• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?

Tulunadu News Posted On July 7, 2025
0


0
Shares
  • Share On Facebook
  • Tweet It

ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ರಸ್ತೆ ಮಾಡಿಕೊಡಿ ಎಂದು ದಂಬಾಲು ಬಿದ್ದ ರೈತರೊಬ್ಬರ ಮುಂದೆ ಇಂತಹ ಆಯ್ಕೆ ಇಟ್ಟಿದ್ದಾರೆ. “ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಗ್ಯಾರಂಟಿಗಳನ್ನು ಜಾರಿ ತಂದಿದೆ. ನಿಮಗೆ ಅಕ್ಕಿ ಬ್ಯಾಡ, ಇನ್ನೊಂದು ಬ್ಯಾಡ ಅಂದ್ರ ಆ ಹಣದಲ್ಲಿ ರಸ್ತೆ ಅಭಿವೃದ್ಧಿ ಮಾಡೋಣ. ನಿಂಗೆ ರಸ್ತೆ ಬೇಕು ಅಂದ್ರೆ ಅಕ್ಕಿ ಸೇರಿದಂತೆ ಎಲ್ಲವೂ ಬಂದ್ ಆಗುತ್ತಾವ” ಎಂದು ಶಾಸಕರೂ ಆಗಿರುವ ಬಸವರಾಜ್ ರಾಯರೆಡ್ಡಿ ಹೇಳಿದ್ದಾರೆ.

ಅವರು ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಪ್ರೌಢಶಾಲಾ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದ ವೇಳೆ ರೈತರೊಬ್ಬರು ” ನಮ್ಮ ಹೊಲಕ್ಕೆ ಹೋಗುವ ರಸ್ತೆ ಮಾಡಿಕೊಡ್ರೀ” ಎಂದು ಸಿಎಂ ಆರ್ಥಿಕ ಸಲಹೆಗಾರರಿಗೆ ಕೋರಿದರು. ಇಂತಹ ಸಂದರ್ಭದಲ್ಲಿ ಬಸವರಾಜ ಅವರಿಂದ ಇಂತಹ ಉತ್ತರ ಬಂತು. ಈಗ ಅವರು ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂದು ಹೇಳಬಹುದು. ಆದರೆ ಅವರು ಗ್ಯಾರಂಟಿ ಯೋಜನೆ ಜಾರಿಗೆ ಬಂದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇದೆ ಎಂದು ಪರೋಕ್ಷವಾಗಿ ಒಪ್ಪಿಕೊಂಡಂತೆ ಆಯಿತು. ಅವರು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರಾಗಿರುವ ಕಾರಣ ಅವರಿಗೆ ಎಲ್ಲರಿಗಿಂತ ಹೆಚ್ಚಾಗಿ ರಾಜ್ಯದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಅರಿವಿದೆ. ಆದ್ದರಿಂದ ಅವರ ಹೇಳಿಕೆಗೆ ವಿಶೇಷವಾದ ಪ್ರಾತಿನಿಧ್ಯವಿದೆ. ಇದೇ ವೇಳೆ ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ತನಗೆ ಹಾಗೂ ಕೃಷ್ಣ ಭೈರೇಗೌಡರಿಗೆ ಚೆನ್ನಾಗಿ ಗೊತ್ತಿದೆ ಎಂದು ರಾಯರೆಡ್ಡಿಯವರು ಹೇಳುವ ಮೂಲಕ ತಮ್ಮ ಹೇಳಿಕೆಯ ಹಿಂದಿರುವ ವಾಸ್ತವವನ್ನು ಒಪ್ಪಿಕೊಂಡಂತೆ ಆಗಿದೆ.
” ನನಗೆ ಅಕ್ಕಿ ಬೇಡಾ, ಕೇವಲ ರಸ್ತೆಗಳನ್ನು ಮಾಡಿಕೊಡಿ ಎಂದು ನೀವು ಹೇಳಿದರೆ ನಾವು ಅದನ್ನೇ ಮಾಡುತ್ತೇವೆ. ನೀವು ಆಯ್ಕೆ ಮಾಡಿದ್ದನ್ನೇ ಸಿದ್ಧರಾಮಯ್ಯನವರಿಗೆ ಹೇಳಿ, ಜನ ಈ ರೀತಿ ಹೇಳುತ್ತಿದ್ದಾರೆ ಎಂದು ಹೇಳಬೇಕಾಗುತ್ತದೆ, ಹೇಳಲಾ?” ಎನ್ನುವ ಅರ್ಥದಲ್ಲಿ ರಾಯರೆಡ್ಡಿಯವರು ರೈತನಿಗೆ ಕೇಳಿದ್ದಾರೆ.

ಇವರ ಹೇಳಿಕೆ ಎಂತಹ ಸಮಯದಲ್ಲಿ ಹೊರಬಂದಿದೆ ಎಂದರೆ ಸಿದ್ಧರಾಮಯ್ಯ ಈಗಾಗಲೇ ತಮ್ಮದೇ ಪಕ್ಷದ ಶಾಸಕರಿಂದ ಅಭಿವೃದ್ಧಿಗೆ ಹಣ ಕೊಡಿ ಎನ್ನುವ ಒತ್ತಡವನ್ನು ಎದುರಿಸುತ್ತಿರುವಾಗಲೇ ಬಸವರಾಜ ಅವರು ಹಾಕಿರುವ ಬಾಂಬ್ ಮತ್ತೊಮ್ಮೆ ರಾಜ್ಯ ಸರಕಾರದ ಹಣೆಬರಹವನ್ನು ತೆರೆದಿಟ್ಟಿದೆ. ಇದರಿಂದ ವಿಪಕ್ಷ ಭಾರತೀಯ ಜನತಾ ಪಾರ್ಟಿಗೆ ಮತ್ತೊಮ್ಮೆ ಸರಕಾರದ ವಿರುದ್ಧ ಮಾತನಾಡಲು ಅಸ್ತ್ರ ಸಿಕ್ಕಿದಂತೆ ಆಗಿದೆ. ಇತ್ತ ಕಾಂಗ್ರೆಸ್ ಶಾಸಕರ ಅಸಮಾಧಾನವನ್ನು ದೂರ ಮಾಡಲು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲಾ ಅವರು ಕಾಂಗ್ರೆಸ್ ಶಾಸಕರೊಂದಿಗೆ ಸರಣಿ ಸಭೆಗಳನ್ನು ಮಾಡುತ್ತಾ ಇರುವಾಗಲೇ ಇತ್ತ ಆಯಕಟ್ಟಿನ ಸ್ಥಾನಗಳಲ್ಲಿ ಇರುವವರು ಹೀಗೆ ಮಾತನಾಡುತ್ತಾ ಹೋದರೆ ಪಕ್ಷಕ್ಕೆ ತೇಪೆ ಹಾಕುವಾಗಲೇ ಇನ್ನೊಂದೆರಡು ವರ್ಷ ಕಳೆದು ಹೋಗಲಿವೆ ಎನ್ನುವುದು ರಾಜಕೀಯ ಪಂಡಿತರ ಅಂಬೋಣ. ಈ ನಡುವೆ ಸರಕಾರದಿಂದ ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ರಾಯರೆಡ್ಡಿ ಪುನರುಚ್ಚರಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search