗಳನ್ನು ಅತೀ ಕಡಿಮೆ ದರಕ್ಕೆ ಮಾರಬೇಕಾದ ಅನಿವಾರ್ಯ ಪರಿಸ್ಥಿತಿಗೆ ಬಂದು ತಲುಪಿದ್ದಾರೆ. ಯಾಕೆಂದರೆ ಹತ್ತು ವರ್ಷ ದಾಟಿರುವ ಡಿಸೀಲ್ ವಾಹನಗಳಿಗೆ ಹಾಗೂ 15 ವರ್ಷ ದಾಟಿರುವ ಪೆಟ್ರೋಲ್ ವಾಹನಗಳಿಗೆ ಅಲ್ಲಿ ಇನ್ನು ಮುಂದೆ ಇಂಧನ ಸಿಗುವುದಿಲ್ಲ. ಪೆಟ್ರೋಲ್ ಪಂಪ್ ಗಳು ಅಷ್ಟು ಹಳೆಯ ವಾಹನಗಳಿಗೆ ಇಂಧನ ನೀಡಬಾರದಾಗಿ ಅಲ್ಲಿನ ರಾಜ್ಯ ಸರಕಾರ ರಚಿಸಿದೆ. ದೆಹಲಿ ನಗರದಲ್ಲಿ ವಿಪರೀತವಾಗಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಪರಿಣಾಮ ಇಂತಹ ನಿರ್ಧಾರ ಕೈಗೊಳ್ಳಬೇಕಾದ ಒತ್ತಡ ಅಲ್ಲಿ ರಾಜ್ಯ ಸರಕಾರದ ಮುಂದಿತ್ತು.
ಈಗಾಗಲೇ ಪೆಟ್ರೋಲ್ ಪಂಪ್ ಗಳಲ್ಲಿ ಕ್ಯಾಮೆರಾ ಹಾಗೂ ಅಲಾರಾಂ ಅಳವಡಿಸಲಾಗಿದ್ದು, ಬ್ಯಾನ್ ಮಾಡಲ್ಪಟ್ಟಿರುವ ಹಳೆಯ ವಾಹನಗಳಿಗೆ ಇಂಧನ ತುಂಬಿಸಿದರೆ ತಕ್ಷಣ ಅವು ಅದನ್ನು ಸೆರೆಹಿಡಿಯುತ್ತವೆ. ಇನ್ನು ಸರಕಾರದ ಘೋಷಣೆಯನ್ನು ಅನುಷ್ಟಾನ ಮಾಡುವ ತಂಡ ರಚನೆಯಾಗಿದ್ದು, ಕೆಲವು ಪ್ರಮುಖ ಪೆಟ್ರೋಲ್ ಪಂಪ್ ಗಳಲ್ಲಿ ಅದರ ಸದಸ್ಯರು ಉಪಸ್ಥಿತರಿದ್ದು, ಅವರು ಪರಿಶೀಲನೆ ಮಾಡಲಿದ್ದಾರೆ. ಎಐ ಸಾಮರ್ತ್ಯದ ಕ್ಯಾಮೆರಾಗಳನ್ನು ಮತ್ತು ಆಧುನಿಕ ಯಂತ್ರಗಳನ್ನು ಪೆಟ್ರೋಲ್ ಪಂಪ್ ಗಳಲ್ಲಿ ಅಳವಡಿಸಲಾಗಿದ್ದು, ಅದರಿಂದಲೂ ಹಳೆಯ ವಾಹನಗಳಿಗೆ ಇಂಧನ ತುಂಬಿಸಿದರೆ ಮಾಹಿತಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹೋಗುತ್ತದೆ.

ದೆಹಲಿಯಲ್ಲಿ ಸುಮಾರು 350 ಇಂಧನ ಪಂಪ್ ಗಳಲ್ಲಿ ಸರಕಾರ ಸ್ವಯಂ ನಂಬರ್ ಪ್ಲೇಟ್ ಓದಲ್ಪಡುವ ಕ್ಯಾಮೆರಾಗಳನ್ನು ಅಳವಡಿಸಿದ್ದು, ಹಳೆಯದಾದ ವಾಹನಗಳು ಇಂಧನ ತುಂಬಲು ಬಂದರೆ ಅದಕ್ಕೆ ಇಂಧನ ತುಂಬಲು ಸಾಧ್ಯವಿಲ್ಲ ಎನ್ನುವ ಸಂದೇಶ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ. ಸ್ವಯಂಚಾಲಿತ ಹೂಟರ್ ವ್ಯವಸ್ಥೆ ( ಅಗತ್ಯ ಸಂದರ್ಭದಲ್ಲಿ ಶಬ್ದ ಹೊರಡಿಸುವ ಯಂತ್ರ) ಎಲ್ಲಾ ಕಡೆ ಅಳವಡಿಸಲಾಗಿದ್ದು, ಒಂದು ವೇಳೆ ಹಳೆಯ ವಾಹನಗಳು ಆಗಮಿಸಿದರೆ ಅದರ ನಂಬರ್ ಪ್ಲೇಟ್ ಓದಿಯೇ ಅವು ಧ್ವನಿಯನ್ನು ಮೊಳಗಿಸಿ ಇಂಧನ ತುಂಬದಂತೆ ಎಚ್ಚರಿಕೆ ನೀಡುತ್ತವೆ.

ಇದರೊಂದಿಗೆ ಪಂಪ್ ಗಳ ಸಿಬ್ಬಂದಿಗಳಿಗೂ ಅಂತಹ ಹಳೆಯ ವಾಹನಗಳು ಬಂದರೆ ಇಂಧನ ತುಂಬಿಸದಂತೆ ಖಡಕ್ ಸೂಚನೆ ನೀಡಲಾಗಿದೆ. ಇನ್ನು ಕೆಲವು ಸಾರಿಗೆ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿ ಪ್ರಮುಖ ಆಯಕಟ್ಟಿನ ಪಂಪ್ ಗಳಲ್ಲಿ ಕಣ್ಗಾವಲು ಇಟ್ಟಿದ್ದು, ನಿಗಾ ವಹಿಸುವ ವ್ಯವಸ್ಥೆಯೂ ನಡೆದಿದೆ.
ಈಗಾಗಲೇ 2018 ರ ಸುಪ್ರೀಂಕೋರ್ಟ್ ಆದೇಶ ಜಾರಿಯಲ್ಲಿದ್ದು, 10 ವರ್ಷ ದಾಟಿದ ಡಿಸೀಲ್ ವಾಹನಗಳು ಹಾಗೂ 15 ವರ್ಷ ದಾಟಿದ ಪೆಟ್ರೋಲ್ ವಾಹನಗಳು ದೆಹಲಿಯಲ್ಲಿ ಓಡಾಡುವಂತಿಲ್ಲ ಎಂದು ಸೂಚಿಸಲಾಗಿದೆ. ಈಗ ಸರಕಾರ ಅಂತಹ ವಾಹನಗಳಿಗೆ ಇಂಧನವನ್ನೇ ತುಂಬಿಸುವುದಿಲ್ಲ ಎಂದು ಹೇಳಿರುವುದರಿಂದ ಅಂತಹ ವಾಹನಗಳ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಅಷ್ಟು ಹಳೆಯದಾದ ವಾಹನಗಳನ್ನು ಕಡಿಮೆ ದರಕ್ಕೆ ಬೇರೆ ರಾಜ್ಯಗಳಿಗೆ ಮಾರಬೇಕಾದ ಪರಿಸ್ಥಿತಿ ಅವರ ಮುಂದಿದೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
TULUNADU NEWS September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
TULUNADU NEWS September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search