• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

Tulunadu News Posted On July 7, 2025
0


0
Shares
  • Share On Facebook
  • Tweet It

ಇದು ನಿಜಕ್ಕೂ ಸೌಹಾರ್ದತೆಯ ಪರಾಕಾಷ್ಟೆ ಎನ್ನಬಹುದು. ಇದು ಇವತ್ತಿನ ದಿನಗಳಲ್ಲಿ ಅತೀ ಅಗತ್ಯವೂ ಹೌದು. ಮುಸ್ಲಿಮರೇ ಇಲ್ಲದ ಕೆಲ ಊರುಗಳಲ್ಲಿ ಹಿಂದೂ ಸಮುದಾಯದ ಮಂದಿ ಭಾನುವಾರ ಅದ್ದೂರಿಯಾಗಿ ಮೊಹರಂ ಆಚರಣೆ ಮೂಲಕ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಇದು ನಡೆದದ್ದು ಶಿವಮೊಗ್ಗ, ಬಳ್ಳಾರಿ, ರಾಉಚೂರು ಹಾಗೂ ಗದಗದಲ್ಲಿ ಎನ್ನುವುದು ವಿಶೇಷ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶೀರಿಹಳ್ಳಿ ತಾಂಡಾದಲ್ಲಿ ಬಂಜಾರ ಸಮಾಜದ ಕೆಲವರು ಅನಾದಿ ಕಾಲದಿಂದಲೂ ಭಕ್ತಿಯಿಂದ ಮೊಹರಂ ಆಚರಿಸಿಕೊಂಡು ಬರುತ್ತಿದ್ದಾರೆ. ಪ್ರತಿ ವರ್ಷ ಕಾಜಾ ಬಂದ ತೀರ್ಸಾ ಎಂಬ ಅಲೆದೇವರನ್ನು ಇಟ್ಟು ಪೂಜಿಸಿ ಅದ್ದೂರಿಯಾಗಿ ಮೆರವಣಿಗೆ ಮಾಡಿ ತಮ್ಮ ಭಕ್ತಿಯನ್ನು ಸಮರ್ಪಿಸುತ್ತಿದ್ದಾರೆ. ಭಾನುವಾರ ನಡೆದ ದೇವರ ಮೆರವಣಿಗೆಯಲ್ಲಿ ಬಂಜಾರ ಸಂಪ್ರದಾಯದಂತೆ ಹಾಡು, ಭಜನೆ ಮಾಡಿ ಆಚರಿಸಲಾಯಿತು. ಈ ಗ್ರಾಮದಲ್ಲಿ ಒಂದೇ ಒಂದು ಮುಸ್ಲಿಂ ಮನೆ ಇಲ್ಲದಿದ್ದರೂ ಈ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತದೆ. ಇನ್ನು ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಮುಷ್ಠಗಟ್ಟೆ, ಗದಗ ಜಿಲ್ಲೆಯ ಕಲ್ಲೂರ ಗ್ರಾಮ, ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಗುಂಟಿ ಗ್ರಾಮದಲ್ಲಿಯೂ ಮುಸ್ಲಿಮರ ಮನೆಗಳಿಲ್ಲದಿದ್ದರೂ ಹಿಂದೂ ಸಮಾಜದ ಜನರೇ ತಮ್ಮ ಇಷ್ಟದೇವರನ್ನು ಪೂಜಿಸಿ ಮೊಹರಂ ಆಚರಿಸಿದ್ದಾರೆ. ಇದು ನಿಜಕ್ಕೂ ಸೌಹಾರ್ದತೆಯ ಸಂಕೇತವಾಗಿದ್ದು, ಮುಂದೆ ಮುಸ್ಲಿಮರು ಕೂಡ ಹಿಂದೂ ಹಬ್ಬಗಳನ್ನು ಆಚರಿಸುವ ಮೂಲಕ ತಾವು ಕೂಡ ವಿಶಾಲ ಹೃದಯಿಗಳು ಎಂದು ತೋರಿಸಿಕೊಡಬಹುದು.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search