• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

Tulunadu News Posted On July 7, 2025
0


0
Shares
  • Share On Facebook
  • Tweet It

ಇದು ನಿಜಕ್ಕೂ ಸೌಹಾರ್ದತೆಯ ಪರಾಕಾಷ್ಟೆ ಎನ್ನಬಹುದು. ಇದು ಇವತ್ತಿನ ದಿನಗಳಲ್ಲಿ ಅತೀ ಅಗತ್ಯವೂ ಹೌದು. ಮುಸ್ಲಿಮರೇ ಇಲ್ಲದ ಕೆಲ ಊರುಗಳಲ್ಲಿ ಹಿಂದೂ ಸಮುದಾಯದ ಮಂದಿ ಭಾನುವಾರ ಅದ್ದೂರಿಯಾಗಿ ಮೊಹರಂ ಆಚರಣೆ ಮೂಲಕ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಇದು ನಡೆದದ್ದು ಶಿವಮೊಗ್ಗ, ಬಳ್ಳಾರಿ, ರಾಉಚೂರು ಹಾಗೂ ಗದಗದಲ್ಲಿ ಎನ್ನುವುದು ವಿಶೇಷ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶೀರಿಹಳ್ಳಿ ತಾಂಡಾದಲ್ಲಿ ಬಂಜಾರ ಸಮಾಜದ ಕೆಲವರು ಅನಾದಿ ಕಾಲದಿಂದಲೂ ಭಕ್ತಿಯಿಂದ ಮೊಹರಂ ಆಚರಿಸಿಕೊಂಡು ಬರುತ್ತಿದ್ದಾರೆ. ಪ್ರತಿ ವರ್ಷ ಕಾಜಾ ಬಂದ ತೀರ್ಸಾ ಎಂಬ ಅಲೆದೇವರನ್ನು ಇಟ್ಟು ಪೂಜಿಸಿ ಅದ್ದೂರಿಯಾಗಿ ಮೆರವಣಿಗೆ ಮಾಡಿ ತಮ್ಮ ಭಕ್ತಿಯನ್ನು ಸಮರ್ಪಿಸುತ್ತಿದ್ದಾರೆ. ಭಾನುವಾರ ನಡೆದ ದೇವರ ಮೆರವಣಿಗೆಯಲ್ಲಿ ಬಂಜಾರ ಸಂಪ್ರದಾಯದಂತೆ ಹಾಡು, ಭಜನೆ ಮಾಡಿ ಆಚರಿಸಲಾಯಿತು. ಈ ಗ್ರಾಮದಲ್ಲಿ ಒಂದೇ ಒಂದು ಮುಸ್ಲಿಂ ಮನೆ ಇಲ್ಲದಿದ್ದರೂ ಈ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತದೆ. ಇನ್ನು ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಮುಷ್ಠಗಟ್ಟೆ, ಗದಗ ಜಿಲ್ಲೆಯ ಕಲ್ಲೂರ ಗ್ರಾಮ, ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಗುಂಟಿ ಗ್ರಾಮದಲ್ಲಿಯೂ ಮುಸ್ಲಿಮರ ಮನೆಗಳಿಲ್ಲದಿದ್ದರೂ ಹಿಂದೂ ಸಮಾಜದ ಜನರೇ ತಮ್ಮ ಇಷ್ಟದೇವರನ್ನು ಪೂಜಿಸಿ ಮೊಹರಂ ಆಚರಿಸಿದ್ದಾರೆ. ಇದು ನಿಜಕ್ಕೂ ಸೌಹಾರ್ದತೆಯ ಸಂಕೇತವಾಗಿದ್ದು, ಮುಂದೆ ಮುಸ್ಲಿಮರು ಕೂಡ ಹಿಂದೂ ಹಬ್ಬಗಳನ್ನು ಆಚರಿಸುವ ಮೂಲಕ ತಾವು ಕೂಡ ವಿಶಾಲ ಹೃದಯಿಗಳು ಎಂದು ತೋರಿಸಿಕೊಡಬಹುದು.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search